ಬೆಂಗಳೂರಿನಲ್ಲಿ ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ! ವಿಡಿಯೋ ವೈರಲ್

ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮತ್ತು ರೋಡ್ ರೇಜ್ ಪ್ರಕರಣಗಳು ಮಿತಿಮೀರುತ್ತಿವೆ ಎಂಬುದಕ್ಕೆ ಮತ್ತೊಂದು ಆಘಾತಕಾರಿ ಸಾಕ್ಷಿ ಸಿಕ್ಕಿದೆ. ಜನನಿಬಿಡವಾದ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿ ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ವ್ಯಕ್ತಿಯೊಬ್ಬರನ್ನು ಎಳೆದೊಯ್ಯಲಾಗಿದೆ.

author-image
Ganesh Kerekuli
bengaluru car
Advertisment

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮತ್ತು ರೋಡ್ ರೇಜ್ (Road Rage) ಪ್ರಕರಣಗಳು ಮಿತಿಮೀರುತ್ತಿವೆ ಎಂಬುದಕ್ಕೆ ಮತ್ತೊಂದು ಆಘಾತಕಾರಿ ಸಾಕ್ಷಿ ಸಿಕ್ಕಿದೆ. ಜನನಿಬಿಡವಾದ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿ (Old Airport Road), ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ವ್ಯಕ್ತಿಯೊಬ್ಬರನ್ನು ಎಳೆದೊಯ್ಯಲಾಗಿದೆ. ಈ ದೃಶ್ಯವನ್ನು ಕಂಡ ಸಾರ್ವಜನಿಕರು ಮತ್ತು ವಾಹನ ಸವಾರರು ಬೆಚ್ಚಿಬಿದ್ದಿದ್ದಾರೆ.

ಘಟನೆಯ ವಿವರ 

ರಸ್ತೆ ತುಂಬೆಲ್ಲಾ ವಾಹನಗಳಿದ್ದರೂ, ಅದ್ಯಾವುದನ್ನೂ ಲೆಕ್ಕಿಸದೆ ಕೆಂಪು ಬಣ್ಣದ ಮಾರುತಿ ಸುಜುಕಿ XL6 ಕಾರಿನ ಚಾಲಕ ಅತಿರೇಕದ ವರ್ತನೆ ತೋರಿದ್ದಾನೆ. ಕಾರಿನ ಬಾನೆಟ್ ಮೇಲೆ ವ್ಯಕ್ತಿಯೊಬ್ಬರು ಮಲಗಿದ್ದು, ವಾಹನ ನಿಲ್ಲಿಸುವಂತೆ ಜೋರಾಗಿ ಕೂಗಿಕೊಳ್ಳುತ್ತಿದ್ದಾರೆ. "ನಿಲ್ಲಿಸು, ನಿಲ್ಲಿಸು" ಎಂದು ಎಷ್ಟೇ ಅಂಗಲಾಚಿದರೂ, ಚಾಲಕ ಮಾತ್ರ ಕಾರನ್ನು ನಿಲ್ಲಿಸದೆ ವೇಗವಾಗಿ ಮುನ್ನುಗ್ಗಿದ್ದಾನೆ.

ಇದನ್ನೂ ಓದಿ: ಭಾರತ್ ಬಂದ್​ಗೆ ನೀರಸ ಪ್ರತಿಕ್ರಿಯೆ; ಕಾರ್ಮಿಕ ಸಂಘಟನೆಗಳ 11 ಬೇಡಿಕೆಗಳೇನು?

ವೈರಲ್ ಆಗಿರುವ ವಿಡಿಯೋದಲ್ಲಿ ಕಂಡುಬರುವಂತೆ, ಕಾರು ವೇಗವಾಗಿ ಚಲಿಸುತ್ತಿದ್ದಾಗ ಪಕ್ಕದಲ್ಲೇ ಲಾರಿಗಳು ಮತ್ತು ಆಟೋಗಳು ಸಂಚರಿಸುತ್ತಿದ್ದವು. ಬಾನೆಟ್ ಮೇಲೆ ಇದ್ದ ವ್ಯಕ್ತಿ ಭಯಭೀತರಾಗಿ ಗಟ್ಟಿಯಾಗಿ ಹಿಡಿದುಕೊಂಡಿದ್ದರು. ಸ್ವಲ್ಪ ಯಾಮಾರಿದ್ದರೂ ಅವರು ರಸ್ತೆಗೆ ಬಿದ್ದು, ಹಿಂದಿನಿಂದ ಬರುತ್ತಿದ್ದ ವಾಹನಗಳ ಚಕ್ರಕ್ಕೆ ಸಿಲುಕುವ ಸಾಧ್ಯತೆ ದಟ್ಟವಾಗಿತ್ತು. ಇದನ್ನು ಕಂಡ ಇತರೆ ವಾಹನ ಸವಾರರು ಕೂಡ ಆತಂಕಗೊಂಡಿದ್ದರು.

ಅಷ್ಟಕ್ಕೂ ಅಲ್ಲಿ ನಡೆದಿದ್ದೇನು?

ಬೆಂಗಳೂರು ಸಂಚಾರ ಪೊಲೀಸರ (Bengaluru Traffic Police) ಮಾಹಿತಿ ಪ್ರಕಾರ, ಈ ಘಟನೆಗೆ ಮೂಲ ಕಾರಣ ಚಿಕ್ಕ ಅಪಘಾತ. ಆರೋಪಿ ಚಾಲಕ ತನ್ನ ಕಾರನ್ನು ಚಾಲನೆ ಮಾಡುವಾಗ ಆಟೋ ರಿಕ್ಷಾವೊಂದಕ್ಕೆ ತಗುಲಿಸಿದ್ದಾನೆ (Brushed against an auto-rickshaw). ಇದನ್ನು ಪ್ರಶ್ನಿಸಿದಾಗ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದಾಗ, ವ್ಯಕ್ತಿ ಕಾರಿನ ಮುಂಭಾಗ ನಿಂತಿದ್ದಾರೆ. ಆದರೂ ಚಾಲಕ ಕಾರನ್ನು ಚಲಾಯಿಸಿಕೊಂಡು ಹೋಗಿದ್ದು, ವ್ಯಕ್ತಿ ಬಾನೆಟ್ ಮೇಲೆ ಬೀಳುವಂತಾಗಿದೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೂರ್ವ ವಿಭಾಗದ ಡಿಸಿಪಿ (DCP East) ಅವರು ಈ ಬಗ್ಗೆ ಮಾಹಿತಿ ನೀಡಿದ್ದು, "ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಈಗಾಗಲೇ ವಶಕ್ಕೆ (Detained) ಪಡೆಯಲಾಗಿದೆ ಮತ್ತು ಕೃತ್ಯಕ್ಕೆ ಬಳಸಿದ ಕಾರನ್ನು ಜಪ್ತಿ ಮಾಡಲಾಗಿದೆ. ಕಾನೂನು ಪ್ರಕ್ರಿಯೆ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಫೈರ್ ಬ್ರ್ಯಾಂಡ್ ಅನಂತಕುಮಾರ್ ಹೆಗಡೆಗೆ ಹೈಕಮಾಂಡ್ ಬುಲಾವ್? ದೆಹಲಿ ನಾಯಕರಿಂದ ಕರೆ ಬಂದಿದ್ಯಾಕೆ?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.

Bengaluru News
Advertisment