/newsfirstlive-kannada/media/media_files/2025/08/28/sujatha-2025-08-28-11-51-45.jpg)
ಅನನ್ಯ ಭಟ್ ಮಿಸ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಜಾತ ಭಟ್ ಅವರನ್ನ ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ನನ್ನ ಮಗಳು 20 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಳು ಎಂದು ಸುಜಾತಾ ಭಟ್ ದೂರು ನೀಡಿದ್ದರು.
ಇದನ್ನೂ ಓದಿ: ಅರಿಶಿಣ ಶಾಸ್ತ್ರದಲ್ಲಿ ಮಿಂದೆದ್ದ ಸ್ಟಾರ್ ನಿರೂಪಕಿ ಅನುಶ್ರಿ-ರೋಷನ್; PHOTOS
ಇದೇ ಕೇಸ್ಗೆ ಸಂಬಂಧಿಸಿದಂತೆ ಸುಜಾತಾ ಭಟ್ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಹೀಗಾಗಿ ಸುಜಾತಾ ಭಟ್ ಮಂಗಳೂರಿನ ಬೆಳ್ತಂಗಡಿಯ SIT ಕಚೇರಿಗೆ ಆಗಮಿಸಿದ್ದರು. ಎರಡು ದಿನಗಳ ತನಿಖೆಯ ವೇಳೆ ಹಲವು ಸಂಗತಿಗಳು ಬಹಿರಂಗವಾಗಿದ್ದು, ಇಂದು ಎಸ್ಐಟಿ ಅಂತಿಮ ಹಂತದ ವಿಚಾರಣೆ ನಡೆಸಲಿದೆ.
ತನಿಖಾಧಿಕಾರಿ ಎಸ್ಐ ಗುಣಪಾಲ್ ಮತ್ತು ದಯಾಮಾರಿಂದ ಸುಜಾತಾ ಭಟ್ ವಿಚಾರಭೆ ನಡೆಸಲಾಗಿದ್ದು, ಪ್ರಭಾವಿಗಳ ಕೈವಾಡ ಮತ್ತು ಪಿತೂರಿಯ ಬಗ್ಗೆ ಸುಜಾತಾ ಮಾಹಿತಿ ಬಿಚ್ಚಿಟ್ಟಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ತನ್ನ ಸುತ್ತ ಹೆಣೆದ ವ್ಯೂಹದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿರೋ ಸುಜಾತ ಭಟ್ ಇಂದು ಅಂತಿಮ ಹಂತದ ವಿಚಾರಣೆ ಎದುರಿಸಲಿದ್ದಾರೆ.
ಇನ್ನೂ, ಅನನ್ಯ ಭಟ್ ಮಿಸ್ಸಿಂಗ್ ಕೇಸ್ ಸುಳ್ಳು ಅನ್ನೋದು ಗೊತ್ತಾಗ್ತಿದ್ದಂತೆ ಸುಜಾತಾ ಭಟ್ ಏಕಾಂಗಿಯಾಗಿದ್ದಾರೆ.ಆರಂಭದಲ್ಲಿ ನನ್ನ ಮಗಳು ನಾಪತ್ತೆಯಾಗಿದ್ದಾಳೆ. ಆಕೆಯ ಅಸ್ತಿಯನ್ನ ಹುಡುಕಿಕೊಡಿ ಅಂತ ಸುಜಾತ ಭಟ್ ಕಾರಿನಲ್ಲಿ ಬಂದು ದೂರು ಕೊಟ್ಟಿದ್ದರು. ನಂತರ ಸುಳ್ಳು ಫೋಟೋ ತೋರಿಸಿ ಸುಜಾತ ಭಟ್ಸಿಕ್ಕಿಹಾಕಿಕೊಂಡಿದ್ದರು.
/filters:format(webp)/newsfirstlive-kannada/media/media_files/2025/08/26/dharmasthala-sujata-bhat-2025-08-26-16-07-38.jpg)
ಮಾಧ್ಯಮ ಹಾಗೂ ಬುರುಡೆ ಗ್ಯಾಂಗ್ ಮುಂದೆ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದರು. ಹೀಗಾಗಿ ಸುಜಾತ ಭಟ್ರನ್ನ ಬುರುಡೆ ಗ್ಯಾಂಗ್ ದೂರ ಮಾಡಿದೆ ಅಂತ ಹೇಳಲಾಗ್ತಿದ್ದು, ಆಟೋದಲ್ಲಿ ಏಕಾಂಕಿಯಾಗಿ ಬಂದು ವಿಚಾರಣೆಗೆ ಹಾಜರಾಗುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ