ಗಣೇಶ ವಿಸರ್ಜನಾ ಮೆರವಣಿಗೆ; DJ ಸೌಂಡ್​ಗೆ ಡ್ಯಾನ್ಸ್​ ಮಾಡುವಾಗ ವ್ಯಕ್ತಿ ನಿಧನ

ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ವ್ಯಕ್ತಿ ಭರ್ಜರಿ ಡ್ಯಾನ್ಸ್​ ಮಾಡುತ್ತಿದ್ದರು. ಮೆರವಣಿಗೆಯಲ್ಲಿ ಯುವಕರೊಂದಿಗೆ ಡಿಜೆ ಹಾಡುಗಳಿಗೆ ವ್ಯಕ್ತಿ ಕುಣಿದುಕೊಂಡು ಬರುತ್ತಿದ್ದರು. ಆದರೆ ಡ್ಯಾನ್ಸ್ ಮಾಡುತ್ತಿದ್ದಾಗಲೇ ಹಠಾತ್ ಹೃದಯಾಘಾತ ಸಂಭವಿಸಿದೆ.

author-image
Bhimappa
MND_GANESH
Advertisment

ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆಗೆ ಭರ್ಜರಿ ಸ್ಟೆಪ್ಸ್ ಹಾಕುತ್ತಿದ್ದ ವ್ಯಕ್ತಿ ಒಬ್ಬರು ಹೃದಯಾಘಾತದಿಂದ ಉಸಿರು ಚೆಲ್ಲಿದ್ದಾರೆ. ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 

ಗ್ರಾಮದ ನಿವಾಸಿ ಮಂಜುನಾಥ್ (55) ಹೃದಯಾಘಾತದಿಂದ ಕೊನೆಯುಸಿರೆಳೆದವರು. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಮಂಜುನಾಥ್ ಭರ್ಜರಿ ಡ್ಯಾನ್ಸ್​ ಮಾಡುತ್ತಿದ್ದರು. ಮೆರವಣಿಗೆಯಲ್ಲಿ ಯುವಕರರೊಂದಿಗೆ ಡಿಜೆ ಹಾಡುಗಳಿಗೆ ಮಂಜುನಾಥ್ ಕುಣಿದುಕೊಂಡು ಬರುತ್ತಿದ್ದರು. ಆದರೆ ಡ್ಯಾನ್ಸ್ ಮಾಡುತ್ತಿದ್ದಾಗಲೇ ಹಠಾತ್ ಹೃದಯಾಘಾತ ಸಂಭವಿಸಿದೆ.

ಇದನ್ನೂ ಓದಿ: ಅಗ್ನಿ IPS, ಪೊಲೀಸ್‌ ಸ್ಟೋರಿಯಂತಹ ಸಿನಿಮಾ ರೈಟರ್​ ಎಸ್.ಎಸ್ ಡೇವಿಡ್ ನಿಧನ

MND_GANESH_1

ಕುಸಿದು ಬಿದ್ದ ಮಂಜುನಾಥ್ ನೋಡ ನೋಡುತ್ತಿದ್ದಂತೆ ಹೃದಯಾಘಾತದಿಂದ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಸದ್ಯ ಅವರ ಕೊನೆ ಘಳಿಗೆಯ ದೃಶ್ಯಗಳನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಕೆ.ಆರ್ ಪೇಟೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ganesh festival, ganesh chaturthi, ಗಣೇಶ್​ ಹಬ್ಬ Ganesha Chaturthi
Advertisment