/newsfirstlive-kannada/media/media_files/2025/09/10/water-2025-09-10-14-13-55.jpg)
ಬೆಂಗಳೂರು: ಕಾವೇರಿ ನೀರು ಸರಬರಾಜು ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15, 16 ಮತ್ತು 17 ರಂದು ಕಾವೇರಿ ನೀರು ಪೂರೈಕೆ ಸ್ಥಗಿತವಾಗಲಿದೆ. ಸಾರ್ವಜನಿಕರು ಮುಂಚಿತವಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಜಲಮಂಡಳಿ ಮನವಿ ಮಾಡಿದೆ. ಈ ಕುರಿತು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾದ್ ಮೋಹನ್ ಮಾಹಿತಿ ನೀಡಿದ್ದಾರೆ.
ಎಲ್ಲೆಲ್ಲಿ ಯಾವಾಗ ನೀರು ಬಂದ್?
- ಕಾವೇರಿ ಹಂತ 1, 2, 3, 4 ರಲ್ಲಿ: ಸೆಪ್ಟೆಂಬರ್ 16ರ ಬೆಳಗ್ಗೆ 6 ಗಂಟೆಯಿಂದ ಸೆಪ್ಟೆಂಬರ್ 17 ರ ಬೆಳಗ್ಗೆ 6 ಗಂಟೆಯ ವರೆಗೆ, ಒಟ್ಟು 24 ಗಂಟೆಗಳ ಕಾಲ ನೀರು ಸ್ಥಗಿತವಾಗಲಿದೆ.
- ಕಾವೇರಿ 5ನೇ ಹಂತದಲ್ಲಿ: ಸೆಪ್ಟೆಂಬರ್ 15 ರ ಬೆಳಗ್ಗೆ 1 ಗಂಟೆಯಿಂದ ಸೆಪ್ಟೆಂಬರ್ 17 ರ ಮಧ್ಯಾಹ್ನ 1 ಗಂಟೆಯವರೆಗೆ ನೀರು ಸರಬರಾಜು ಸ್ಥಗಿತವಾಗಲಿದೆ.
- ಒಟ್ಟು 5 ಹಂತಗಳಲ್ಲಿ ಸುಮಾರು 60 ಗಂಟೆಗಳ ಕಾಲ ನೀರು ಸರಬರಾಜು ಸ್ಥಗಿತವಾಗಲಿದೆ.
ಇದನ್ನೂ ಓದಿ:ಅಹೋರಾತ್ರಗೆ 15 ದಿನ ಜೈಲು ಶಿಕ್ಷೆ; ವಶಕ್ಕೆ ಪಡೆದ ಕೋರ್ಟ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ