ಧರ್ಮಸ್ಥಳ ಪ್ರಕರಣ; ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಸಿಕ್ಕವು ತಲವಾರುಗಳು

ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಎಸ್​ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಈ ವೇಳೆ ತಲವಾರುಗಳು ಪತ್ತೆ ಆಗಿದ್ದು ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಪತ್ನಿ, ಮಗ ಹಾಗೂ ಅವರ ಮಗಳ ಮೊಬೈಲ್​ ವಶಕ್ಕೆ ತೆಗೆದುಕೊಂಡಿದ್ದಾರೆ.

author-image
Bhimappa
Mahesh_Shetty_timarodi
Advertisment

ಮಂಗಳೂರು: ಎಸ್​ಐಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಸಹೋದರ ಮೋಹನ್ ಅವರ ಮನೆಯಲ್ಲಿ ಮಹಜರು ಮಾಡಿದ್ದರು. ಈ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಮೂರು ತಲವಾರುಗಳನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. 

ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಎಸ್​ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಈ ವೇಳೆ ಮೂರು ತಲವಾರು ಪತ್ತೆ ಆಗಿದ್ದು ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಮಹೇಶ್ ತಿಮರೋಡಿ ಪತ್ನಿ, ಮಗ ಹಾಗೂ ಅವರ ಮಗಳ ಮೊಬೈಲ್​ಗಳನ್ನು ತೆಗೆದುಕೊಳ್ಳಲಾಗಿದೆ. ಇನ್ನು ಧರ್ಮಸ್ಥಳದ ವಿರುದ್ಧ ಸಂಚು ನಡೆಸಲು ಸಂಗ್ರಹಿಸಿದ್ದ ದಾಖಲೆ ಪತ್ರಗಳನ್ನು ಕೂಡ ವಶಕ್ಕೆ ಎಸ್​ಐಟಿ ತೆಗೆದುಕೊಂಡಿದೆ. 

ಇದನ್ನೂ ಓದಿ: DCM ಡಿ.ಕೆ ಶಿವಕುಮಾರ್​ಗೆ ತಿರುಗೇಟು ಕೊಟ್ಟ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

MAHESH_TIMARODI

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಸಹೋದರ ಮೋಹನ್ ಮನೆಯಲ್ಲಿ ಎಸ್​ಐಟಿ ಅಧಿಕಾರಿಗಳು ತಡರಾತ್ರಿ 2:30ರವರೆಗೆ ನಡೆದ ಮಹಜರು ನಡೆಸಿದ್ದರು. ಮನೆಯಲ್ಲಿದ್ದಂತಹ ಮೊಬೈಲ್,  ಬಟ್ಟೆ, ಸಿಸಿಟಿವಿ ಡಿವಿಆರ್, ಹಾರ್ಡ್ ಡಿಸ್ಕ್, ಲಗೇಜ್ ಬ್ಯಾಗ್, ಚೆನ್ನ ಬಳಸುವ ದಿನನಿತ್ಯದ ವಸ್ತುಗಳು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇವುಗಳನ್ನ ಎಫ್​​ಎಸ್​ಎಲ್​ಗೆ ಇಂದು ರವಾನೆ ಮಾಡಲಾಗುತ್ತದೆ.

ಧರ್ಮಸ್ಥಳ ಪ್ರಕರಣದಲ್ಲಿ ದೂರುದಾರ ಚಿನ್ನಯ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ಚಿನ್ನಯ್ಯ ಎಲ್ಲಿದ್ದ, ಈ ಮೊದಲು ಏನು ಮಾಡುತ್ತಿದ್ದ, ಯಾರಿಂದ ಹಣ ಪಡೆದ ಎನ್ನುವುದನ್ನು ಎಸ್​ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಎಸ್​ಐಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಸಹೋದರ ಮೋಹನ್ ಮನೆಯಲ್ಲಿ ಮಹಜರು ಮಾಡಿದ್ದರು. ಇದೇ ವೇಳೆ ತಲವಾರುಗಳು ಸಿಕ್ಕಿವೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Dharmasthala case dharmasthala Mahesh Thimaroddi
Advertisment