BREAKING: ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಮೇಲೆ ಕಲ್ಲೆಸೆತ

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಎಂಟಿಸಿ, ಕೆಎಸ್​ಆರ್​ಟಿಸಿ ಸೇರಿದಂತೆ 4 ವಿಭಾಗಗಳ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದೆ. ಇದರ ಮಧ್ಯೆ ಯಲಬುರ್ಗಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್​ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ.

author-image
Veenashree Gangani
bus band Koppal
Advertisment

ಕೊಪ್ಪಳ: ವೇತನ ಪರಿಷ್ಕರಣೆ ಹಾಗೂ 20 ತಿಂಗಳ ಹಿಂಬಾಕಿ ವೇತನ ಬಿಡುಗಡೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಎಂಟಿಸಿ, ಕೆಎಸ್​ಆರ್​ಟಿಸಿ ಸೇರಿದಂತೆ 4 ವಿಭಾಗಗಳ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದೆ. ಇದರ ಮಧ್ಯೆ ಯಲಬುರ್ಗಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್​ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರ; ಈ ಕುರಿತು ಸಭೆ ಬಳಿಕ ಸಚಿವ ರಾಮಲಿಂಗಾರೆಡ್ಡಿ ಏನೇನು ಹೇಳಿದರು?

bus band Koppal(1)

ಜಿಲ್ಲೆಯ ಕುಕನೂರು ತಾಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಡರಾತ್ರಿ ಯಲಬುರ್ಗಾದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಕಿಡಿಗೇಡಿಗಳು ಕೆಎಸ್​ಆರ್​ಟಿಸಿ ಬಸ್​ ಮೇಲೆ ಕಲ್ಲು ಎಸೆದಿದ್ದಾರೆ. ಕಲ್ಲು ತೂರಿದ ಪರಿಣಾಮ ಬಸ್ ಗ್ಲಾಸ್ ಡ್ಯಾಮೇಜ್ ಆಗಿದೆ. 

ಸಾರಿಗೆ ನೌಕರರ ಬೇಡಿಕೆಗಳೇನು?

01-01-2024ರಿಂದ ನೌಕರರ ವೇತನ ಪರಿಷ್ಕರಣೆ ಆಗಬೇಕು
ನೌಕರರ 38 ತಿಂಗಳ ಹಿಂಬಾಕಿಯನ್ನು ಪಾವತಿ ಮಾಡಬೇಕು
ಸಾರಿಗೆ ನೌಕರರಿಗೆ 7ನೇ ವೇತನ ಆಯೋಗ ಜಾರಿ ಮಾಡಬೇಕು
ಸಾರಿಗೆ ನೌಕರರಿಗೆ ಪ್ರತಿ 4 ವರ್ಷಕೊಮ್ಮೆ ವೇತನ ಪರಿಷ್ಕರಣೆ
ಇನ್ನು ಮುಂದೆ ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಸಬೇಕು
ಈ ಹಿಂದೆ ಮುಷ್ಕರದಲ್ಲಿ ಭಾಗಿಯಾದ ನೌಕರರ ವಜಾ ವಾಪಾಸ್
ನೌಕರರ ಕುಟುಂಬಸ್ಥರ ಮೇಲಿನ ಸುಳ್ಳು ಕೇಸ್​ ವಾಪಾಸ್ ಪಡಿಬೇಕು
ನಗದು ರಹಿತ ವೈದ್ಯಕೀಯ ಸೌಲಭ್ಯ, ಉತ್ತಮ ಕ್ಯಾಂಟೀನ್ ವ್ಯವಸ್ಥೆ
ವಿದ್ಯುತ್‌ ಬಸ್‌ಗಳಲ್ಲಿ ಸಂಸ್ಥೆಯ ಚಾಲಕರನ್ನೇ ನಿಯೋಜಿಸಬೇಕು
ವಿದ್ಯುತ್‌ ಬಸ್‌ಗಳ ನಿರ್ವಹಣೆಯನ್ನ ಖಾಸಗಿಯವರಿಗೆ ನೀಡಬಾರದು 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Transport strike
Advertisment