Advertisment

ತಮ್ಮ ಸುಖ ತ್ಯಾಗ ಮಾಡಿದ ತಾಯಿ-ತಂದೆಯನ್ನು ವೃದ್ಧಾಶ್ರಮದಲ್ಲಿ ಕಾಣೋದು ಬೇಸರದ ಸಂಗತಿ: ಕೆವಿಪಿ

ತಾಯಿ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ತಮ್ಮ ಸುಖ ತ್ಯಾಗ ಮಾಡಿದ ತಾಯಿ-ತಂದೆಯರನ್ನು ವೃದ್ಧಾಶ್ರಮ ಕಾಣುವಂತಾಗಿರುವುದು ಬೇಸರದ ಸಂಗತಿ. ಆದರೆ ಬಸವರಾಜ ಹೊರಟ್ಟಿ ಅವರು ತಾಯಿ ಹೆಸರಲ್ಲಿ ಮಾಡುತ್ತಿರುವುದು ಮಾದರಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಶ್ಲಾಘಿಸಿದರು.

author-image
Ganesh Kerekuli
KVP (7)
Advertisment

ಗದಗ: ತಾಯಿ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ತಮ್ಮ ಸುಖ ತ್ಯಾಗ ಮಾಡಿದ ತಾಯಿ-ತಂದೆಯರನ್ನು ವೃದ್ಧಾಶ್ರಮ ಕಾಣುವಂತಾಗಿರುವುದು ಬೇಸರದ ಸಂಗತಿ. ಆದರೆ ಬಸವರಾಜ ಹೊರಟ್ಟಿ ಅವರು ತಾಯಿ ಹೆಸರಲ್ಲಿ ಮಾಡುತ್ತಿರುವುದು ಮಾದರಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಶ್ಲಾಘಿಸಿದರು. 

Advertisment

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ ಸಹಯೋಗದಲ್ಲಿ ಆಯೋಜಿಸಿದ್ದ "ಅವ್ವ ಸೇವಾ ಟ್ರಸ್ಟ್ ಮಾತೋಶ್ರೀ ಗುರವ್ವ ಶಿವಲಿಂಗಪ್ಪ  ಹೊರಟ್ಟಿ ಸ್ಮರಣಾರ್ಥ ದತ್ತಿ ನಿಧಿ ಕಾರ್ಯಕ್ರಮದಲ್ಲಿ "ತನುಜಾ ನಾಯಕ" ಅವರಿಗೆ ದತ್ತಿ ಪ್ರಶಸ್ತಿ  ಪ್ರದಾನ ಮಾಡಿ ಮಾತನಾಡಿದರು. 

ಮಾತೋಶ್ರೀ ಗುರುವ್ವ ಶಿವಲಿಂಗಪ್ಪ ಅವ್ವ ಹೊರಟ್ಟಿ ಈ ಕಾರ್ಯಕ್ರಮದ ನೈತಿಕ ಶಕ್ತಿ ಆಗಿದ್ದಾರೆ. ಈ ತಾಯಿಯ ಕಾಳಜಿ, ಸಂಸ್ಕಾರ ಮತ್ತು ಕನವರಿಕೆಗಳನ್ನು ಅಕ್ಷರಕ್ಕೆ ಇಳಿಸುತ್ತಾ ಇವರ ಹೆಸರಿನ ಪ್ರಶಸ್ತಿ ಸ್ವೀಕರಿಸುತ್ತಿರುವ ಸುನಂದಾ ನಾಯಕ ಅವರ ಆಯ್ಕೆ ಅತ್ಯಂತ ಸೂಕ್ತವಾಗಿದೆ ಎಂದರು.

KVP (5)

ಶರಣರ ಬಾಳನ್ನು ಮರಣದಲ್ಲಿ ಕಾಣು ಎನ್ನುವ ಮಾತೊಂದಿದೆ. ಶರಣರು ಮರಣ ನಂತರವೂ ಜನ‌ ಮಾನಸದಲ್ಲಿ ಬದುಕುತ್ತಾರೆ. ಇವತ್ತಿನ ಈ ಕಾರ್ಯಕ್ರಮವೇ ಅವ್ವ ಗುರವ್ವ ಅವರ ಸಂಸ್ಕಾರ ಮತ್ತು ಚೈತನ್ಯ ಜೀವಂತಿಕೆಗೆ ಸಾಕ್ಷಿಯಾಗಿದೆ ಎಂದು ವಿವರಿಸಿದರು. ಇಂಥಾ ಆದರ್ಶಪ್ರಾಯ ಅವ್ವನವರ ಹೆಸರಿನ ಪ್ರಶಸ್ತಿಗೆ ತನುಜಾ ನಾಯಕ ಅವರನ್ನು ಆಯ್ಕೆ ಮಾಡಿರುವುದು ಹೆಚ್ಚು ಸೂಕ್ತವಾಗಿದೆ.  ಮಹಿಳಾ ಸಂವೇದನೆ, ಕೌಟುಂಬಿಕ ಮೌಲ್ಯಗಳು, ಸಾಮಾಜಿಕ ಜಾಗೃತಿ ಮತ್ತು ಜೀವನ ಪ್ರೀತಿಯನ್ನು ಸಾರುವಂತಹ ಲೇಖನಗಳನ್ನು ನಿರಂತರವಾಗಿ ಬರೆಯುತ್ತಿರುವ ತನುಜಾ ನಾಯಕ ಅವರ "ಸಾಮಾಜಿಕ ನೋಟ" ಇವತ್ತಿನ ಕಿರಿಯ ವೃತ್ತಿವಾಂದವರಿಗೆ ಮಾದರಿಯಾಗಿದ್ದಾರೆ ಎಂದರು. 
ಗ್ರಾಮೀಣ ಪತ್ರಿಕೋದ್ಯಮ ಅಂದ ಕೂಡಲೇ ನನಗೆ ತಕ್ಷಣ ನೆನಪಾಗುವುದು ಪಿ.ಸಾಯಿನಾಥ್ ಅವರು.  ಇವರು ಬರೆದಿರುವ  "Every body loves good drought" ಎನ್ನುವ ಪುಸ್ತಕ "ಗ್ರಾಮೀಣ ಪತ್ರಿಕೋದ್ಯದ ಬೈಬಲ್" ಎಂದು ಕರೆಯಬಹುದು. ಈ ಪುಸ್ತಕ "ಬರ ಅಂದರೆ ಎಲ್ಲರಿಗೂ ಇಷ್ಟ" ಎಂದು ಕನ್ನಡದಲ್ಲೂ ಬಂದಿದೆ. ನಗರ ಕೇಂದ್ರಿತ ಪತ್ರಿಕೋದ್ಯಮ "ಅಭಿವೃದ್ಧಿ" ಎಂದರೆ ಕೇವಲ ಜಿಡಿಪಿ ಬೆಳವಣಿಗೆ  ಅಥವಾ ಷೇರು ಮಾರುಕಟ್ಟೆಯ ಏರಿಳಿತವನ್ನು ಮಾತ್ರ ಅಭಿವೃದ್ಧಿ ಎಂದು ಬಿಂಬಿಸುತ್ತವೆ.

Advertisment

ಆದರೆ ನಿಜವಾದ ಅಭಿವೃದ್ಧಿ ಎಂದರೆ ಗ್ರಾಮೀಣ ಭಾಗದ ಜನರ ಜೀವನಮಟ್ಟ ಸುಧಾರಿಸುವುದು ಮತ್ತು ಗ್ರಾಮೀಣ ಆರ್ಥಿಕತೆ ಬೆಳವಣಿಗೆಯೇ ನಿಜವಾದ ಅಭಿವೃದ್ಧಿ ಎನ್ನುವುದನ್ನು ನಾವು ಮರೆಯಬಾರದು ಎಂದರು.‌ ಕೇಂದ್ರ ಸರ್ಕಾರ ನೋಟು ನಿಷೇಧ ಜಾರಿಗೆ ತಂದಾಗ ನಗರ ಕೇಂದ್ರಿತ ಆರ್ಥಿಕತೆ, ದುಡಿಮೆ ಎಲ್ಲಾ ನೆಲಕಚ್ಚಿತು. ಆದರೆ, ಇಡೀ ದೇಶದ ಆರ್ಥಿಕತೆ ಪೂರ್ತಿ ನೆಲ ಕಚ್ಚದಂತೆ ಕಾಪಾಡಿದ್ದು ನಮ್ಮ ಗ್ರಾಮೀಣ ಆರ್ಥಿಕತೆ.

KVP (4)

ಸಾಸಿವೆ ಡಬ್ಬಿ, ಎಲೆ ಅಡಿಕೆ ಚೀಲದಲ್ಲಿ ಗ್ರಾಮೀಣ ಮಹಿಳೆಯರು ಕಾಪಿಡುವ, ಉಳಿತಾಯ ಮಾಡುವ ಹಣ ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕುಟುಂಬಗಳ ಬದುಕಿಗೆ ಆಸರೆ ಆಗಿದ್ದನ್ನು ನಾವು ನೆನಪಿಸಿಕೊಳ್ಳಬೇಕು ಎಂದರು. 

ಹೀಗಾಗಿ ಭಾರತದ ಗ್ರಾಮೀಣಾಭಿವೃದ್ಧಿಗೆ ಪತ್ರಿಕೋದ್ಯಮ ಸೇತುವೆಯಾಗಿ ಕೆಲಸ ಮಾಡಬೇಕಿದೆ. ಪತ್ರಿಕೋದ್ಯಮವು ಮೇಲ್ಮಟ್ಟದ ಆರ್ಥಿಕ ಪ್ರಗತಿಗಿಂತ ಹೆಚ್ಚಾಗಿ, ಹಳ್ಳಿಗಳ ಜನರ ಆರೋಗ್ಯ, ಶಿಕ್ಷಣ ಮತ್ತು ಕುಡಿಯುವ ನೀರಿನ ಲಭ್ಯತೆಯ ಬಗ್ಗೆ ಗಮನ ಹರಿಸಬೇಕಿದೆ ಎಂದರು. ಮುಖ್ಯಮಂತ್ರಿಗಳು  ಯಾವುದೇ ಜಿಲ್ಲೆಯ KDP ಸಭೆಗಳನ್ನು ನಡೆಸುವಾಗ  ಆಯಾ ಜಿಲ್ಲೆಗಳ ಗ್ರಾಮೀಣ ಬದುಕಿನ ಬಗ್ಗೆ ಪತ್ರಿಕೆಗಳಲ್ಲಿ ಬಂದಿರುವ ವರದಿಗಳನ್ನು ಮೊದಲು ಗಮಿಸುತ್ತಾರೆ. ಇಂಥಾ ಪತ್ರಿಕೆಯಲ್ಲಿ,  ಇಂಥಾ ದಿನ, ಇಂಥಾ ವರದಿ ಬಂದಿದೆ ಎಂದು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಳ್ಳುವುದನ್ನು ನೀವೂ ಗಮನಿಸಿರ್ತೀರಿ. 

Advertisment

ಕಲುಷಿತ ನೀರು ಕುಡಿದು ಸಾವನ್ನಪ್ಪಿದ ವರದಿಗಳು ಸರ್ಕಾರವನ್ನು ಎಚ್ಚರಿಸಿವೆ. ಬೆಳೆರೋಗದ ಬಗ್ಗೆ ಬಂದ ವರದಿಗಳು ಸಾವಿರಾರು ರೈತ ಕುಟುಂಬಗಳಿಗೆ ಪರಿಹಾರ ಒದಗಿಸಲು ನೆರವಾಗಿವೆ. ಹಾಗೆಯೇ ಬರ ಮತ್ತು ಅತಿವೃಷ್ಟಿ ಸಂದರ್ಭದ ವರದಿಗಳು ವಿಧಾನಸೌಧದಲ್ಲಿ ತುರ್ತು ಸಭೆಗಳನ್ನು ನಡೆಸಲು, ತುರ್ತು ಪರಿಹಾರ ಒದಗಿಸಲು ವೇಗವರ್ದಕಗಳಾಗಿ  ನೆರವಾಗಿವೆ ಎಂದರು. 

ಹೀಗಾಗಿ ಪತ್ರಕರ್ತರು, ಪತ್ರಿಕೋದ್ಯಮದ ವಿದ್ಯಾರ್ಥಿಗಳು ಹಳ್ಳಿಗಳಿಗೆ ಹೋಗಿ ಜನರ ಸಂಕಷ್ಟಗಳನ್ನು ಆಲಿಸುವುದು, ಸ್ಟುಡಿಯೋಗಳಲ್ಲಿ ಕುಳಿತು ಚರ್ಚೆ ಮಾಡುವುದಕ್ಕಿಂತ ಹಚ್ಚು ಉಪಯುಕ್ತವಾದುದು ಎನ್ನುವುದನ್ನು ಅರಿಯಬೇಕಿದೆ ಎಂದರು. ಬರಗಾಲ ಮತ್ತು‌ ಅತಿವೃಷ್ಟಿ ಹೆಸರಿನಲ್ಲಿ ಬರುವ ಅನುದಾನ ಹೇಗೆ ದುರುಪಯೋಗವಾಗುತ್ತದೆ ಎನ್ನುವುದನ್ನು ಗ್ರಾಮೀಣ ಪತ್ರಕರ್ತರು ಗಮನಿಸಿ ವರದಿ ಮಾಡಬೇಕು. ಇಂಥಾ ವರದಿಗಳನ್ನು ಮಾನ್ಯ ಮುಖ್ಯಮಂತ್ರಿಗಳು ಬಹಳ ಗಂಭೀರವಾಗಿ ತೆಗೆದುಕೊಳ್ಳುತ್ತಾರೆ.

KVP (6)

ರೈತರು ಆತ್ಮಹತ್ಯೆ ಮಾಡಿಕೊಳ್ಳುವಾಗ, ಭಾರತದ ಕೃಷಿ ವಲಯವು ದೊಡ್ಡ ಬಿಕ್ಕಟ್ಟಿನಲ್ಲಿದ್ದಾಗ, ಗ್ರಾಮೀಣ ಪತ್ರಕರ್ತರು ಸೇನಾನಿಗಳಾಗಿ ನಿಂತು ವರದಿ ಮಾಡಬೇಕು ಎಂದರು. ಗ್ರಾಮೀಣಾಭಿವೃದ್ಧಿಯಲ್ಲಿ ಪತ್ರಿಕೋದ್ಯಮದ ಪಾತ್ರವೆಂದರೆ, ರೈತರ ಆತ್ಮಹತ್ಯೆಯ ಹಿಂದಿನ ನೈಜ ಸಾಲದ ಬಾಧೆಯನ್ನು ಹೊರಹಾಕುವುದು, ಸರ್ಕಾರದ ನೀತಿಗಳು ಕೃಷಿಯ ಮೇಲೆ ಬೀರುತ್ತಿರುವ ದುಷ್ಪರಿಣಾಮಗಳನ್ನು ವಿಶ್ಲೇಶಿಸುವುದಾಗಿದೆ ಎಂದರು. "ಪತ್ರಿಕೋದ್ಯಮವು ಸಮಾಜದ ಕನ್ನಡಿಯಾಗಿದ್ದರೆ, ಆ ಕನ್ನಡಿಯಲ್ಲಿ ಭಾರತದ 70% ಜನಸಂಖ್ಯೆ ಇರುವ ಹಳ್ಳಿಗಳು ಕಾಣಿಸಬೇಕು. 

Advertisment

ಹೀಗಾಗಿ ಇಂಥಾ ವಿಶ್ಲೇಷಣೆಗಳು ಜನರ ಧ್ವನಿಯಾಗಿ ಗ್ರಾಮೀಣ ಭಾರತವನ್ನು ಬೆಳೆಸುಬೇಕು. ಜೊತೆಗೆ ಹಳ್ಳಿಗಳ ಕಲೆ, ಸಂಸ್ಕೃತಿ, ಭಾಷೆ ಮತ್ತು ಅಲ್ಲಿನ ಜನರ ದೈನಂದಿನ ಹೋರಾಟಗಳಿಗೂ ಕನ್ನಡಿ ಹಿಡಿಯಬೇಕು. ಈ ಕನ್ನಡಿಯಲ್ಲಿ ವಿಧಾನಸೌಧದಲ್ಲಿ ಕುಳಿತಿರುವ ಅಧಿಕಾರಿಗಳು ಮುಖ ನೋಡಿಕೊಳ್ಳಬೇಕು ಎಂದರು.  

ಸಭಾಪತಿ ಬಸವರಾಜ ಹೊರಟ್ಟಿ, ದತ್ತಿ ನಿಧಿ ಪ್ರಶಸ್ತಿ ಪುರಸ್ಕೃತ ತನುಜಾ ನಾಯಕ ಸೇರಿ ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮತ್ತು ವಿವಿಯ ಕುಲಸಚಿವರಾದ ಸುರೇಶ್ ನಾಡಗೌಡ  ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

KV Prabhakar
Advertisment
Advertisment
Advertisment