/newsfirstlive-kannada/media/media_files/2025/10/16/cm_siddaramaiah-1-2025-10-16-15-46-22.jpg)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಆರ್​ಎಸ್​ಎಸ್​ ಸೇರಿದಂತೆ ಖಾಸಗಿ ಸಂಘಟನೆಗಳು ಸರ್ಕಾರದ ಸ್ಥಳಗಳಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧಿಸಿದೆ.
ಮೊನ್ನೆ ಮೊನ್ನೆ ಅಷ್ಟೇ ಸಚಿವ ಪ್ರಿಯಾಂಕ್ ಖರ್ಗೆ ಅವರು, ಸರ್ಕಾರಿ ಜಾಗದಲ್ಲಿ ಆರ್​ಎಸ್​ಎಸ್ ಸೇರಿ ಯಾವುದೇ ಖಾಸಗಿ ಸಂಘಟನೆಗಳು ಚಟುವಟಿಕೆ ನಡೆಸಬಾರದು ಎಂದು ಸಿಎಂಗೆ ಪತ್ರ ಬರೆದಿದ್ದರು. ಇದಾದ ಮೇಲೆ ಬಿಜೆಪಿ ಹಾಗೂ ಕಾಂಗ್ರೆಸ್​ ನಾಯಕರ ನಡುವೆ ವಾಗ್ವಾದಗಳು ನಡೆದಿದ್ದವು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ಸೂರ್ಯಕಾಂತಿ ನೋಡಲು ಎಷ್ಟು ಚಂದವೋ.. ನಮ್ಮ ಆರೋಗ್ಯಕ್ಕೂ ಅಷ್ಟೇ ಉಪಯೋಗ..!
ಪೂರ್ವಾನುಮತಿ ಇಲ್ಲದೇ ಆರ್ಎಸ್ಎಸ್ ಬೈಠಕ್ ನಡೆಸುವಂತಿಲ್ಲ ಎಂದು ತಮಿಳುನಾಡಿನ ಮಾದರಿಯಲ್ಲಿ ರಾಜ್ಯ ಸರ್ಕಾರ ನಿರ್ಬಂಧವನ್ನು ವಿಧಿಸಿದೆ. ಈ ಸಂಬಂಧ ಸಭೆಯಲ್ಲಿ ಖುದ್ದು ವಿಷಯವನ್ನು ಸಿಎಂ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದ್ದಾರೆ. ಇತ್ತೀಚೆಗೆ ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ್ದ ವಿಚಾರ ಕುರಿತು ಈ ಪ್ರಸ್ತಾಪ ಮಾಡಲಾಗಿದೆ.
- ರಾಜ್ಯದಲ್ಲಿ ಆರ್ಎಸ್ಎಸ್ ಚಟುವಟಿಕೆಗೆ ನಿರ್ಬಂಧ
- ವಿಧಾನಸೌಧದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
- ಸರ್ಕಾರಿ ಶಾಲಾ ಮೈದಾನ, ಸಾರ್ವಜನಿಕ ಸ್ಥಳಗಳಲ್ಲಿ ಆರ್ಎಸ್ಎಸ್ ಬೈಠಕ್​​ಗೆ ಬ್ರೇಕ್
- ಪೂರ್ವಾನುಮತಿ ಇಲ್ಲದೇ ಆರ್ಎಸ್ಎಸ್ ಬೈಠಕ್ ನಡೆಸುವಂತಿಲ್ಲ
- ಖುದ್ದು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ದ ಸಿಎಂ ಸಿದ್ದರಾಮಯ್ಯ
- ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ್ದ ವಿಚಾರ ಕುರಿತು ಪ್ರಸ್ತಾಪ
- ತಮಿಳುನಾಡಿನ ಮಾದರಿಯಲ್ಲಿ ನಿರ್ಬಂಧ ವಿಧಿಸಲು ನಿರ್ಧಾರ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ