ಬಸ್​ ಬಂದ್ ಎಫೆಕ್ಟ್​.. ನಿಲ್ದಾಣದಲ್ಲೇ ಅಧಿಕಾರಿಗಳ ಜೊತೆ ಜಗಳಕ್ಕಿಳಿದ ಪ್ರಯಾಣಿಕರು

ವೇತನ ಪರಿಷ್ಕರಣೆ ಹಾಗೂ 20 ತಿಂಗಳ ಹಿಂಬಾಕಿ ವೇತನ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಎಂಟಿಸಿ, ಕೆಎಸ್​ಆರ್​ಟಿಸಿ ಸೇರಿದಂತೆ 4 ವಿಭಾಗಗಳ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದೆ.

author-image
NewsFirst Digital
davangere fighting
Advertisment
  • ಬಸ್​ಗಾಗಿ ನಿಲ್ದಾಣದಲ್ಲೇ ಕಾಯುತ್ತಿರುವ ಪ್ರಯಾಣಿಕರು
  • ಬಸ್ ಬಾರದ್ದಕ್ಕೆ ಅಧಿಕಾರಿಗಳ ಜೊತೆ ಪ್ರಯಾಣಿಕರ ಜಗಳ
  • ಧಿಡೀರ್ ಬಸ್ ಇಲ್ಲ ಅಂದ್ರೆ ಊರಿಗೆ ಹೋಗೋದು ಹೇಗೆ?

ದಾವಣಗೆರೆ: ವೇತನ ಪರಿಷ್ಕರಣೆ ಹಾಗೂ 20 ತಿಂಗಳ ಹಿಂಬಾಕಿ ವೇತನ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಎಂಟಿಸಿ, ಕೆಎಸ್​ಆರ್​ಟಿಸಿ ಸೇರಿದಂತೆ 4 ವಿಭಾಗಗಳ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದೆ. 

ಇದನ್ನೂ ಓದಿ:ಬೆಳಗ್ಗೆ 6 ಗಂಟೆಯಿಂದ ಮುಷ್ಕರ.. ಬಸ್ ಡಿಪೋ ಕಡೆಗೆ ಹೋಗಬೇಡಿ, ಮನೆಯಲ್ಲಿ ಇರಿ; ಅನಂತ

ಸರ್ಕಾರಕ್ಕೆ ಜೊತೆ ಸಭೆ ಮೇಲೆ ಸಭೆ ನಡೆದ್ರೂ ಅವರ ಬೇಡಿಕೆ ಈಡೇರಿಸಿಕಲ್ಲ. ಹೀಗಾಗಿ ಇಂದು ಬಸ್‌ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಮಧ್ಯೆ ಬಸ್​ ಮುಷ್ಕರದ ಬಿಸಿ ಪ್ರಯಾಣಿಕರಿಗೆ ತಟ್ಟಿದೆ.

KSRTC_BUS_HSN

ಹೌದು, ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ ಮುಷ್ಕರದ ಬಿಸಿ ಪ್ರಯಾಣಿಕರಿಗೆ ತಟ್ಟಿದೆ. ಬಸ್​ಗಾಗಿ ಪ್ರಯಾಣಿಕರು ನಿಲ್ದಾಣದಲ್ಲೇ ಕಾಯುತ್ತಿದ್ದಾರೆ. ಬಸ್ ಬಾರದ್ದಕ್ಕೆ ಅಧಿಕಾರಿಗಳ ಜೊತೆ ಪ್ರಯಾಣಿಕರ ಜಗಳಕ್ಕೆ ಇಳಿದಿದ್ದಾರೆ. ನಾವು ಬಸ್ ಟಿಕೆಟ್ ಹಣ ಪಾವತಿಸಿ ಬಂದಿದ್ದೇವೆ. ಬಸ್ ಇಲ್ಲ ಅಂದ್ರೆ ಬುಕಿಂಗ್ ಯಾಕೆ ಮಾಡಿಕೊಳ್ಳಬೇಕು? ಧಿಡೀರ್ ಬಸ್ ಇಲ್ಲ ಅಂದ್ರೆ ಊರಿಗೆ ಹೋಗೋದು ಹೇಗೆ ಅಂತ ನಿಲ್ದಾಣದಲ್ಲೇ ಆಕ್ರೋಶ ಹೊರ ಹಾಕುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Transport strike
Advertisment