/newsfirstlive-kannada/media/media_files/2025/08/04/bengalore-gandhar-2025-08-04-13-23-31.jpg)
ಮೃತ ಬಾಲಕ ಗಂಧಾರ್
ಬೆಂಗಳೂರು: 13 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಸಿ.ಕೆ.ಅಚ್ಚುಕಟ್ಟುವಿನಲ್ಲಿ ನಡೆದಿದೆ. ಇಷ್ಟು ಚಿಕ್ಕ ವಯಸ್ಸಿನಲ್ಲೇ ಇಂಥ ಕಠಿಣ ನಿರ್ಧಾರ ಎಲ್ಲರಲ್ಲೂ ಆತಂಕವನ್ನುಂಟು ಮಾಡಿದೆ.
ಗಂಧಾರ್, ಆತ್ಮಹತ್ಯೆಗೆ ಶರಣಾದ ಬಾಲಕ. ಈತ 7 ನೇ ತರಗತಿ ಓದುತ್ತಿದ್ದ. ಬೆಳಗ್ಗೆ ಎದ್ದ ತಂದೆ ಬಾಲಕ ಮಲಗಿದ್ದ ರೂಮ್​​ಗೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ‘Forgive Me’ ಎಂದು ಬರೆಯಲಾಗಿರುವ ಡೆತ್ ನೋಟ್ ಸಿಕ್ಕಿದೆ. ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಡೆತ್​ನೋಟ್​ನಲ್ಲಿ ಏನಿದೆ..?
ನಾನು ಮಾಡಿದ ಪಾಪ ಹಾಗೂ ತಪ್ಪನ್ನ ಕ್ಷಮಿಸಿ. ದಯವಿಟ್ಟು ಅಳಬೇಡಿ, ನಾನು ಈಗಾಗಲೇ ಸ್ವರ್ಗದಲ್ಲಿದ್ದೇನೆ. ಮನೆ ಚೆನ್ನಾಗಿರಲಿ ಅಂತಾ ಈ ನಿರ್ಧಾರ ಕೈಗೊಂಡಿದ್ದೇನೆ. ನಂಗೊತ್ತು ನಿಮಗೆ ಕೋಪ ಬರಲು ಕಾರಣನಾಗಿದ್ದೆ. ನನ್ನ ಉದ್ದೇಶ ಸಾವಾಗಿರಲಿಲ್ಲ, ದಯವಿಟ್ಟು ನನ್ನನ್ನು ಕ್ಷಮಿಸಿ. 14 ವರ್ಷ ಖುಷಿಯಾಗಿದ್ದೆ, ಈಗ ಸ್ವರ್ಗದಲ್ಲಿ ಖುಷಿಯಾಗಿದ್ದೇನೆ. ಸ್ನೇಹಿತರೆಲ್ಲರಿಗೂ ಹೇಳಿ, ನಾನು ಖುಷಿಯಾಗಿದ್ದೇನೆ ಎಂದು. ಗುಡ್​ಬಾಯ್ ಅಮ್ಮ ಎಂದು ಪತ್ರ ಬರೆದು ಸಾವಿಗೆ ಶರಣಾಗಿದ್ದಾನೆ.
ಬಾಲಕನ ತಂದೆಯ ಹೆಸರು ಗಣೇಶ್ ಪ್ರಸಾದ್. ಇವರು ಮ್ಯೂಜಿಕ್ ಆರ್ಟಿಸ್ಟ್​. ಹಾಗೂ ತಾಯಿ ಹೆಸರು ಸವಿತಾ, ಇವರು ಜಾನಪದ ಗಾಯಕಿ. ಸವಿತಾ ಅವರು ಕಳೆದ ಶುಕ್ರವಾರ ಕಾರ್ಯಕ್ರಮದ ಮೇಲೆ ಆಸ್ಟ್ರೇಲಿಯಾಗೆ ತೆರಳಿದ್ದಾರೆ. ಹೀಗಾಗಿ ಸವಿತಾ ಬರುವವರೆಗೂ ಮರಣೋತ್ತರ ಪರೀಕ್ಷೆ ನಡೆಸದಿರಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.
ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ ತಿಳಿಯಲು SIT ಒಂದು ದಿನಕ್ಕೆ ಎಷ್ಟು ಲಕ್ಷ ಖರ್ಚು ಮಾಡ್ತಿದೆ ಗೊತ್ತಾ..?
/filters:format(webp)/newsfirstlive-kannada/media/media_files/2025/08/04/bengalore-gandhar-1-2025-08-04-13-27-33.jpg)
ಮೃತ ಬಾಲಕನ ತಂದೆ ಗಣೇಶ್ ಪ್ರಸಾದ್ ಮಾಧ್ಯಮಗಳಿಗೆ ಮಾತನಾಡಿ.. ನಾನು ನನ್ನ ದೊಡ್ಡ ಮಗ ಹಾಗೂ ಗಾಂಧಾರ್ ಮನೆಯಲ್ಲಿದ್ವಿ. ಬೆಳಗ್ಗೆ ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗಲು ಮುಂದಾಗಿದ್ದೆ. ಈ ವೇಳೆ ಆತ ರೂಮ್​ನಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿರೋದು ಗೊತ್ತಾಗಿದೆ. ಆತ ಮನೆ ಹಾಗೂ ಶಾಲೆಯಲ್ಲಿ ತುಂಬಾ ಚೆನ್ನಾಗಿಯೇ ಇದ್ದ ಎಂದು ಗಣೇಶ್ ಪ್ರಸಾದ್ ಕಣ್ಣೀರು ಇಟ್ಟಿದ್ದಾರೆ.
ಇದನ್ನೂ ಓದಿ:ನಾಳೆ BMTC, KSRTC ರಸ್ತೆಗೆ ಇಳಿಯೋದು ಡೌಟು.. ಕುತೂಹಲ ಮೂಡಿಸಿದ ಸಿಎಂ ಸಭೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us