/newsfirstlive-kannada/media/media_files/2025/09/09/rmg_car_accident-2025-09-09-18-42-00.jpg)
ರಾಮನಗರ: ಮೈಸೂರು- ಬೆಂಗಳೂರು ಎಕ್ಸ್​ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಗಂಡ ಹೆಂಡತಿ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಚನ್ನಪಟ್ಟಣ ಬಳಿಯ ದೇವರಹೊಸಹಳ್ಳಿ ಬಳಿ ಈ ಘಟನೆ ನಡೆದಿದೆ.
ಕೊಡಗು ಮೂಲದ ಸೋಮಯ್ಯ (73) ಹಾಗೂ ಸರಸ್ವತಿ ( 65) ಸ್ಥಳದಲ್ಲೇ ಜೀವಬಿಟ್ಟಿದ್ದಾರೆ. ಇನ್ನು, ಘಟನೆಯಲ್ಲಿ ಮಗ ಪವನ್​ಗೆ ಗಂಭೀರವಾದ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುಟುಂಬದವರು ಕಾರಿನಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದರು. ಈ ವೇಳೆ ಎಕ್ಸ್​ಪ್ರೆಸ್ ವೇನಲ್ಲಿ ನಿಂತಿದ್ದ ಟ್ರಕ್​ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ.
/filters:format(webp)/newsfirstlive-kannada/media/media_files/2025/09/09/rmg_car_accident_1-2025-09-09-18-42-13.jpg)
ಈ ಭೀಕರ ಘಟನೆಯಲ್ಲಿ ಗಂಡ ಹೆಂಡತಿ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಇವರ ಮಗ ಪವನ್​ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us