/newsfirstlive-kannada/media/media_files/2025/10/31/dk-shivakumar-2-2025-10-31-20-58-13.jpg)
ಬೆಂಗಳೂರು: ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ್ ಪುತ್ರನಿಗೆ ಶಿವಕುಮಾರ್ ಎಂದು ಉಪಮುಖ್ಯಮಂತ್ರಿ ಡಿಕೆಶಿ ನಾಮಕರಣ ಮಾಡಿದ್ದಾರೆ. ಈ ವಿಚಾರವನ್ನು ಖುದ್ದು ಡಿ.ಕೆ.ಶಿವಕುಮಾರ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಇದು ಭಾಗ್ಯ, ಇದು ಭಾಗ್ಯವಯ್ಯ ಎಂದಿದ್ದಾರೆ.
ನನ್ನ ಗೃಹಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ "ಶಿವಕುಮಾರ್" ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ!
ಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ, ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ತರುವಂತಾಗಲಿ ಎಂದು ಶುಭಹಾರೈಸಿದೆ. ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ, ಈ ಶಿವಕುಮಾರ ಕರುನಾಡ ಬೆಳಗುವ ಕುವರನಾಗಲಿ ಎಂದು ಮನತುಂಬಿ ಹಾರೈಸುವೆ ಎಂದು ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ!
— DK Shivakumar (@DKShivakumar) October 31, 2025
ನನ್ನ ಗೃಹಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ "ಶಿವಕುಮಾರ್" ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ!
ಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ,… pic.twitter.com/vCshPwiugG
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us