ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಪ್ರಯಾಣಿಕರ ಸುರಕ್ಷತೆ ಹಲವಾರು ಕ್ರಮಗಳು: ಹಿರಿಯೂರು ಬಸ್ ದುರಂತದ ಹಿನ್ನಲೆಯಲ್ಲಿ ಕ್ರಮ

ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಹಿರಿಯೂರು ಬಳಿ ಸೀ ಬರ್ಡ್ ಬಸ್ ಬೆಂಕಿಗಾಹುತಿಯಾಗಿತ್ತು. ಈ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ.

author-image
Chandramohan
KSRTC BUS POOJE CHAREGE02

KSRTC ಬಸ್ ನಲ್ಲಿ ಸುರಕ್ಷತಾ ಕ್ರಮ ಜಾರಿ

Advertisment
  • KSRTC ಬಸ್ ನಲ್ಲಿ ಸುರಕ್ಷತಾ ಕ್ರಮ ಜಾರಿ
  • ತುರ್ತು ಸಂದರ್ಭಗಳಲ್ಲಿ ಮಾಡಬೇಕಾದ್ದು ಏನೇನು?
  • ಎಮರ್ಜೆನ್ಸಿ ಡೋರ್ ಬಳಕೆ ಬಗ್ಗೆ ಮಾಹಿತಿ


ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್ಸುಗಳಲ್ಲಿ ಪ್ರಯಾಣಿಸುವಾಗ ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ರಕ್ಷಣೆಗೆ ಅಗತ್ಯವಿರುವ ಹಲವಾರು ಸುರಕ್ಷತಾ ವ್ಯವಸ್ಥೆಗಳನ್ನು ಒದಗಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದೆ.

ತುರ್ತು ಪರಿಸ್ಥಿತಿಯಲ್ಲಿ ಪ್ರಯಾಣಿಕರು ತೆಗೆದುಕೊಳ್ಳಬೇಕಾದ ಕ್ರಮಗಳು:
ಎಲ್ಲಾ ಬಸ್ಸುಗಳ ಒಳಭಾಗದಲ್ಲಿ ಪ್ಯಾನಿಕ್ ಬಟನ್ಗಕಳನ್ನು ಅಳವಡಿಸಲಾಗಿದೆ. ಅಗ್ನಿ ಅವಘಡ, ವೈದ್ಯಕೀಯ ತುರ್ತು ಪರಿಸ್ಥಿತಿ, ಪ್ರಯಾಣಿಕರ ಸುರಕ್ಷತೆಗೆ ಅಪಾಯ ಈ ತುರ್ತು ಸಂದರ್ಭಗಳಲ್ಲಿ ಮಾತ್ರ ಪ್ಯಾನಿಕ್ ಬಟನ್ ಒತ್ತಬೇಕು. ಪ್ಯಾನಿಕ್ ಬಟನ್ ಒತ್ತಿದ ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ತಲುಪುತ್ತದೆ.

ಅಗ್ನಿ ನಂದಕ (ಫೈರ್ ಎಕ್ಸಿಂಗ್ಲಿಷರ್):
ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿ ಅಗ್ನಿ ನಂದಕಗಳನ್ನು ಒದಗಿಸಲಾಗಿದೆ. ಅಗ್ನಿ ಅವಘಡ ಸಂಭವಿಸಿದಲ್ಲಿ ತಕ್ಷಣ ಚಾಲಕರಿಗೆ ಮಾಹಿತಿ ನೀಡಬೇಕು. ತರಬೇತಿ ಪಡೆದಿದ್ದರೆ ಅಗ್ನಿ ನಂದಕವನ್ನು ಸಿಬ್ಬಂದಿಯು ಬಳಸಿ ಅಗ್ನಿ ಶಾಮನ ಮಾಡಬೇಕು. ಸಿಬ್ಬಂದಿಯ  ಸೂಚನೆಗಳನ್ನು  ಪ್ರಯಾಣಿಕರು ಶಾಂತವಾಗಿ ಅನುಸರಿಸಬೇಕು.


ತುರ್ತು ನಿರ್ಗಮನ ದ್ವಾರ:
ತುರ್ತು ನಿರ್ಗಮನ ದ್ವಾರಗಳನ್ನು ಸ್ಪಷ್ಟವಾಗಿ ಗುರುತಿಸಲಾಗಿದೆ. ಸಾಮಾನ್ಯ ಬಾಗಿಲುಗಳು ತೆರೆಯಲು ಆಗದಿದ್ದಾಗ ಅಥವಾ ಸೂಚನೆ ದೊರೆತಾಗ ಮಾತ್ರ ತುರ್ತು ನಿರ್ಗಮನ ದ್ವಾರವನ್ನು ಬಳಸಬೇಕು. ತುರ್ತು ನಿರ್ಗಮನ ದ್ವಾರವನ್ನು ಸಿಬ್ಬಂದಿಗಳಾಗಲಿ ಅಥವಾ ಪ್ರಯಾಣಿಕರಾಗಲಿ ಲಗ್ಗೇಜುಗಳಿಂದ ಮುಚ್ಚಬಾರದು.


ತುರ್ತು ಹ್ಯಾಮರ್ (ಸುತ್ತಿಗೆ):
ಬಸ್ಸುಗಳಲ್ಲಿ ಕಿಟಕಿಗಳ ಬಳಿ ತುರ್ತು ಹ್ಯಾಮರ್ ಗಳನ್ನು (ಸುತ್ತಿಗೆಗಳನ್ನು)  ಅಳವಡಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಮಾತ್ರ ಕಿಟಕಿಯ ಗಾಜನ್ನು ಒಡೆಯಲು ಬಳಸಬೇಕು. ಗಾಜು ಸುಲಭವಾಗಿ ಒಡೆಯಲು ಅದರ ಮೂಲೆ ಭಾಗದಲ್ಲಿ ಹೊಡೆಯಬೇಕು.


ಪ್ರಯಾಣಿಕರ ಸುರಕ್ಷತಾ ಸೂಚನೆಗಳು:
ಬಸ್ ಚಲಿಸುತ್ತಿರುವಾಗ ಅಸನದಲ್ಲೇ ಕುಳಿತುಕೊಳ್ಳಬೇಕು, ಸಿಬ್ಬಂದಿಯಿಂದ ನೀಡಲಾಗುವ ಸೂಚನೆಗಳನ್ನು ಅನುಸರಿಸಬೇಕು. ತುರ್ತು ಸಂದರ್ಭಗಳಲ್ಲಿ ಮಕ್ಕಳು, ವೃದ್ಧರು ಹಾಗೂ ಅಂಗವಿಕಲರಿಗೆ ಸಹಾಯ ಮಾಡಬೇಕು. ಯಾವುದೇ ತುರ್ತು ಪರಿಸ್ಥಿತಿಯಲ್ಲಿ ತಕ್ಷಣ ಚಾಲಕರಿಗೆ ಮಾಹಿತಿ ನೀಬೇಕು. ಸಿಬ್ಬಂದಿ ಹಾಗೂ ಸಹ ಪ್ರಯಾಣಿಕರೊಂದಿಗೆ ಸಹಕರಿಸಬೇಕು.

ಕೆ.ಎಸ್.ಆರ್.ಟಿ.ಸಿ ಬದ್ಧತೆ:
ಕೆ.ಎಸ್.ಆರ್.ಟಿ.ಸಿ ಸುರಕ್ಷಿತ, ವಿಶ್ವಾಸಾರ್ಹ ಮತ್ತು ಅರಾಮದಾಯಕ ಪ್ರಯಾಣವನ್ನು ಒದಗಿಸಲು ಬದ್ಧವಾಗಿದೆ. ಪ್ರಯಾಣಿಕರ ಜಾಗೃತೆ ಮತ್ತು ಸಹಕಾರದಿಂದ ಎಲ್ಲರಿಗೂ ಸುರಕ್ಷಿತ ಪ್ರಯಾಣ ಸಾಧ್ಯ. ಕೆ.ಎಸ್. ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

KSRTC






ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

KSRTC KSRTC BUS
Advertisment