/newsfirstlive-kannada/media/post_attachments/wp-content/uploads/2023/12/Cm-Siddaramaiah-3.jpg)
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಸೈಟ್ ನೀಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಅಷ್ಟೇ ಅಲ್ಲದೇ ಮುಡಾದಲ್ಲಿ ಸಾವಿರಾರು ಕೋಟಿ ಅವ್ಯವಹಾರದ ಆರೋಪ ಕೂಡ ಕೇಳಿ ಬಂದಿದೆ.
ಇನ್ನು, ಈ ಸುದ್ದಿಯನ್ನು ನ್ಯೂಸ್​ಫಸ್ಟ್​ ನಿರಂತರ ಪ್ರಸಾರ ಮಾಡುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಇದರ ಪರಿಣಾಮ ಮುಡಾ ಪ್ರಕರಣ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿ ಪಿ.ಎನ್​​ ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚಿಸಿ ಆದೇಶಿಸಿದೆ. ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿ ನಾಗರಾಜು ಅವರೇ ಆದೇಶ ಹೊರಡಿಸಿದ್ದಾರೆ. ಜತೆಗೆ ಮುಂದಿನ 6 ತಿಂಗಳ ಒಳಗೆ ಸಮಗ್ರ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.
/newsfirstlive-kannada/media/post_attachments/wp-content/uploads/2024/07/PN-Desai.jpg)
ಈ ಹಿಂದೆಯೇ ಮುಡಾ 50:50 ಸೈಟ್​ ಹಂಚಿಕೆ ಹಗರಣದ ಕುರಿತು ನ್ಯೂಸ್​ಫಸ್ಟ್​​ ವರದಿ ಮಾಡಿತ್ತು. ನ್ಯೂಸ್​ಫಸ್ಟ್​ ವರದಿ ಬೆನ್ನಲ್ಲೇ ಸರ್ಕಾರ ಮುಡಾ ಆಯುಕ್ತರು ಮತ್ತು ಅಧಿಕಾರಿಗಳನ್ನು ಎತ್ತಂಗಡಿ ಮಾಡಿತ್ತು. ಹಾಗೆಯೇ ಐಎಎಸ್​ ಅಧಿಕಾರಿಗಳ ನೇತೃತ್ವದಲ್ಲೂ ತನಿಖೆಗೆ ಆದೇಶ ಹೊರಡಿಸಿತ್ತು ಸರ್ಕಾರ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us