ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಭಾರೀ ಅಕ್ರಮ
ಇಡೀ ರಾಜ್ಯಾದ್ಯಂತ ಭಾರೀ ಸದ್ದು ಮಾಡಿದ ಮುಡಾ ಹಗರಣ
ನ್ಯೂಸ್ ಫಸ್ಟ್ ವರದಿ ಬೆನ್ನಲ್ಲೇ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ!
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಸೈಟ್ ನೀಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಅಷ್ಟೇ ಅಲ್ಲದೇ ಮುಡಾದಲ್ಲಿ ಸಾವಿರಾರು ಕೋಟಿ ಅವ್ಯವಹಾರದ ಆರೋಪ ಕೂಡ ಕೇಳಿ ಬಂದಿದೆ.
ಇನ್ನು, ಈ ಸುದ್ದಿಯನ್ನು ನ್ಯೂಸ್ಫಸ್ಟ್ ನಿರಂತರ ಪ್ರಸಾರ ಮಾಡುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಇದರ ಪರಿಣಾಮ ಮುಡಾ ಪ್ರಕರಣ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿ ಪಿ.ಎನ್ ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚಿಸಿ ಆದೇಶಿಸಿದೆ. ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿ ನಾಗರಾಜು ಅವರೇ ಆದೇಶ ಹೊರಡಿಸಿದ್ದಾರೆ. ಜತೆಗೆ ಮುಂದಿನ 6 ತಿಂಗಳ ಒಳಗೆ ಸಮಗ್ರ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.
ಈ ಹಿಂದೆಯೇ ಮುಡಾ 50:50 ಸೈಟ್ ಹಂಚಿಕೆ ಹಗರಣದ ಕುರಿತು ನ್ಯೂಸ್ಫಸ್ಟ್ ವರದಿ ಮಾಡಿತ್ತು. ನ್ಯೂಸ್ಫಸ್ಟ್ ವರದಿ ಬೆನ್ನಲ್ಲೇ ಸರ್ಕಾರ ಮುಡಾ ಆಯುಕ್ತರು ಮತ್ತು ಅಧಿಕಾರಿಗಳನ್ನು ಎತ್ತಂಗಡಿ ಮಾಡಿತ್ತು. ಹಾಗೆಯೇ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲೂ ತನಿಖೆಗೆ ಆದೇಶ ಹೊರಡಿಸಿತ್ತು ಸರ್ಕಾರ.
ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್; ನಟ ದರ್ಶನ್ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಭಾರೀ ಅಕ್ರಮ
ಇಡೀ ರಾಜ್ಯಾದ್ಯಂತ ಭಾರೀ ಸದ್ದು ಮಾಡಿದ ಮುಡಾ ಹಗರಣ
ನ್ಯೂಸ್ ಫಸ್ಟ್ ವರದಿ ಬೆನ್ನಲ್ಲೇ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ!
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಸೈಟ್ ನೀಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಅಷ್ಟೇ ಅಲ್ಲದೇ ಮುಡಾದಲ್ಲಿ ಸಾವಿರಾರು ಕೋಟಿ ಅವ್ಯವಹಾರದ ಆರೋಪ ಕೂಡ ಕೇಳಿ ಬಂದಿದೆ.
ಇನ್ನು, ಈ ಸುದ್ದಿಯನ್ನು ನ್ಯೂಸ್ಫಸ್ಟ್ ನಿರಂತರ ಪ್ರಸಾರ ಮಾಡುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಇದರ ಪರಿಣಾಮ ಮುಡಾ ಪ್ರಕರಣ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿ ಪಿ.ಎನ್ ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚಿಸಿ ಆದೇಶಿಸಿದೆ. ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿ ನಾಗರಾಜು ಅವರೇ ಆದೇಶ ಹೊರಡಿಸಿದ್ದಾರೆ. ಜತೆಗೆ ಮುಂದಿನ 6 ತಿಂಗಳ ಒಳಗೆ ಸಮಗ್ರ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.
ಈ ಹಿಂದೆಯೇ ಮುಡಾ 50:50 ಸೈಟ್ ಹಂಚಿಕೆ ಹಗರಣದ ಕುರಿತು ನ್ಯೂಸ್ಫಸ್ಟ್ ವರದಿ ಮಾಡಿತ್ತು. ನ್ಯೂಸ್ಫಸ್ಟ್ ವರದಿ ಬೆನ್ನಲ್ಲೇ ಸರ್ಕಾರ ಮುಡಾ ಆಯುಕ್ತರು ಮತ್ತು ಅಧಿಕಾರಿಗಳನ್ನು ಎತ್ತಂಗಡಿ ಮಾಡಿತ್ತು. ಹಾಗೆಯೇ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲೂ ತನಿಖೆಗೆ ಆದೇಶ ಹೊರಡಿಸಿತ್ತು ಸರ್ಕಾರ.
ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್; ನಟ ದರ್ಶನ್ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ