KSRTC ನೌಕರರಿಗೆ ಸಿದ್ದರಾಮಯ್ಯ ಸರ್ಕಾರ ಗುಡ್​ನ್ಯೂಸ್..!

ದೀರ್ಘಕಾಲದಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ನೌಕರರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನ್ಯೂ ಇಯರ್​ಗೆ ಗುಡ್​ನ್ಯೂಸ್​ ನೀಡಿದೆ. ಸಾರಿಗೆ ನಿಗಮಗಳಲ್ಲಿ ಬಹುದಿನಗಳ ಬೇಡಿಕೆಯಾಗಿದ್ದ ಅಂತರ ನಿಗಮ ವರ್ಗಾವಣೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.

author-image
Ganesh Kerekuli
cm siddaramaiah
Advertisment


ದೀರ್ಘಕಾಲದಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ನೌಕರರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ನ್ಯೂ ಇಯರ್​ಗೆ ಗುಡ್​ನ್ಯೂಸ್​ ನೀಡಿದೆ. ಸಾರಿಗೆ ನಿಗಮಗಳಲ್ಲಿ ಬಹುದಿನಗಳ ಬೇಡಿಕೆಯಾಗಿದ್ದ ಅಂತರ ನಿಗಮ ವರ್ಗಾವಣೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಹಾಗಾಗಿ ಜನವರಿ 1ರಿಂದಲೇ ನೌಕರರು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ನಿರ್ಧಾರ ಕಳೆದ ಹಲವು ವರ್ಷಗಳಿಂದ ತಮ್ಮ ಸ್ವಂತ ಜಿಲ್ಲೆಗಳಿಗೆ ಮರಳಲು ಹಂಬಲಿಸುತ್ತಿದ್ದ ನೌಕರರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಈ ಮೊದಲು ಜಾರಿಯಲ್ಲಿದ್ದ ನಿಯಮಗಳ ಪ್ರಕಾರ, ಸಾರಿಗೆ ನೌಕರರಿಗೆ ತಾವು ಕೆಲಸ ಮಾಡುವ ನಿಗಮದ ವ್ಯಾಪ್ತಿಯಲ್ಲಿ ಮಾತ್ರ ವರ್ಗಾವಣೆಗೆ ಅವಕಾಶವಿತ್ತು. ಅಂದರೆ, ಕೆಎಸ್‌ಆರ್‌ಟಿಸಿ ನೌಕರರು ಕೆಎಸ್‌ಆರ್‌ಟಿಸಿಯಲ್ಲೇ ಇರಬೇಕಿತ್ತು. ಬಿಎಂಟಿಸಿಯಿಂದ ಕೆಎಸ್‌ಆರ್‌ಟಿಸಿಗೆ ಅಥವಾ ಇತರೆ ನಿಗಮಗಳಿಗೆ ವರ್ಗಾವಣೆಗೊಳ್ಳಲು ತಾಂತ್ರಿಕ ಅಡೆತಡೆಗಳಿದ್ದವು. ಇದರಿಂದಾಗಿ ನೂರಾರು ಕಿಲೋಮೀಟರ್ ದೂರದ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದ ಸಾವಿರಾರು ನೌಕರರು ತಮ್ಮ ಕುಟುಂಬದಿಂದ ದೂರ ಉಳಿದು ಸಂಕಷ್ಟ ಅನುಭವಿಸುತ್ತಿದ್ದರು. ಇದೀಗ ಈ ಐತಿಹಾಸಿಕ ತೀರ್ಮಾನದ ಮೂಲಕ ನೌಕರರ ಹೋರಾಟಕ್ಕೆ ದೊಡ್ಡ ಜಯ ಸಿಕ್ಕಂತಾಗಿದೆ.

ಇದನ್ನೂ ಓದಿ: ಜಗತ್ತನ್ನೇ ಬೆರಗುಗೊಳಿಸಿದ ಚೀನಾದ ಹೈಪರ್​ ಲೂಪ್​ ಮ್ಯಾಗ್ಲೆವ್​ ರೈಲು !

KSRTC

ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷಾ ಅವರು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಎಲ್ಲಾ ನಿಗಮಗಳ ಮುಖ್ಯಸ್ಥರಿಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ. ಜನವರಿ 1 ರಿಂದ ಜನವರಿ 31ರ ವರೆಗೆ ಒಂದು ತಿಂಗಳ ಕಾಲ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಅರ್ಹ ನೌಕರರು 'ಸಾಮಾನ್ಯ ವರ್ಗಾವಣೆ' ಅಥವಾ ಇಬ್ಬರು ನೌಕರರ ಒಪ್ಪಿಗೆ ಮೇರೆಗೆ ನಡೆಯುವ 'ಪರಸ್ಪರ ವರ್ಗಾವಣೆ' (Mutual Transfer) ಅಡಿಯಲ್ಲಿ ಒಂದು ನಿಗಮದಿಂದ ಮತ್ತೊಂದು ನಿಗಮಕ್ಕೆ ವರ್ಗಾವಣೆ ಕೋರಿ ಆನ್‌ಲೈನ್ ಅಥವಾ ನಿಗದಿಪಡಿಸಿದ ಮಾದರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ಸಂಪೂರ್ಣ ವರ್ಗಾವಣೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲಿದ್ದು, ಜೇಷ್ಠತೆ (Seniority) ಮತ್ತು ಮಾನವೀಯ ಆಧಾರದ ಮೇಲೆ ಆದ್ಯತೆ ನೀಡಲಾಗುತ್ತದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯೂಕೆಆರ್‌ಟಿಸಿ ನಿಗಮಗಳ ನಡುವೆ ನೌಕರರು ಅದಲಿಬದಲಿ ಆಗಲು ಇದು ಸುವರ್ಣಾವಕಾಶವಾಗಿದೆ. ವರ್ಷದ ಮೊದಲ ದಿನವೇ ಈ ಮಹತ್ವದ ಪ್ರಕ್ರಿಯೆ ಆರಂಭವಾಗುತ್ತಿರುವುದು ಸಾರಿಗೆ ನೌಕರರ ಕುಟುಂಬಗಳಲ್ಲಿ ಸಂಭ್ರಮ ತಂದಿದೆ.

ಇದನ್ನೂ ಓದಿ: ಜನವರಿ 5 ರಿಂದ ಮನರೇಗಾ ಬಚಾವೋ ಅಂದೋಲನಕ್ಕೆ ಸಿಡಬ್ಲ್ಯುಸಿ ಸಭೆಯಲ್ಲಿ ತೀರ್ಮಾನ : ಗಾಂಧೀಜಿ ಹೆಸರು ತೆಗೆದಿದ್ದಕ್ಕೆ ಆಕ್ಷೇಪ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

CM SIDDARAMAIAH KSRTC
Advertisment