Advertisment

ನೀರಲ್ಲಿ ಮುಳುಗುತ್ತಿದ್ದವನ್ನ ಕಾಪಾಡಿ ವರುಣ ನಾಲೆಯಲ್ಲಿ ಜೀವ ಬಿಟ್ಟ ಅಣ್ಣ-ತಮ್ಮ

ನಾಲೆಯ ಮೇಲ್ಭಾಗದಲ್ಲಿ ಹೋಗುತ್ತಿದ್ದ ಸಹೋದರರು ತಕ್ಷಣ ನೀರಿಗೆ ಹಾರಿ ಮುಳುಗುತ್ತಿದ್ದವನನ್ನ ರಕ್ಷಣೆ ಮಾಡಿದ್ದಾರೆ. ಆದರೆ ದುರದೃಷ್ಟವಶಾತ್ ನಂದನ್, ರಾಕೇಶ್ ನೀರು ಪಾಲಾಗಿದ್ದಾರೆ. ಮೃತ ನಂದನ್, ರಾಕೇಶ್ ಇಬ್ಬರೂ ಅಣ್ಣ-ತಮ್ಮಂದಿರ ಮಕ್ಕಳಾಗಿದ್ದು

author-image
Bhimappa
MYS_BOYS
Advertisment

ಮೈಸೂರು: ನೀರಿನಲ್ಲಿ ಮುಳುಗುತ್ತಿದ್ದ  ಯುವಕನನ್ನು ಕಾಪಾಡಲು ಹೋದ ಇಬ್ಬರು ಸಹೋದರರು ನೀರು ಪಾಲಾಗಿರುವ ಘಟನೆ ತಾಲೂಕಿನ ಬಡಗಲಹುಂಡಿಯ ವರುಣ ನಾಲೆಯಲ್ಲಿ ನಡೆದಿದೆ. 

Advertisment

ಬಡಗಲಹುಂಡಿ ಗ್ರಾಮದ ರಮೇಶ್ ಮಗನಾದ ನವವಿವಾಹಿತ ನಂದನ್ (25), ರಮೇಶ್ ಸಹೋದರನ ಪುತ್ರ ರಾಕೇಶ್ (20) ಜೀವ ಕಳೆದುಕೊಂಡವರು. ಈ ಇಬ್ಬರು ಸಹೋದರರ ಮಕ್ಕಳು ಆಗಿದ್ದಾರೆ. ಮಂಜು ಎನ್ನುವ ಬಾಲಕ ನಿನ್ನೆ ಸಂಜೆ ವರಣ ನಾಲೆಯಲ್ಲಿ ಈಜಲು ಹೋಗಿದ್ದನು. ಈ ವೇಳೆ ನೀರಿನಲ್ಲಿ ಮಂಜು ಮುಳುಗುತ್ತಿರುವುದನ್ನು ಸಹೋದರರಿರಬ್ಬರು ನೋಡಿದ್ದರು. 

ಇದನ್ನೂ ಓದಿ:4 ಮಕ್ಕಳ ತಾಯಿಯ ಜೀವ ತೆಗೆದ ಕೇಸ್​.. ಅನೈತಿಕ ಸಂಬಂಧ, ಇಬ್ಬರು ಆರೋಪಿಗಳಿಂದ ಘೋರ ಕೃತ್ಯ

MYS_BOY

ಗೊಬ್ಬರ ತೆಗೆದುಕೊಂಡು ನಾಲೆಯ ಮೇಲ್ಭಾಗದಲ್ಲಿ ಹೋಗುತ್ತಿದ್ದ ಸಹೋದರರು ತಕ್ಷಣ ನೀರಿಗೆ ಹಾರಿ ಮುಳುಗುತ್ತಿದ್ದವನನ್ನ ರಕ್ಷಣೆ ಮಾಡಿದ್ದಾರೆ. ಆದರೆ ದುರದೃಷ್ಟವಶಾತ್ ನಂದನ್, ರಾಕೇಶ್ ನೀರು ಪಾಲಾಗಿದ್ದಾರೆ. ಮೃತ ನಂದನ್, ರಾಕೇಶ್ ಇಬ್ಬರೂ ಅಣ್ಣ-ತಮ್ಮಂದಿರ ಮಕ್ಕಳಾಗಿದ್ದು ಸಂಬಂಧದಲ್ಲಿ  ಸಹೋದರರು ಆಗುತ್ತಾರೆ. 

Advertisment

ಕೇವಲ ಹದಿನೈದು ದಿನಗಳ ಹಿಂದೆಯಷ್ಟೇ ನಂದನ್ ಪ್ರೀತಿಸಿ ಮದುವೆಯಾಗಿದ್ದನು. ಚನ್ನಪಟ್ಟಣ ಮೂಲದ ಯುವತಿಯೊಂದಿಗೆ ವಿವಾಹವಾಗಿದ್ದನು. ಮಕ್ಕಳನ್ನು ಕಳೆದುಕೊಂಡ ಎರಡು ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿತ್ತು. ವರುಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Mysore Mysore news
Advertisment
Advertisment
Advertisment