/newsfirstlive-kannada/media/media_files/2025/10/09/jayasri-suicide-note-2025-10-09-16-11-00.jpg)
ಆತ್ಮಹತ್ಯೆಗೆ ಶರಣಾದ ಜಯಶ್ರೀ, ಪತಿ ಚಂದ್ರಶೇಖರ್ , ಆಕೆಯ ಡೆತ್ ನೋಟ್
ಗಂಡನ ಅನೈತಿಕ ಸಂಬಂಧದಿಂದ ನೊಂದು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ ಬಾತ್ ರೂಮುನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಕೆ. ಚಿಕ್ಕಬಳ್ಳಾಪುರದ ಕೊಂಡಾವಲಹಳ್ಳಿ ಗ್ರಾಮದ ತನ್ನ ತವರು ಮನೆಯಲ್ಲಿ ನವ ವಿವಾಹಿತೆ ಕೆ.ಎಸ್.ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರು ತಿಂಗಳ ಹಿಂದೆಯಷ್ಟೇ ಜಯಶ್ರೀ ವಿವಾಹವಾಗಿದ್ದರು. ಫೇಸ್ ಬುಕ್ ನಲ್ಲಿ ಪತಿ ಚಂದ್ರಶೇಖರ್ ವಿರುದ್ಧ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೊಂಡಪ್ಪನಹಳ್ಳಿ ಗ್ರಾಮದ ಚಂದ್ರಶೇಖರ್ ಜೊತೆ ಜಯಶ್ರೀ 6 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು.
ಶಿಡ್ಲಘಟ್ಟ ತಾಲ್ಲೂಕಿನ ಕೊಂಡಪ್ಪನಹಳ್ಳಿ ಗ್ರಾಮದ ಚಂದ್ರಶೇಖರ್ ಯಾವಾಗಲೂ ಯುವತಿಯೊಬ್ಬಳ ಜೊತೆ ಚಾಟಿಂಗ್​ ಮಾಡುತ್ತಿದ್ದ. ಇದನ್ನ ಪ್ರಶ್ನಿಸಿದ್ದಕ್ಕೆ ಪತಿ ಚಂದ್ರಶೇಖರ್​​ನಿಂದ ಪತ್ನಿ ಜಯಶ್ರೀಗೆ ಕಿರುಕುಳ ನೀಡಲಾಗಿತ್ತಂತೆ. ಈ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿವುದಾಗಿ ಡೆತ್ ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ.
/filters:format(webp)/newsfirstlive-kannada/media/media_files/2025/10/09/jayasri-suicide-note02-2025-10-09-16-19-55.jpg)
ಪತಿ ಚಂದ್ರಶೇಖರ್ ನನ್ನು ಬಂಧಿಸುವವರೆಗೆ ಶವ ಸಂಸ್ಕಾರ ಮಾಡಲ್ಲ ಅಂತ ಜಯಶ್ರೀ ಪೋಷಕರು ಪಟ್ಟು ಹಿಡಿದಿದ್ದಾರೆ. ಕೊಂಡಾವಲಹಳ್ಳಿ ಗ್ರಾಮದಲ್ಲಿ ನೀರವ ಮೌನ ಮಡುಗಟ್ಟಿದೆ. ಸ್ಥಳಕ್ಕೆ ಗುಡಿಬಂಡೆ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us