Advertisment

ಕರ್ನಾಟಕಕ್ಕೆ ಹವಾಮಾನ ಇಲಾಖೆ ಮತ್ತೆ ಎಚ್ಚರಿಕೆ..! ಎಷ್ಟು ದಿನ ಮಳೆ?

ರಾಜ್ಯದಲ್ಲಿ ವರುಣನ ಆರ್ಭಟ ಕೊಂಚ ತಗ್ಗಿದ ಬೆನ್ನಲ್ಲೇ ಮತ್ತೆ ಮಳೆ ಶುರುವಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರ ಮಳೆಯಾಗಲಿದೆ. ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ.

author-image
Ganesh Kerekuli
bengalore rain (2)
Advertisment

ಬೆಂಗಳೂರು: ಸ್ವಲ್ವ ಬ್ರೇಕ್​​ ತಗೊಂಡಿದ್ದ ವರುಣದೇವ ಮತ್ತೆ ಆರ್ಭಟಿಸಲು ಮುಂದಾಗಿದ್ದಾನೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆಯಾಗಲಿದ್ದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisment

ಎಲ್ಲೆಲ್ಲಿ ಮಳೆಯಾಗಲಿದೆ?

ಕರ್ನಾಟಕದಾದ್ಯಂತ ಮತ್ತೆ ಮಳೆ ಶುರುವಾಗಿದ್ದು, ಕೆಲವೆಡೆ ಅವಾಂತರಗಳೇ ಸೃಷ್ಟಿಯಾಗಿವೆ. ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕ ಭಾಗಗಳಲ್ಲಿ ಮುಂಗಾರು ಚುರುಕಾಗಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

karnataka rain222

ಅದರಂತೆ ಇಂದಿನಿಂದ ಸೆಪ್ಟೆಂಬರ್​ 27ರವರೆಗೆ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು ಉಡುಪಿ ಜಿಲ್ಲೆಯಾದ್ಯಂತ ನೆನ್ನೆ ರಾತ್ರಿ ಧಾರಾಕಾರ ಮಳೆಯಾಗಿದೆ. ತಾಪಮಾನ ಏರಿಕೆ, ಹವಾಮಾನ ವೈಪರಿತದಿಂದಾಗಿ ಉಡುಪಿ ಜಿಲ್ಲೆಯಲ್ಲಿ ಮಳೆಯಾಗಿದೆ. ಬೆಳಗ್ಗೆಯಿಂದ ಮೋಡ ಮುಸುಕಿದ ವಾತಾವರಣ ಇದ್ದು ಮಳೆ ಮುಂದುವರೆಯುವ ಸಾಧ್ಯತೆಯಿದೆ.

Advertisment

ಇದನ್ನೂ ಓದಿ : ಇವತ್ತು ಮತ್ತೊಂದು ತೀರ್ಪು ಹೊರ ಬೀಳಲಿದೆ.. ದರ್ಶನ್​​ಗೆ ಸಿಗುತ್ತಾ ಜೈಲಿನಲ್ಲಿ ನೆಮ್ಮದಿ..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

udupi rain Heavy Rain Bengaluru rain News
Advertisment
Advertisment
Advertisment