/newsfirstlive-kannada/media/media_files/2025/09/01/mnd_ganesh-2025-09-01-10-01-43.jpg)
ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆಗೆ ಭರ್ಜರಿ ಸ್ಟೆಪ್ಸ್ ಹಾಕುತ್ತಿದ್ದ ವ್ಯಕ್ತಿ ಒಬ್ಬರು ಹೃದಯಾಘಾತದಿಂದ ಉಸಿರು ಚೆಲ್ಲಿದ್ದಾರೆ. ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಗ್ರಾಮದ ನಿವಾಸಿ ಮಂಜುನಾಥ್ (55) ಹೃದಯಾಘಾತದಿಂದ ಕೊನೆಯುಸಿರೆಳೆದವರು. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಮಂಜುನಾಥ್ ಭರ್ಜರಿ ಡ್ಯಾನ್ಸ್​ ಮಾಡುತ್ತಿದ್ದರು. ಮೆರವಣಿಗೆಯಲ್ಲಿ ಯುವಕರರೊಂದಿಗೆ ಡಿಜೆ ಹಾಡುಗಳಿಗೆ ಮಂಜುನಾಥ್ ಕುಣಿದುಕೊಂಡು ಬರುತ್ತಿದ್ದರು. ಆದರೆ ಡ್ಯಾನ್ಸ್ ಮಾಡುತ್ತಿದ್ದಾಗಲೇ ಹಠಾತ್ ಹೃದಯಾಘಾತ ಸಂಭವಿಸಿದೆ.
ಇದನ್ನೂ ಓದಿ: ಅಗ್ನಿ IPS, ಪೊಲೀಸ್ ಸ್ಟೋರಿಯಂತಹ ಸಿನಿಮಾ ರೈಟರ್​ ಎಸ್.ಎಸ್ ಡೇವಿಡ್ ನಿಧನ
/filters:format(webp)/newsfirstlive-kannada/media/media_files/2025/09/01/mnd_ganesh_1-2025-09-01-10-02-41.jpg)
ಕುಸಿದು ಬಿದ್ದ ಮಂಜುನಾಥ್ ನೋಡ ನೋಡುತ್ತಿದ್ದಂತೆ ಹೃದಯಾಘಾತದಿಂದ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಸದ್ಯ ಅವರ ಕೊನೆ ಘಳಿಗೆಯ ದೃಶ್ಯಗಳನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಕೆ.ಆರ್ ಪೇಟೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us