ಕರಾವಳಿ ಮಾತ್ರವಲ್ಲ, ರಾಜ್ಯವ್ಯಾಪಿ ಕಂಬಳಕ್ಕೆ ಗ್ರೀನ್ ಸಿಗ್ನಲ್.. ಹೈಕೋರ್ಟ್​ ಆದೇಶ

ಕಂಬಳದಲ್ಲಿ ಪಾಲ್ಗೊಳ್ಳುವ ಕೋಣಗಳನ್ನು ಹಿಂಸಿಸಲಾಗುತ್ತದೆ ಎನ್ನುವುದು ಪೆಟಾದವರ ವಾದವಾಗಿತ್ತು. ಇದರಿಂದ ಮೈಸೂರು ಹಾಗೂ ಶಿವಮೊಗ್ಗದಲ್ಲಿ ಕಂಬಳ ನಡೆಸಲು ಅಡ್ಡಿಯಾಗಿತ್ತು. ಕೋಣಗಳನ್ನು ವಾಹನಗಳಲ್ಲಿ ಕರೆದುಕೊಂಡು ಹೋಗುವುದರಿಂದಲೂ ತೊಂದರೆ ಆಗುತ್ತೆ.

author-image
Bhimappa
KAMBALA
Advertisment

ಉಡುಪಿ: ಕರಾವಳಿಯ ಕಂಬಳ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದ ಯಾವ ಮೂಲೆಯಲ್ಲಾದರೂ ಕಂಬಳ ನಡೆಸಬಹುದು ಎಂದು ನ್ಯಾಯಾಲಯ ಹೇಳಿದೆ. ಇದರಿಂದ ಕಂಬಳ ಪ್ರಿಯರು ಸಂತಸಗೊಂಡಿದ್ದಾರೆ. 

KAMBALA_GREEN_SIGNAL

ಕರಾವಳಿಯ ಕಂಬಳವನ್ನು ರಾಜ್ಯದ ಯಾವ ಮೂಲೆಯಲ್ಲಾದರೂ ನಡೆಸಬಹುದು ಎಂದು ಹೈಕೋರ್ಟ್ ಮೌಖಿಕ ಆದೇಶ ನೀಡಿದೆ. ಈ ಸಂಬಂಧ ಶೀಘ್ರದಲ್ಲೇ ವಿವರವಾದ ಆದೇಶ ಬಿಡುಗಡೆ ಆಗಲಿದೆ. ಹೈ ಕೋರ್ಟ್ ರಾಜ್ಯವ್ಯಾಪಿ ಕಂಬಳಕ್ಕೆ ಗ್ರೀನ್ ಸಿಗ್ನಲ್ ಆದೇಶ ಹೊರಡಿಸುತ್ತಿದ್ದಂತೆ ಕಂಬಳ ಪ್ರೇಮಿಗಳು, ಅಭಿಮಾನಿಗಳು ಹಿರಿ ಹರಿ ಹಿಗ್ಗಿದ್ದಾರೆ. 

ಬೆಂಗಳೂರಲ್ಲಿ ಕಂಬಳವಾದಾಗ PETA (India's Animal Rights Organisation) ದವರು ನ್ಯಾಯಾಲಯದ ಮೊರೆ ಹೋಗಿದ್ದರು. ಕಂಬಳದಲ್ಲಿ ಪಾಲ್ಗೊಳ್ಳುವ ಕೋಣಗಳನ್ನು ಹಿಂಸಿಸಲಾಗುತ್ತದೆ ಎನ್ನುವುದು ಪೆಟಾದವರ ವಾದವಾಗಿತ್ತು. ಇದರಿಂದ ಮೈಸೂರು ಹಾಗೂ ಶಿವಮೊಗ್ಗದಲ್ಲಿ ಕಂಬಳ ನಡೆಸಲು ಅಡ್ಡಿಯಾಗಿತ್ತು. ಕೋಣಗಳನ್ನು ವಾಹನಗಳಲ್ಲಿ ಕರೆದುಕೊಂಡು ಹೋಗುವುದರಿಂದಲೂ ತೊಂದರೆ ಆಗುತ್ತೆ. ವಾತಾವರಣ ಬದಲಾವಣೆಯಿಂದ ಕೋಣಗಳಿಗೆ ಹಿಂಸೆಯಾಗುತ್ತೆ ಎಂಬುದು ಪೇಟಾದವರು ಕೋರ್ಟ್​ ಮುಂದಿಟ್ಟಿದ್ದರು. 

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಕರಾವಳಿ ಹೊರತುಪಡಿಸಿ ಕಂಬಳ ಆಯೋಜಿಸಬಾರದು ಎಂದರೆ ಅದು ವಿಭಜಕ ಭಾವನೆ ಆಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಹೀಗಾಗಿ ರಾಜ್ಯದ ಬೇರೆ ಬೇರೆ ಕಡೆಗಳಲ್ಲೂ ಕಂಬಳ ಆಯೋಜಿಸಲು ಕಾನೂನು ನಿಯಮ ರೂಪಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬಹುದು ಎಂದು ಕೋರ್ಟ್ ಹೇಳಿದೆ. 

ಇದನ್ನೂ ಓದಿ: ವಿಕ್ಟೋರಿಯಾ ಆಸ್ಪತ್ರೆ ವೈದ್ಯೆ ಪ್ರಕರಣ; ತನಿಖೆ ಕುರಿತು ಬೆಂಗಳೂರು ಕಮಿಷನರ್ ಹೇಳಿದ್ದು ಏನು?

KAMBALA_GREEN

ಇನ್ನು ಮಂಗಳೂರಿನ ಪಿಲಿಕುಳದಲ್ಲಿ ಕಂಬಳ ಆಯೋಜಿಸಲು ಅನುಮತಿ ನೀಡಬಾರದು ಎಂದು ಪೇಟಾದವರು ನ್ಯಾಯಾಲಯವನ್ನು ಕೋರಿದ್ದಾರೆ. ಈ ಕುರಿತ ಅರ್ಜಿ ವಿಚಾರಣೆಯನ್ನು ನವೆಂಬರ್ 11ಕ್ಕೆ ಕೋರ್ಟ್​ ಮುಂದೂಡಿಕೆ ಮಾಡಿದೆ. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Kantara buffalo Kambala
Advertisment