/newsfirstlive-kannada/media/media_files/2025/09/22/khasagi-darbar1-2025-09-22-14-04-11.jpg)
ಮೈಸೂರು:ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಖಾಸಗಿ ದರ್ಬಾರ್​ ಆರಂಭವಾಗಿದೆ. ಅಂಬಾವಿಲಾಸ ಅರಮನೆಯಲ್ಲಿ ಯದುವಂಶದ ಖಾಸಗಿ ದರ್ಬಾರ್ ಆರಂಭವಾಗಿದೆ. ರಾಜವಂಶಸ್ಥ ಯದುವೀರ್ ಒಡೆಯರ್​ ಸಿಂಹಾಸನವೇರಿ ಧಾರ್ಮಿಕ ವಿಧಿ ವಿಧಾನ ನಡೆಸುತ್ತಿದ್ದಾರೆ.
ಬೆಳಗ್ಗೆ 5.30 ರಿಂದ 6.45 ರ ಒಳಗಿನ ಶುಭ ಮುಹೂರ್ತದಲ್ಲಿ ರತ್ನಖಚಿತ ಸಿಂಹಾಸನಕ್ಕೆ ಸಿಂಹದ ಮುಖ ಜೋಡಣೆ ಮಾಡಲಾಗಿತ್ತು. ಬಳಿಕ ಬೆಳಗ್ಗೆ 9:55 ರಿಂದ 10 : 15 ರ ಒಳಗೆ ಚಾಮುಂಡಿ ತೊಟ್ಟಿಯಲ್ಲಿ ಯದುವೀರ್ ಹಾಗೂ ತ್ರಿಷಿಕಾ ಕುಮಾರಿ ಒಡೆಯರ್ ರವರಿಗೆ ವಾಣಿವಿಲಾಸ ದೇವರ ಮನೆಯಲ್ಲಿ ಕಂಕಣ ಧಾರಣೆ ಮಾಡಲಾಯಿತು. ಬೆಳಗ್ಗೆ 11: 35ಕ್ಕೆ ಅರಮನೆಯ ಆವರಣದ ಕೋಡಿ ಸೋಮೇಶ್ವರ ದೇವಾಲಯದ ಬಳಿ ಪಟ್ಟದ ಆನೆ ಹಾಗೂ ಕುದುರೆ, ಹಸು ಸೇರಿದಂತೆ ಮಹಿಳೆಯರು ಕಳಸ ಹೊತ್ತು ಆಗಮಿಸಿದ್ದು, ಮಂಗಳವಾದ್ಯದೊಂದಿಗೆ ಸವಾರ್ ತೊಟ್ಟಿಯ ಬಳಿ ಪೂಜಾ ಕಂಕೈರ್ಯಗಳು ನೆರವೇರಿದವು. ನಂತರ ಮಧ್ಯಾಹ್ನ 2:05 ರ ಒಳಗೆ ಚಾಮುಂಡೇಶ್ವರಿ ಅಮ್ಮನವರ ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ವಿಜಯ ಯಾತ್ರೆ ಸಾಗಿತು.
ಸೆಪ್ಟೆಂಬರ್​ 23 ರಿಂದ 29ರ ಸಂಜೆವರೆಗೆ ಖಾಸಗಿ ದರ್ಬಾರ್ ಜರುಗಲಿದೆ. ಸೆಪ್ಟೆಂಬರ್ 29 ರಂದು ಬೆಳಗ್ಗೆ 10: 10 ರಿಂದ 10:30 ರ ಒಳಗೆ ಒಡೆಯರ್ ಸರಸ್ವತಿ ಪೂಜೆ ನೆರವೇರಿಸಲಿದ್ದಾರೆ. ಅಂದು ರಾತ್ರಿ ಖಾಸಗಿ ದರ್ಬಾರ್ ಕೊನೆಗೊಳ್ಳಲಿದೆ. ಖಾಸಗಿ ದರ್ಬಾರ್ ಮುಗಿದ ಬಳಿಕ ಕನ್ನಡಿ ತೊಟ್ಟಿಯಲ್ಲಿ ಕಾಳ ರಾತ್ರಿ ಪೂಜೆ ನಡೆಯಲಿದೆ.
ಆಯುಧ ಪೂಜೆಯ ದಿನದಂದು ಬೆಳಿಗ್ಗೆ 6 ಗಂಟೆಗೆ ಚಂಡಿ ಹೋಮ ನಡೆಯಲಿದೆ. ಬಳಿಕ ಬೆಳಗ್ಗೆ 7:30 ರಿಂದ 7: 42 ರ ಒಳಗೆ ಪಟ್ಟದ ಕತ್ತಿ ಸೇರಿದಂತೆ ಖಾಸ ಆಯುಧಗಳನ್ನ ಅರಮನೆಯಿಂದ ಕೋಡಿ ಸೋಮೇಶ್ವರ ದೇವಸ್ಥಾನದ ಕಳುಹಿಸಿ ಪೂಜೆ. ನಂತರ ಬೆಳಗ್ಗೆ 8 ರಿಂದ 8: 40 ರ ಒಳಗೆ ಕತ್ತಿ ಹಾಗೂ ಖಾಸ ಆಯುಧಗಳನ್ನ ಕಲ್ಯಾಣ ಮಂಟಪಕ್ಕೆ ಕರೆತಂದು ಪೂಜೆ. ಬೆಳಗ್ಗೆ 10: 35 ಕ್ಕೆ ಕಲ್ಯಾಣ ಮಂಟಪದಲ್ಲಿ ಆಯುಧ ಪೂಜೆ ನೆರವೇರಲಿದೆ. ಅಂದಿನ ಸಂಜೆ ಸಿಂಹ ಹಾಗೂ ಯದುವೀರ್, ತ್ರಿಷಿಕಾ ಕುಮಾರಿ ಒಡೆಯರ್ ಕಂಕಣ ವಿಸರ್ಜನೆ ಮಾಡಲಿದ್ದಾರೆ.
ಅಕ್ಟೋಬರ್ 2 ರಂದು ಬೆಳಗ್ಗೆ 10 ಗಂಟೆಗೆ ವಿಜಯ ದಶಮಿ ಪೂಜೆ ನಡೆಯಲಿದೆ. ಬಳಿಕ ಬೆಳಗ್ಗೆ 10:55ಕ್ಕೆ ವಿಜಯ ಯಾತ್ರೆ ಆರಂಭಗೊಳ್ಳಲಿದೆ. ಎಲ್ಲಾ ಪೂಜೆ ಕೈಂಕರ್ಯ ಮುಗಿದ ಬಳಿಕ ವಿಶ್ವವಿಖ್ಯಾತ ನಾಡಹಬ್ಬ ದಸರಾ ಜಂಬೂ ಸವಾರಿ ಸಾಗಲಿದೆ.
ಇದನ್ನೂ ಓದಿ:ಶಿವಗಣ, ಕಾರ್ಣಿಕ ಕಲ್ಲು, ಕಾಂತಾರ ಬೆಂಕಿ! ಕ್ಯೂರಿಯಾಸಿಟಿ ಹೆಚ್ಚಿಸಿದ ಟ್ರೈಲರ್!