Advertisment

ರಾಯಚೂರಿಗೆ ಬೇಡ, ತಿಮರೋಡಿಯನ್ನ ಕಾಡಿಗೆ ಕಳುಹಿಸಿ -ಭಾರೀ ಪ್ರತಿಭಟನೆ

ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನ ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಲು ಆದೇಶ ನೀಡಲಾಗಿದೆ. ರಾಯಚೂರಿನ ಜನರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ತಿಮರೋಡಿ ಇಲ್ಲಿಗೆ ಬರೋದು ಬೇಡ, ಯಾವುದಾದರೂ ಕಾಡಿಗೆ ಕಳುಹಿಸಿ ಅಂತಾ ದಲಿತ ಸೇನೆ ಮತ್ತು ಸಮಾನ ಮನಸ್ಕರ ವೇದಿಕೆ ಆಗ್ರಹಿಸಿದೆ.

author-image
Ganesh Kerekuli
Mahesh timarodi

ಮಹೇಶ್ ಶೆಟ್ಟಿ ತಿಮರೋಡಿ Photograph: (ಮಹೇಶ್ ಶೆಟ್ಟಿ ತಿಮರೋಡಿ)

Advertisment

ರಾಯಚೂರು: ಸೌಜನ್ಯ ಪ್ರಕರಣ ಹೊರಾಟದಲ್ಲಿ ಮುಂಚೂಣಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನ (Mahesh Shetty Thimarodi) ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಲಾಗಿದೆ. ಬೆನ್ನಲ್ಲೇ ರಾಯಚೂರಿನ ಜನ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ತಿಮರೋಡಿ ಇಲ್ಲಿಗೆ ಬರೋದು ಬೇಡ, ಯಾವುದಾದರೂ ಕಾಡಿಗೆ ಕಳುಹಿಸಿ ಎಂದು ದಲಿತ ಸೇನೆ ಮತ್ತು ಸಮಾನ ಮನಸ್ಕರ ವೇದಿಕೆ ಆಗ್ರಹಿಸಿದೆ.  

Advertisment

ಕಾಡಿಗೆ ಕಳುಹಿಸಿ..!

ನಿನ್ನೆ ಮಹೇಶ್​ ಶೆಟ್ಟಿಯನ್ನ ದಕ್ಷಿಣ ಕನ್ನಡ ಜಿಲ್ಲೆಯಿಂದಲೇ ಗಡಿಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದರು. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರಿ ಮಾಡಲಾಗಿತ್ತು. ಒಂದು ವರ್ಷದ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ, ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು.

ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿರೋದು ಅಲ್ಲಿನ ಜನರ ಕೆಂಗಣ್ಣಿಗೆ ಗುರಿಯಾಗಿದೆ. ರಾಯಚೂರು ದಲಿತಪರ ಸಂಘಟನೆ ಹಾಗೂ ಸಮಾನ ಮನಸ್ಕರ ವೇದಿಕೆ ವತಿಯಿಂದ ಇಂದು ಪ್ರತಿಭಟನೆ ನಡೆದಿದೆ. ‘ನಮ್ಮ ರಾಯಚೂರು ಜಿಲ್ಲೆಯಲ್ಲಿ ಗೂಂಡಾಗಳಿಗೆ ಜಾಗವಿಲ್ಲ. ಬೇಕಾದರೆ ಮಹೇಶ್​ ತಿಮರೋಡಿಯನ್ನ ಕಾಡಿಗೆ ಕಳುಹಿಸಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮಹೇಶ್  ಶೆಟ್ಟಿ ತಿಮರೋಡಿ ಮೇಲೆ ಸುಮಾರು 32  ಪ್ರಕರಣಗಳು ದಾಖಲಾಗಿವೆ. ಸೌಜನ್ಯ ಹೋರಾಟದಲ್ಲಿ ತೊಡಗಿಸಿ ಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಈಗ ಬುರುಡೆ ಪ್ರಕರಣ ಹಾಗೂ ಶವ ಹೂತಿಟ್ಟ ಪ್ರಕರಣದಲ್ಲಿ ಆರೋಪಿ ಚೆನ್ನಯ್ಯನಿಗೆ ಆಶ್ರಯ‌ ನೀಡಿರುವ ಆರೋಪ ಹೊತ್ತಿದ್ದಾರೆ.  

Advertisment

ಇದನ್ನೂ ಓದಿ: ಕರ್ನಾಟಕದಲ್ಲಿ ಒಂದು ಆನೆಗಾಗಿ 2 ಮಠಗಳ ಮಧ್ಯೆ ಫೈಟ್! ಏನಿದು ‘ಗಜ’ ಸಂಘರ್ಷ..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.

dharmasthala Dharmasthala case Mahesh Thimaroddi dharmasthala case, sameer md Chenna Dharmasthala HD Deve Gowda on Dharmasthala case BJP JDS on Dharmasthala
Advertisment
Advertisment
Advertisment