/newsfirstlive-kannada/media/media_files/2025/08/07/sudhakar_mc-2025-08-07-13-22-57.jpg)
ಬೆಂಗಳೂರು: ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದ ಆವರಣದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಜೀವ ತೆಗೆದುಕೊಂಡಿದ್ದಾರೆ. ಸದ್ಯ ಈ ಸಂಬಂಧ ಪತ್ರದಲ್ಲಿ ಸಂಸದ ಡಾ.ಕೆ ಸುಧಾಕರ್ ಹೆಸರು ಉಲ್ಲೇಖ ಇರುವುದು ಸೂಕ್ಷ್ಮವಾದ ವಿಚಾರ, ತನಿಖೆ ಪಾರದರ್ಶಕದಿಂದ ಆಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು, ಈ ಕುರಿತು ಇಂದು ಬೆಳಗ್ಗೆಯೇ ಮಾಹಿತಿ ಬಂದಿದೆ. ಬಾಬು ಎನ್ನುವ ಚಾಲಕ ಜೀವ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಅವರ ಜೇಬಿನಲ್ಲಿ ಚೀಟಿ ಇರುವುದು ಪತ್ತೆ ಆಗಿದ್ದು ಇದರಲ್ಲಿ ಸಂಸದ ಡಾ.ಕೆ ಸುಧಾಕರ್, ಲೆಕ್ಕ ಪರಿಶೋಧಕ ಮಂಜುನಾಥ್ ಹಾಗೂ ನಾಗೇಶ್ ಎನ್ನುವವರ ಹೆಸರುಗಳು ಇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಸಂಸದ ಡಾ.ಕೆ ಸುಧಾಕರ್ ಹೆಸರು ಬರೆದು ಜೀವ ಬಿಟ್ಟ ವ್ಯಕ್ತಿ.. ಲಕ್ಷ ಲಕ್ಷ ಹಣ ವಂಚನೆ ಆರೋಪ
ಸಂಸದ ಡಾ.ಕೆ ಸುಧಾಕರ್, ಲೆಕ್ಕ ಪರಿಶೋಧಕ ಮಂಜುನಾಥ್ ಹಾಗೂ ನಾಗೇಶ್ ಅವರ ಹೆಸರುಗಳು ಇರುವುದರಿಂದ ಇದು ಸೂಕ್ಷ್ಮವಾದ ವಿಚಾರ ಆಗಿದೆ. ಸಂಪೂರ್ಣವಾಗಿ ಪ್ರಕರಣದ ತನಿಖೆ ಆಗಬೇಕು. ಪೋಲೀಸ್ ಅಧಿಕಾರಿಗಳು, ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಲಿದೆ. ವಸ್ತುಸ್ಥಿತಿ ಏನೇನಿದೆ ಅಂತ ನೋಡಬೇಕು. ಪಾರದರ್ಶಕ ತನಿಖೆ ಆಗಬೇಕು ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ