/newsfirstlive-kannada/media/media_files/2025/09/09/rmg_car_accident-2025-09-09-18-42-00.jpg)
ರಾಮನಗರ: ಮೈಸೂರು- ಬೆಂಗಳೂರು ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಗಂಡ ಹೆಂಡತಿ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಚನ್ನಪಟ್ಟಣ ಬಳಿಯ ದೇವರಹೊಸಹಳ್ಳಿ ಬಳಿ ಈ ಘಟನೆ ನಡೆದಿದೆ.
ಕೊಡಗು ಮೂಲದ ಸೋಮಯ್ಯ (73) ಹಾಗೂ ಸರಸ್ವತಿ ( 65) ಸ್ಥಳದಲ್ಲೇ ಜೀವಬಿಟ್ಟಿದ್ದಾರೆ. ಇನ್ನು, ಘಟನೆಯಲ್ಲಿ ಮಗ ಪವನ್ಗೆ ಗಂಭೀರವಾದ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುಟುಂಬದವರು ಕಾರಿನಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದರು. ಈ ವೇಳೆ ಎಕ್ಸ್ಪ್ರೆಸ್ ವೇನಲ್ಲಿ ನಿಂತಿದ್ದ ಟ್ರಕ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ.
ಇದನ್ನೂ ಓದಿ: Asia Cup; ಹ್ಯಾಂಡ್ಶೇಕ್ ಮಾಡದ ಪಾಕ್ ಕ್ಯಾಪ್ಟನ್.. ಆದ್ರೆ ಸೂರ್ಯಕುಮಾರ್ನ ಮೆಚ್ಚಲೇಬೇಕು!
ಈ ಭೀಕರ ಘಟನೆಯಲ್ಲಿ ಗಂಡ ಹೆಂಡತಿ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಇವರ ಮಗ ಪವನ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ