ಧರ್ಮಸ್ಥಳ ಕೇಸ್​ಗೆ ಅತಿದೊಡ್ಡ ಟ್ವಿಸ್ಟ್.. ನಿನ್ನೆ ಸಿಕ್ಕಿದ್ದು ಒಂದಲ್ಲ.. ಬರೋಬ್ಬರಿ 3 ಅಸ್ಥಿಪಂಜರ..!

ಕಳೆದ 6 ದಿನಗಳಿಂದ ಅನಾಮಿಕ ತೋರಿಸಿದ ಜಾಗದಲ್ಲಿ ಎಸ್​ಐಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೀಗ ಧರ್ಮಸ್ಥಳ ಕೇಸ್​ಗೆ ಅತಿದೊಡ್ಡ ಟ್ವಿಸ್ಟ್ ಸಿಕ್ಕಿದೆ. ದೂರುದಾರೆ ಸುಜಾತ ಭಟ್ ಪರ ವಕೀಲರಿಂದ ಮಾಹಿತಿ ಸಿಕ್ಕಿದೆ.

author-image
Veenashree Gangani
dharmasthala case
Advertisment

ಮಂಗಳೂರು: ಕಳೆದ 6 ದಿನಗಳಿಂದ ಅನಾಮಿಕ ತೋರಿಸಿದ ಜಾಗದಲ್ಲಿ ಎಸ್​ಐಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೀಗ ಧರ್ಮಸ್ಥಳ ಕೇಸ್​ಗೆ ಅತಿದೊಡ್ಡ ಟ್ವಿಸ್ಟ್ ಸಿಕ್ಕಿದೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರ; ಈ ಕುರಿತು ಸಭೆ ಬಳಿಕ ಸಚಿವ ರಾಮಲಿಂಗಾರೆಡ್ಡಿ ಏನೇನು ಹೇಳಿದರು?

dharmasthala case(21)

6ನೇ ದಿನದ ಸ್ಥಳ ಪರಿಶೋಧನೆ ವೇಳೆ ಸಿಕ್ಕಿದ್ದು ಒಂದಲ್ಲ ಎರಡಲ್ಲಾ ಮೂರು ಅಸ್ಥಿಪಂಜರ ಸಿಕ್ಕಿವೆ ಎಂದು ದೂರುದಾರೆ ಸುಜಾತ ಭಟ್ ಪರ ವಕೀಲ ಮಂಜುನಾಥ್​ ಅವರು ಮಾಹಿತಿ ನೀಡಿದ್ದಾರೆ. ಪತ್ರಿಕಾ ಹೇಳಿಕೆ ಮೂಲಕ ವಕೀಲ ಮಂಜುನಾಥ್ ಅವರು, ಪಾಯಿಂಟ್ 11ರ ನೂರು ಮೀಟರ್ ದೂರದಲ್ಲಿ 3 ಮಾನವ ಅಸ್ಥಿಪಂಜರ ಅವಶೇಷಗಳು ಲಭ್ಯವಾಗಿದೆ.

ಈ ಪೈಕಿ ಒಂದು ಅವಶೇಷ ಮಹಿಳೆಗೆ ಸೇರಿದ್ದಾಗಿದೆ. ಇದರೊಂದಿಗೆ ಮಹಿಳೆಯ ಸೀರೆಯೂ ಪತ್ತೆಯಾಗಿದೆ. ನಿನ್ನೆ ಪಾಯಿಂಟ್ ನಂ. 11ರ ಬದಲು ಹೊಸ ಜಾಗದಲ್ಲಿ ಪರಿಶೋಧನೆ ನಡೆದಿತ್ತು. ಎಸ್​ಐಟಿ ಅನಾಮಿಕ ದೂರುದಾರನಿಗೆ ಹೊಸ ಜಾಗ ತೋರಿಸಲು ಅವಕಾಶ ನೀಡಿದೆ. ಇದರಿಂದ ನಿನ್ನೆಯ ಅಸ್ಥಿಪಂಜರ ಅಗೆಯುವ ಕಾರ್ಯ ಯಶಸ್ವಿಯಾಗಿತ್ತು. ಎಸ್​ಐಟಿ ಸಹಿತ ಶೋಧ ನಡೆಸುತ್ತಿರುವ ತಂಡದ ಕಾರ್ಯಾಚರಣೆ ಶ್ಲಾಘನೀಯ ಅಂತ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

dharmasthala
Advertisment