/newsfirstlive-kannada/media/media_files/2026/03/09/bengaluru-stock-market-2026-03-09-13-33-26.jpg)
ಬೆಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹಣ ಡಬಲ್​ ಆಗುತ್ತದೆ ಅಂತಾ ವ್ಯಕ್ತಿಯೊಬ್ಬ ಹೂಡಿಕೆ ಮಾಡಿ ಸಾಲದ ಸುಳಿಯಲ್ಲಿ ಸಿಲುಕಿ ಕೊನೆಗೆ ಜೀವವನ್ನೇ ಬಿಟ್ಟ ದಾರುಣ ಘಟನೆ ನಡೆದಿದೆ. ಹಣದ ಆಸೆಗೆ ಹೂಡಿಕೆ ಮಾಡಿ ಇದೀಗ ಕುಟುಂಬಕ್ಕೆ ಆಧಾರವಾಗಿದ್ದ ಈ ವ್ಯಕ್ತಿ ಇಲ್ಲವಾಗಿದ್ದಾನೆ.
ಏನಿದು ಪ್ರಕರಣ ?
ಇದನ್ನೂ ಒದಿ : ನೈಟ್ ಜಾಲಿ ರೈಡ್​ಗೆ ತೆರಳಿದ್ದಾಗ ಭೀಕರ ಅಪಘಾತ.. ಇಬ್ಬರು ಯುವಕರು ಬಲಿ
/filters:format(webp)/newsfirstlive-kannada/media/media_files/2026/03/09/bengluru-venkatesh-2026-03-09-13-11-38.jpg)
ಹಣ ಹೂಡಿಕೆ ಮಾಡಿ ಲಾಸ್ ಆಗಿ ಸಾಲ ಮಾಡಿಕೊಂಡ ವ್ಯಕ್ತಿಯೊಬ್ಬ ಹೆಬ್ಬಾಳ ಬಳಿಯಿರುವ ರೈಲ್ವೆ ಟ್ರ್ಯಾಕ್​ಗೆ ತಲೆಕೊಟ್ಟು ಸೂ*ಸೈಡ್ ಮಾಡಿಕೊಂಡ ಘಟನೆ ವರದಿಯಾಗಿದೆ. ಶ್ರೀರಾಂಪುರ ನಿವಾಸಿಯಾಗಿದ್ದ ವೆಂಕಟೇಶ್ ಮೃತಪಟ್ಟ ವ್ಯಕ್ತಿಯಾಗಿದ್ದು, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ದ ಎನ್ನಲಾಗಿದೆ.
ಈ ವೇಳೆ ಷೇರು ಮಾರುಕಟ್ಟೆಯಲ್ಲಿ ನಷ್ಟ ಅನುಭವಿಸಿ ಮೈತುಂಬಾ ಸಾಲ ಮಾಡಿಕೊಂಡಿದ್ದರು. ಸಾಲಗಾರರ ಕಾಟ ಹೆಚ್ಚಾಗಿ ಆರ್ಥಿಕ ಹಿನ್ನಡೆಯಾಗಿದ್ದರಿಂದ ಚಿಂತಿತನಾಗಿದ್ದ ವೇಂಕಟೇಶ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದ್ರಿಂದ ಮನನೊಂದು ಟ್ರೇನ್​ಗೆ ತಲೆಕೊಟ್ಟು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us