/newsfirstlive-kannada/media/media_files/2026/01/03/mandya-bar-2026-01-03-16-26-28.jpg)
ಮಂಡ್ಯ: ಎಣ್ಣೆ ಕೊಡದಿದ್ದಕ್ಕೆ ಬಾರ್​ಗೆ ಬೆಂಕಿಯಿಟ್ಟು ಅಟ್ಟಹಾಸ ಮೆರೆದಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಅಗಸರಹಳ್ಳಿಯಲ್ಲಿ ನಡೆದಿದೆ. ಪುಡಾರಿಗಳ ಪುಂಡಾಟದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಅಗಸರಹಳ್ಳಿ ಗೇಟ್ ಬಳಿ ಪರಮೇಶ್ ಅನ್ನೋರು ಈಗಲ್ ಬಾರ್ ಅಂಡ್ ರೆಸ್ಟೋರೆಂಟ್ ನಡೆಸ್ತಿದ್ದಾರೆ. ಇವರ ಬಾರ್​ಗೆ ನಿನ್ನೆ ರಾತ್ರಿ ಎಂಟ್ರಿ ನೀಡಿದ್ದ ಮುರುಕನಹಳ್ಳಿ ಗ್ರಾಮದ ರಕ್ಷಿತ್ ಹಾಗೂ ಆತನ ಸ್ನೇಹಿತರಿಬ್ಬರು, ಉಚಿತವಾಗಿ ಎಣ್ಣೆ ನೀಡುವಂತೆ ಕೇಳಿದ್ದಾರೆ. ಇದಕ್ಕೆ ಬಾರ್​ನ ಸಿಬ್ಬಂದಿ ಒಪ್ಪಿಲ್ಲ.
ಅದಕ್ಕೆ ರಾಕ್ಷಸರಂತೆ ವರ್ತಿಸಿದ ಕಿಡಿಗೇಡಿಗಳು, ಬಾರ್ ಮಾಲೀಕನ ಕಾರ್​ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ದಾಂದಲೆ ನಡೆಸಿದ್ದಾರೆ. ನಂತರ ಬಾರ್​​ನ ಮುಂಭಾಗಕ್ಕೆ ಬೆಂಕಿ ಹಚ್ಚಿದ್ದಾರೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಗಿಲ್ಲಿ ಮೇಲೆ ವೀಕ್ಷಕರಿಗೆ ಈ ವಾರ ಬೇಸರ.. ಅಶ್ವಿನಿ ಪರ ಅನುಕಂಪದ ಅಲೆ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us