/newsfirstlive-kannada/media/media_files/2025/10/28/student-heart-attack-2025-10-28-13-53-13.jpg)
ಧಾರವಾಡ: ನಗರದ ನಿಸರ್ಗ ಲೇಔಟ್​ನಲ್ಲಿ ಪಿಎಸ್​ಐ ಆಕಾಂಕ್ಷಿ ರಾಮಾಂಜನೇಯ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಕಗ್ಗಲ್ ಗ್ರಾಮದ ಈ ಯುವಕ ಕಳೆದ 5 ವರ್ಷಗಳಿಂದ ಧಾರವಾಡದಲ್ಲಿ ಅಭ್ಯಾಸ ಮಾಡುತ್ತಿದ್ದರು.
ನಿನ್ನೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದರಿಂದ, ತಕ್ಷಣ ಧಾರವಾಡದ ಜಿಲ್ಲಾಸ್ಪತ್ರೆಗೆ ಸ್ನೇಹಿತರು ರಾಮಾಂಜನೇಯನನ್ನು ದಾಖಲಿಸಿದ್ದರು. ಜಿಲ್ಲಾಸ್ಪತ್ರೆಯಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us