/newsfirstlive-kannada/media/media_files/2025/08/04/bmtc-strike-2025-08-04-12-49-12.jpg)
ಬೆಂಗಳೂರು: ಸಾರಿಗೆ ನೌಕರರು ನಾಳೆ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಇದರಿಂದ 4 ನಿಗಮಗಳಿಗೆ ಕೋಟಿ ಕೋಟಿ ನಷ್ಟವಾಗುವುದರ ಜೊತೆಗೆ ಪ್ರಯಾಣಿಕರು ಕೂಡ ಸಂಕಷ್ಟಕ್ಕೆ ಸಿಲುಕುವ ಆತಂಕ ಇದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಾರಿಗೆ ನೌಕರರ ಒಕ್ಕೂಟ ಹಾಗೂ ಇಲಾಖೆಯ ಜೊತೆ ಮಹತ್ವದ ಸಭೆ ನಡೆಸ್ತಿದ್ದಾರೆ. ಹೀಗಾಗಿ ನಾಳೆ ಬಿಎಂಟಿಸಿ, ಕೆಎಸ್​ಆರ್​ಟಿಸಿ, ಎನ್​ಡಬ್ಲೂಕೆಆರ್​ಟಿಸಿ, ಕೆಕೆಆರ್​ಟಿಸಿ ಬಸ್​​ಗಳು ರಸ್ತೆಗೆ ಇಳಿಯುತ್ವಾ? ಇಲ್ವಾ ಅನ್ನೋದು ತೀವ್ರ ಕುತೂಹಲ ಮೂಡಿಸಿದೆ.
ಸರ್ಕಾರದ ಸಾಧ್ಯತೆ ನಿರ್ಧಾರಗಳೇನು?
- ಬೇಡಿಕೆ ಈಡೇರಿಕೆಗೂ ಮುನ್ನ ನೌಕರರ ಮನವೊಲಿಕೆಗೆ ಮುಂದಾಗುವ ಸಾಧ್ಯತೆ
- ಸ್ವಲ್ಪ ಸಮಯವಕಾಶ ಕೇಳುವ ಸಾಧ್ಯತೆ
- ಕನಿಷ್ಠ ಸಮಯಾವಕಾಶಕ್ಕೆ ಮನವಿ ಮಾಡಬಹುದು
- ಹಂತ ಹಂತವಾಗಿ ಅರಿಯರ್ಸ್ ಬಿಡುಗಡೆ ಮಾಡುವುದಾಗಿ ಭರವಸೆ ನೀಡಬಹುದು
- ಅರಿಯರ್ಸ್ ಬದಲಾಗಿ ಸಂಬಳ ಹೆಚ್ಚಳ ಮಾಡುವುದಾಗಿ ತಿಳಿಸಬಹುದು.
- ವಜಾಗೊಂಡಿರುವ ನೌಕರರ ಮರುನೇಮಕಕ್ಕೆ ಸೂಚನೆ ನೀಡುವ ಸಾಧ್ಯತೆ
- ಸದ್ಯಕ್ಕೆ ಬೀಸೋದೊಣ್ಣೆಯಿಂದ ತಪ್ಪಿಸಿಕೊಳ್ಳುವ ಯತ್ನ ಸಾಧ್ಯತೆ.
ಸಾರಿಗೆ ನೌಕರರ ಬೇಡಿಕೆಗಳು?
- 38 ತಿಂಗಳ ವೇತನದ ಅರಿಯರ್ಸ್ ಬಾಕಿ ಹಣ ನೀಡಬೇಕು
- ಸರ್ಕಾರಿ ನೌಕರರಿಗೆ ನೀಡುವ ವೇತನಕ್ಕೆ ಸರಿಸಮಾನ ವೇತನ ನೀಡಬೇಕು
- ಖಾಸಗೀಕರಣ ಭ್ರಷ್ಟಾಚಾರ ಕಾರ್ಮಿಕರ ಕಿರುಕುಳ ನಿಲ್ಲಬೇಕು
- ನಗದು ರಹಿತ ವೈದ್ಯಕೀಯ ಸೌಲಭ್ಯ
- ನಮ್ಮ ಹಕ್ಕಿನ ರಜೆ
- 1-1-2024 ರಿಂದ ವೇತನ ಜಾರಿಗೊಳಿಸುವುದು
- ಉತ್ತಮ ಕ್ಯಾಂಟೀನ್ ವ್ಯವಸ್ಥೆ
- ಈ ಹಿಂದೆ 2020 ಮತ್ತು 2021 ರ ಸಾರಿಗೆ ಮುಷ್ಕರ ಸಂದರ್ಭದಲ್ಲಿ ನೌಕರರ ಮೇಲೆ ಹಾಕಲಾಗಿರುವ
- ಎಲ್ಲಾ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳಬೇಕು
- ಸಾರಿಗೆ ನಿಗಮದ ವಿದ್ಯುತ್ ಬಸ್ಗಳಲ್ಲಿ ಸಂಸ್ಥೆಯ ಚಾಲಕರನ್ನೇ ಚಾಲನಾ ಕೆಲಸಕ್ಕೆ ನಿಯೋಜಿಸಬೇಕು
- ಈ ಬಸ್ಗಳ ನಿರ್ವಹಣೆಯನ್ನು ಖಾಸಗಿ ಗುತ್ತಿಗೆದಾರರಿಗೆ ನೀಡುವ ಪದ್ದತಿ ಕೈಬಿಡಬೇಕು
ಇದನ್ನೂ ಓದಿ:ಧರ್ಮಸ್ಥಳ ಬುರುಡೆ ರಹಸ್ಯ ತಿಳಿಯಲು SIT ಒಂದು ದಿನಕ್ಕೆ ಎಷ್ಟು ಲಕ್ಷ ಖರ್ಚು ಮಾಡ್ತಿದೆ ಗೊತ್ತಾ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us