ದರ್ಶನ್​​ ಜಾಮೀನು ರದ್ದು ಆಗ್ತಿದ್ದಂತೆ ಕಣ್ಣೀರಿಟ್ಟ ಪತ್ನಿ ವಿಜಯಲಕ್ಷ್ಮೀ..

ರೇಣುಕಾಸ್ವಾಮಿ ಪ್ರಕರಣದ ಆರೋಪಿ ದರ್ಶನ್ ಅಂಡ್​ ಗ್ಯಾಂಗ್​​ಗೆ ಸಿಕ್ಕಿದ್ದ ಜಾಮೀನು ರದ್ದಾಗಿದೆ. ಇವತ್ತು ಸುಪ್ರೀಂ ಕೋರ್ಟ್​ನಿಂದ ಮಹತ್ವದ ತೀರ್ಪು ಪ್ರಕಟವಾಗಿದ್ದು, 7 ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್​ ನೀಡಿದ್ದ ಜಾಮೀನು ರದ್ದುಗೊಂಡಿದೆ.

author-image
Ganesh Kerekuli
Darshan and vijayalaxmi
Advertisment

ರೇಣುಕಾಸ್ವಾಮಿ ಪ್ರಕರಣದ ಆರೋಪಿ ದರ್ಶನ್ ಅಂಡ್​ ಗ್ಯಾಂಗ್​​ಗೆ ಸಿಕ್ಕಿದ್ದ ಜಾಮೀನು ರದ್ದಾಗಿದೆ. ಇವತ್ತು ಸುಪ್ರೀಂ ಕೋರ್ಟ್​ನಿಂದ ಮಹತ್ವದ ತೀರ್ಪು ಪ್ರಕಟವಾಗಿದ್ದು, 7 ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್​ ನೀಡಿದ್ದ ಜಾಮೀನು  ರದ್ದುಗೊಂಡಿದೆ.   

ಸರ್ವೋಚ್ಛ ನ್ಯಾಯಾಲಯದಿಂದ ತೀರ್ಪು ಹೊರ ಬೀಳುತ್ತಿದ್ದಂತೆಯೇ ದರ್ಶನ್ ಪತ್ನಿ ಕಣ್ಣೀರು ಇಟ್ಟಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ವಿಜಯಲಕ್ಷ್ಮೀ ಅವರು ಹೊಸಕೆರೆ ಹಳ್ಳಿ ಅಪಾರ್ಟ್​​ಮೆಂಟ್​ನಲ್ಲಿದ್ದಾರೆ. ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಭಾವುಕರಾಗಿದ್ದಾರೆ. ತಮ್ಮ ಪತಿ ದರ್ಶನ್ ಪ್ರಕರಣದಲ್ಲಿ ಸಿಲುಕಿದಾಗಿಂದ ಅವರನ್ನು ಬಚಾವ್ ಮಾಡಲು ತುಂಬಾನೇ ಪ್ರಯತ್ನ ಪಟ್ಟಿದ್ದರು. ಕಾನೂನು ಹೋರಾಟ, ದೇವರ ಸೇವೆ ಸೇರಿದಂತೆ ಎಲ್ಲಾ ರೀತಿಯಿಂದಲೂ ಹೋರಾಟ ನಡೆಸುತ್ತಿದ್ದಾರೆ. 

ಇದನ್ನೂ ಓದಿ:ಸುಪ್ರೀಂ ಕೋರ್ಟ್​ ತೀರ್ಪು ಬೆನ್ನಲ್ಲೇ ಎ1 ಆರೋಪಿ ಪವಿತ್ರಾ ಗೌಡ ಅರೆಸ್ಟ್.!

DARSHAN_PAVITRA

ಹೈಕೋರ್ಟ್​ನಿಂದ ಜಾಮೀನು ಕೊಡಿಸಿ ನಿಟ್ಟುಸಿರು ಬಿಟ್ಟಿದ್ದ ವಿಜಯಲಕ್ಷ್ಮಿಗೆ ಇದೀಗ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ದರ್ಶನ್ ಅಂಡ್ ಗ್ಯಾಂಗ್ ಮತ್ತೆ ಜೈಲು ಸೇರಬೇಕಾಗಿದೆ. ದರ್ಶನ್, ಪವಿತ್ರಾಗೌಡ ಹಾಗೂ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರದ ಅರ್ಜಿಯ ಆದೇಶ ಹೊರ ಬಿದ್ದಿದೆ. ಹೈಕೋರ್ಟ್​ ತೀರ್ಪಿನಲ್ಲಿ ದೋಷವಿದೆ ಎಂದು ಸುಪ್ರೀಂ ಕೋರ್ಟ್​ ಹೇಳಿದೆ. ಈ ಪ್ರಕರಣವನ್ನು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ನ್ಯಾಯಾಮೂರ್ತಿ ಮಹಾದೇವನ್ ಪೀಠ ತೀರ್ಪು ನೀಡಿದೆ. 

ಇದನ್ನೂ ಓದಿ: ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು.. ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ​ ಜಾಮೀನು ರದ್ದು

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

Actor Darshan Pavitra Gowda Pavitra Gowda tattoo Darshan bail cancelled
Advertisment