Bus accident: ಮದ್ವೆ ತಯಾರಿಯಲ್ಲಿದ್ದರು.. ಮಗಳ ಕೊರಳಿನಲ್ಲಿದ್ದ ಸರ ನೋಡಿ ಮೃತದೇಹ ಪತ್ತೆ ಹಚ್ಚಿದ ತಂದೆ

ಚಿತ್ರದುರ್ಗ ರಸ್ತೆ ಅಪಘಾತದಲ್ಲಿ ಚನ್ನರಾಯಪಟ್ಟಣದ ಮಾನಸ ಎಂಬ ಯುವತಿ ಮೃತಪಟ್ಟಿದ್ದಾಳೆ. ಆಕೆಯ ಕೊರಳಲ್ಲಿದ್ದ ಸರವನ್ನು ನೋಡಿದ ತಂದೆ, ಈಕೆಯೇ ನನ್ನ ಮಗಳು ಎಂದು ಚಿತ್ರದುರ್ಗದ ಶವಗಾರದಲ್ಲಿ ಹೇಳಿದ್ದಾರೆ.

author-image
Ganesh Kerekuli
Chitradurga accident manasa
Advertisment

ಚಿತ್ರದುರ್ಗ: ಹಿರಿಯೂರು ಪಟ್ಟಣದ ಬಳಿ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ ಒಟ್ಟು ಐದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಸ್ತುತ ಮೃತದೇಹಗಳ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ. ಜೊತೆಗೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. 

ಬೆಂಕಿಯಲ್ಲಿ ಬೆಂದು ಕರಕಲಾಗಿರುವ ಮೃತದೇಹಗಳ ಗುರುತು ಪತ್ತೆ ಮಾಡೋದೇ ಸವಾಲಿನ ಕೆಲಸವಾಗಿದೆ. ಈ ಮಧ್ಯೆ ತಂದೆಯೊಬ್ಬರು ಮಗಳ ಮೃತದೇಹ ಪತ್ತೆಹಚ್ಚಿದ್ದಾರೆ. ಕೊರಳಲ್ಲಿದ್ದ ಸರ ನೋಡಿ ಇವಳೇ ನನ್ನ ಮಗಳು ಎಂದು ಗುರುತು ಹಿಡಿದಿದ್ದಾಳೆ. 

ಇದನ್ನೂ ಓದಿ:ದಯಾಳ್​​ಗೆ ಕೋರ್ಟ್ ಶಾಕ್.. ಈತನ ಉಳಿಸಿಕೊಂಡು ತಪ್ಪು ಮಾಡ್ತಾ RCB?

ಅಂದ್ಹಾಗೆ ಜೀವ ಕಳೆದುಕೊಂಡ ಹೆಣ್ಮಗಳ ಹೆಸರು ಮಾನಸ. ತಂದೆ ಚಂದ್ರಗೌಡ ನೀಡಿದ ಮಾಹಿತಿಯಂತೆ, ಮಾನಸ ಮೂಲತಃ ಚನ್ನರಾಯಪಟ್ಟಣದವಳು. ನನ್ನ ಮಗಳು ಶನಿವಾರ ಅಥವಾ ಭಾನುವಾರ ಊರಿಗೆ ಬರ್ತೀನಿ ಎಂದಿದ್ದಳು. ಆಮೇಲೆ ಮದುವೆ ಡೇಟ್ ಫಿಕ್ಸ್ ಮಾಡೋಣ ಅಂತ ಹೇಳಿದ್ದಳು. ಆಕೆಗೆ ಮದುವೆ ಫಿಕ್ಸ್ ಆಗಿತ್ತು ಎಂದು ಕಣ್ಣೀರು ಇಟ್ಟಿದ್ದಾರೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Chitradurga bus tragedy ಹಿರಿಯೂರು ಬಸ್ ದುರಂತ
Advertisment