ತಂದೆ, ತಾಯಿ ಪ್ರೀತಿ ಸಿಗದೇ ಬಾಲಕಿ ಆತ್ಮಹತ್ಯೆ ! : ವಿಧಿಬರಹ ಘೋರ, ಅತಿ ಘೋರ

ಬೆಂಗಳೂರಿನಲ್ಲಿ ಹೊಸ ವರ್ಷದಂದೇ ಬಾಳಿ ಬದುಕಬೇಕಾಗಿದ್ದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೌಟುಂಬಿಕ ಕಲಹದಿಂದ ತಂದೆ ತಾಯಿ ಬೇರೆಯಾಗಿದ್ದರು. ಇದರಿಂದ ತನಗೆ ತಂದೆ, ತಾಯಿ ಪ್ರೀತಿ ಸಿಗುತ್ತಿಲ್ಲ ಎಂದು ನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

author-image
Chandramohan
Girl committs suicide in bangalore

ಆತ್ಮಹತ್ಯೆಗೆ ಶರಣಾದ ಲೇಖನಾ ಎಂಬ ಬಾಲಕಿ

Advertisment
  • ಆತ್ಮಹತ್ಯೆಗೆ ಶರಣಾದ ಲೇಖನಾ ಎಂಬ ಬಾಲಕಿ
  • ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
  • ತಂದೆ, ತಾಯಿ ಪ್ರೀತಿ ಸಿಗುತ್ತಿಲ್ಲ ಎಂದು ನೊಂದು ಆತ್ಮಹತ್ಯೆ!

ತಂದೆ ತಾಯಿಯ ಪ್ರೀತಿ ಸಿಗದೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. …ಲೇಖನಾ (17) ಆತ್ಮಹತ್ಯೆಗೆ ಶರಣಾದ ಬಾಲಕಿ. … ನಿನ್ನೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ…ಮಾಡಿಕೊಂಡಿದ್ದಾರೆ. ಮೃತದೇಹವನ್ನು  ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನೆ…ಮಾಡಲಾಗಿದೆ.  ಲೇಖನಾ 10 ನೇ ತರಗತಿ ಅನುತ್ತೀರ್ಣಳಾಗಿ ಮನೆಯಲ್ಲಿಯೇ ಇದ್ದಳು. ತಂದೆ - ತಾಯಿ‌ ಕೌಟುಂಬಿಕ ಕಲಹದಿಂದ ದೂರವಾಗಿದ್ದರು. ತಂದೆ ಬೇರೆ ಕಡೆ ವಾಸವಿದ್ರೆ ಲೇಖನಾ ತಾಯಿ‌ ಜೊತೆಗೆ ವಾಸವಿದ್ದಳು. 
ನನಗೆ ತಂದೆ-ತಾಯಿ‌ ಪ್ರೀತಿ ಸಿಗುತ್ತಿಲ್ಲ. ನಾನು ಒಂಟಿ ಎಂಬ ಭಾವನೆ ಕಾಡುತ್ತಿದೆ.  ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದು ಲೇಖನಾ  ಸೂಸೈಡ್ ಮಾಡಿಕೊಂಡಿದ್ದಾಳೆ. ಚನ್ನಮ್ಮನಕೆರೆ  ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

girl suicide
Advertisment