Advertisment

ಪ್ರೀತಿಗೆ ಅಡ್ಡ ಬಂದ ಜಾತಿ.. ಕೇವಲ 18 ವರ್ಷಕ್ಕೆ ದುರಂತ ಅಂತ್ಯ ಕಂಡ ಪ್ರೇಮಿಗಳು

ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದಕ್ಕೆ ಪ್ರೇಮಿಗಳು ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಈ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಬ್ಯಾಟರಾಯನಹಳ್ಳಿ ರೈಲ್ವೇ ನಿಲ್ದಾಣ ಬಳಿ ನಡೆದಿದೆ. ಇಂದು ಬೆಳಗ್ಗೆ ಬೆಂಗಳೂರಿಗೆ ತೆರಳುವ ರೈಲಿಗೆ ಸಿಲುಕಿ ಪ್ರೇಮಿಗಳಿಬ್ಬರು ಜೀವ ಕಳೆದುಕೊಂಡಿದ್ದಾರೆ.

author-image
Ganesh Kerekuli
kolar lover death new

ದುರಂತ ಅಂತ್ಯ ಕಂಡ ಪ್ರೇಮಿಗಳು Photograph: (ದುರಂತ ಅಂತ್ಯ ಕಂಡ ಪ್ರೇಮಿಗಳು)

Advertisment

ಕೋಲಾರ: ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದಕ್ಕೆ ಪ್ರೇಮಿಗಳು ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.  ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬ್ಯಾಟರಾಯನಹಳ್ಳಿ ರೈಲ್ವೇ ನಿಲ್ದಾಣ ಬಳಿ ನಡೆದಿದೆ. ಇಂದು ಬೆಳಿಗ್ಗೆ ಬೆಂಗಳೂರಿಗೆ ತೆರಳುವ ರೈಲಿಗೆ ಸಿಲುಕಿ ಪ್ರೇಮಿಗಳು ಪ್ರಾಣ ಬಿಟ್ಟಿದ್ದಾರೆ.  

Advertisment

ಮಾಲೂರು ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದ 18 ವರ್ಷದ ಸತೀಶ್​ ಎಂಬಾತ ಹಾಗೂ ಮಾಲೂರು ತಾಲೂಕಿನ ಪನಮಾಕನಹಳ್ಳಿ ಗ್ರಾಮದ 17 ವರ್ಷದ ಶ್ವೇತಾ ಎಂಬಾಕೆ ಮೃತಪಟ್ಟಿದ್ದಾರೆ. ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಮುಂಬರುವ ದಿನಗಳಲ್ಲಿ ಮದುವೆಯಾಗಬೇಕು ಎಂದು ಅಂದುಕೊಂಡಿದ್ದರು. ಆದ್ರೆ ಅನ್ಯ ಜಾತಿ ಎಂದು ಈ ಇಬ್ಬರ ಪ್ರೀತಿಗೆ ಪೋಷಕರ ವಿರೋಧ ವ್ಯಕ್ತಪಡಿಸಿದ್ದಾರೆ. 

ನಿನ್ನೆಯಷ್ಟೇ ಸತೀಶ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದ. ಆದ್ರೀಗ ತಮ್ಮ ಪ್ರೀತಿಗೆ  ಪೋಷಕರ ವಿರೋಧ ವ್ಯಕ್ತಪಡಿಸಿದಕ್ಕೆ ಮನನೊಂದು ಬೆಂಗಳೂರಿಗೆ ತೆರಳುವ ರೈಲಿಗೆ ಸಿಲುಕಿ ಸತೀಶ್​ ಹಾಗೂ ಶ್ವೇತಾ ದುರಂತ ಅಂತ್ಯ ಕಂಡಿದ್ದಾರೆ. ಸ್ಥಳಕ್ಕೆ ಬೆಂಗಳೂರಿನ ರೈಲ್ವೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಧ್ರುವ ನನಗೆ ‘ದೇವರು ಕೊಟ್ಟ ತಮ್ಮ’ ಎಂದ ಮೇಘನಾ ರಾಜ್ -VIDEO

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

kolar lovers death
Advertisment
Advertisment
Advertisment