‘ಕನ್ನಡ.. ಕನ್ನಡ.. ಅಂತ ಭಯ ಪಡಿಸ್ತೀರಾ, ಅದ್ಕೆ ಪಹಲ್ಗಾಮ್ ಅಟ್ಯಾಕ್..’ ಏನು ಹೇಳಿಬಿಟ್ರಿ ಸೋನು ನಿಗಮ್?

author-image
Veena Gangani
Updated On
ಗಾಯಕ ಸೋನು ನಿಗಮ್‌ಗೆ ಬಿಗ್ ರಿಲೀಫ್‌.. ಆದ್ರೆ ಹೈಕೋರ್ಟ್‌ ಖಡಕ್ ಸೂಚನೆ; ಹೇಳಿದ್ದೇನು?
Advertisment
  • ಭಾಷೆ ಹೇರಿಕೆಯೇ ಪಹಲ್ಗಾಮ್ ದುರಂತಕ್ಕೆ ಕಾರಣನಾ? ಸೋನು ನಿಗಮ್ ಏನಂದ್ರು..?
  • ಗಾಯಕನ ವಿರುದ್ಧ ಕನ್ನಡ ಪರ ಹೋರಾಟಗಾರ ನಾರಾಯಣ ಗೌಡ ಭಾರೀ ಆಕ್ರೋಶ
  • ಕರ್ನಾಟಕದ ಬಗ್ಗೆ ಹೆಮ್ಮೆಯಿಂದ ಮಾತಾಡಿರುವ ಸೋನು ನಿಗಮ್ ವಿವಾದಕ್ಕೆ ಸಿಲುಕಿದ್ದೇಗೆ?

ಬೆಂಗಳೂರು: ಕನ್ನಡ ಹಾಡುಗಳ ಬಗ್ಗೆ, ಕರ್ನಾಟಕದ ಬಗ್ಗೆ ಹೆಮ್ಮೆಯಿಂದ ಮಾತಾಡುತ್ತಲೇ ಗಾಯಕ ಸೋನು ನಿಗಮ್ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ.

publive-image

ಹೌದು, ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಭಾಗವಹಿಸಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿದ್ದಾನೆ. ಆಗ ಅದಕ್ಕೆ ಸೋನು ನಿಗಮ್ ತಮ್ಮ ಹಾಡನ್ನು ಅರ್ಧಕ್ಕೆ ನಿಲ್ಲಿಸಿ, ತಮಗೆ ಕನ್ನಡ ಮೇಲಿರುವ ಪ್ರೀತಿ, ಇಲ್ಲಿನ ಜನರ ಮೇಲಿರುವ ಗೌರವದ ಬಗ್ಗೆ ಹೇಳಿಕೊಂಡಿದ್ದಾರೆ. ಅಲ್ಲದೇ ಮಾತಾಡುವ ಭರದಲ್ಲಿ ಪಹಲ್ಗಾಮ್ ದಾಳಿ ಹಾಗೂ ಕರ್ನಾಟಕದ ಬಗ್ಗೆ ಮಾತಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

publive-image

ಸೋನು ನಿಗಮ್ ಹೇಳಿದ್ದೇನು?

ನಾನು ಬೇರೆ ಬೇರೆ ಭಾಷೆಗಳಲ್ಲಿ ಹಾಡಿದ್ದೇನೆ. ಆದರೆ ದಿ ಬೆಸ್ಟ್ ಸಾಂಗ್ಸ್ ಹಾಡಿರೋದು ಹೆಚ್ಚು ಕನ್ನಡದಲ್ಲಿ. ಕರ್ನಾಟಕಕ್ಕೆ ಬರುವಾಗ ತುಂಬಾ ಖುಷಿಯಾಗುತ್ತೆ. ತುಂಬಾ ಆಸೆಯಿಂದಲೇ ಇಲ್ಲಿ ಬರ್ತೇನೆ. ಸಾಮಾನ್ಯವಾಗಿ ಕನ್ನಡ ಸಾಂಗ್ಸ್ ಹಾಡಿ ಅಂತ ಕೇಳ್ತಾರೆ. ಯಾವುದೇ ಕಾರ್ಯಕ್ರಮಕ್ಕೆ ಹೋದಾಗಲೂ, ಯಾರಾದರೂ ಕನ್ನಡ ಎಂದು ಕೂಗಿದಾಗ ಅವರಿಗಾಗಿ ಒಂದು ಸಾಲು ಕನ್ನಡ ಹಾಡನ್ನಾದರೂ ಹಾಡಿರುತ್ತೇನೆ. ಆದರೆ ಆ ಹುಡುಗ ಕನ್ನಡ, ಕನ್ನಡ ಎಂದು ಕಿರುಚಿಕೊಂಡು ಕೇಳಿದ್ದು ನನಗೆ ಇಷ್ಟವಾಗಲಿಲ್ಲ. ಇದೇ ಕಾರಣದಿಂದ ಪಹಲ್ಗಾಮ್ ದಾಳಿಯಾಗಿದ್ದು ಎಂದು ಹೇಳಿ ವಿವಾದ ಮೈಮೇಲೆ ಎಳೆದುಕೊಂಡರು.

ಇನ್ನೂ, ಸೋನು ನಿಗಮ್ ಮಾತಿಗೆ ಕನ್ನಡ ಪರ ಹೋರಾಟಗಾರ ನಾರಾಯಣ ಗೌಡ ಆಕ್ರೋಶ ಹೊರ ಹಾಕಿದ್ದಾರೆ. ಕನ್ನಡ ಹಾಡುವಂತೆ ಹೇಳಿದ್ದಕ್ಕೂ, ಭಯೋತ್ಪಾದಕರ ದಾಳಿಗೂ ಏನು ಸಂಬಂಧ? ಇವರಿಗೆ ಕನ್ನಡ ಸಿನಿಮಾಗಳಲ್ಲಿ ಅವಕಾಶ ಕೊಡಬಾರದು ಅಂತ ಆಕ್ರೋಶ ಹೊರ ಹಾಕಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment