/newsfirstlive-kannada/media/media_files/2025/08/14/darshan-and-pavitra-gowda-2025-08-14-20-26-50.jpg)
ಸುಪ್ರೀಂ ಕೋರ್ಟ್ ದರ್ಶನ್ ಅಂಡ್ ಗ್ಯಾಂಗ್ಗೆ ನೀಡಲಾಗಿದ್ದ ಜಾಮೀನನ್ನು ರದ್ದು ಮಾಡಿದೆ. ಪರಿಣಾಮ ಮತ್ತೆ ರೇಣುಕಾಸ್ವಾಮಿ ಪ್ರಕರಣದ ಪ್ರಮುಖ 7 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ.
ಇಂದು ಮಧ್ಯಾಹ್ನದ ವೇಳೆಗೆ ಎರಡನೇ ಆರೋಪಿ ದರ್ಶನ್ ಹಾಗೂ ಮೊದಲ ಆರೋಪಿ ಪವಿತ್ರ ಗೌಡ ಸೇರಿ ಒಟ್ಟು 7 ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಪವಿತ್ರ ಗೌಡ, ದರ್ಶನ್, ಪ್ರದೂಷ್, ಲಕ್ಷ್ಮಣ, ನಾಗರಾಜ್ನನ್ನು ನ್ಯಾಯಾಧೀಶ ಮುಂದೆ ಹಾಜರುಪಡಿಸಲಾಯಿತು.
ಇದನ್ನೂ ಓದಿ: Breaking ರೇಣುಕಾಸ್ವಾಮಿ ಪ್ರಕರಣದ ಆರೋಪಿ ದರ್ಶನ್ ಮತ್ತೆ ಅರೆಸ್ಟ್
ಬೆಂಗಳೂರಿನ 64ನೇ ಸಿಟಿ ಸಿವಿಲ್ ಕೋರ್ಟ್ನ ನ್ಯಾಯಾಧೀಶ ನ್ಯಾ.ಈರಪ್ಪಣ್ಣ ಪವಡಿ ನಾಯ್ಕ್ ಮುಂದೆ ಐವರು ಆರೋಪಿಗಳನ್ನು ಹಾಜರುಪಡಿಸಿದ್ದರು. ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋಗಲಾಗಿದೆ. ಆ ಮೂಲಕ ದರ್ಶನ್ ಮೂರನೇ ಬಾರಿಗೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಎರಡನೇ ಬಾರಿಗೆ ಜೈಲಿಗೆ ಸೇರಿದ್ರೆ, ಪತ್ನಿ ಮೇಲೆ ಹಲ್ಲೆ ನಡೆಸಿ ಮೊದಲ ಬಾರಿಗೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರು.
ಇದನ್ನೂ ಓದಿ: ನಟ ದರ್ಶನ್ ಅಂಡ್ ಗ್ಯಾಂಗ್ ಜಾಮೀನು ರದ್ದುಪಡಿಸಿದ ಆದೇಶದಲ್ಲಿ ಸುಪ್ರೀಂ ಕೋರ್ಟ್ ಹೇಳಿದ್ದೇನು ಗೊತ್ತಾ? ಕಂಪ್ಲೀಟ್ ಮಾಹಿತಿ
ಮತ್ತಿಬ್ಬರು ಆರೋಪಿಗಳಾದ ಜಗದೀಶ್ ಹಾಗೂ ಅನುಕುಮಾರ್ನನ್ನು ನಾಳೆ ಬೆಳಗ್ಗೆ ನ್ಯಾಯಾಲಯದ ಮುಂದೆ ಹಾಜರುಪಡಿಸುತ್ತಾರೆ. ಈ ಇಬ್ಬರನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿದ್ದು, ಬೆಂಗಳೂರಿನತ್ತ ಕರೆದುಕೊಂಡು ಬರಲಾಗುತ್ತಿದೆ.
ಸುಪ್ರೀಂ ಕೊರ್ಟ್ನಿಂದ ಮಹತ್ವ ತೀರ್ಪು..
ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ, ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಇದೀಗ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ನಟ ದರ್ಶನ್, ಪವಿತ್ರಾ ಗೌಡ ಹಾಗೂ 7 ಆರೋಪಿಗಳ ಜಾಮೀನು ಅನ್ನು ರದ್ದು ಮಾಡಿದೆ.
ಇದನ್ನೂ ಓದಿ: ಪೂಜೆ ಮಾಡಿ ಅಮ್ಮನ ತಬ್ಬಿ ಕಣ್ಣೀರಿಟ್ಟ ಪವಿತ್ರ ಗೌಡ.. ಅರೆಸ್ಟ್ ಮಾಡುವ ಮುನ್ನ ನಡೆದಿದ್ದು ಏನು..?
ಇವತ್ತು ಸುಪ್ರೀಂ ಕೋರ್ಟ್ನಲ್ಲಿ ರೇಣುಕಾಸ್ವಾಮಿ ಪ್ರಕರಣದ ಆರೋಪಿ ದರ್ಶನ್, ಪವಿತ್ರಾಗೌಡ ಹಾಗೂ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರದ ಅರ್ಜಿಯ ಆದೇಶ ಹೊರ ಬಿದ್ದಿದೆ. ಹೈಕೋರ್ಟ್ ತೀರ್ಪಿನಲ್ಲಿ ದೋಷವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಪ್ರಕರಣವನ್ನು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ನ್ಯಾಯಾಮೂರ್ತಿ ಮಹಾದೇವನ್ ಪೀಠ ತೀರ್ಪು ನೀಡಿದೆ. ಜಾಮೀನು ರದ್ದು ಹಿನ್ನೆಲೆಯಲ್ಲಿ ಆರೋಪಿಗಳಾದ ದರ್ಶನ್, ಪವಿತ್ರ ಗೌಡ, ಪ್ರದೂಷ್, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಹಾಗೂ ಜಗದೀಶ್ ಮತ್ತೆ ಜೈಲು ಸೇರಬೇಕಾಗಿದೆ.
ಇದನ್ನೂ ಓದಿ:ಅಂದು ಜೈಲಿನಲ್ಲಿದ್ದಾಗ ಸಾರಥಿ ಸಿನಿಮಾ ರಿಲೀಸ್, ಈಗ ಡೆವಿಲ್ ರಿಲೀಸ್ ಸಾಧ್ಯತೆ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ