Advertisment

ಕುಡಚಿ ಶಾಸಕನ ಪುತ್ರನಿಗೆ ಡಿಕೆಶಿಯಿಂದ ನಾಮಕರಣ.. ಕಿವಿಯಲ್ಲಿ ಕೂಗಿ ಹೇಳಿದ ಹೆಸರು ಏನು?

ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ್ ಪುತ್ರನಿಗೆ ಶಿವಕುಮಾರ್ ಎಂದು ಉಪಮುಖ್ಯಮಂತ್ರಿ ಡಿಕೆಶಿ ನಾಮಕರಣ ಮಾಡಿದ್ದಾರೆ. ಈ ವಿಚಾರವನ್ನು ಖುದ್ದು ಡಿ.ಕೆ.ಶಿವಕುಮಾರ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಇದು ಭಾಗ್ಯ, ಇದು ಭಾಗ್ಯವಯ್ಯ ಎಂದಿದ್ದಾರೆ.

author-image
Ganesh Kerekuli
DK Shivakumar (2)
Advertisment

ಬೆಂಗಳೂರು: ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ್ ಪುತ್ರನಿಗೆ ಶಿವಕುಮಾರ್ ಎಂದು ಉಪಮುಖ್ಯಮಂತ್ರಿ ಡಿಕೆಶಿ ನಾಮಕರಣ ಮಾಡಿದ್ದಾರೆ. ಈ ವಿಚಾರವನ್ನು ಖುದ್ದು ಡಿ.ಕೆ.ಶಿವಕುಮಾರ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಇದು ಭಾಗ್ಯ, ಇದು ಭಾಗ್ಯವಯ್ಯ ಎಂದಿದ್ದಾರೆ. 

Advertisment

ನನ್ನ ಗೃಹಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ "ಶಿವಕುಮಾರ್" ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ! 

ಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ, ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ತರುವಂತಾಗಲಿ ಎಂದು ಶುಭಹಾರೈಸಿದೆ. ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ, ಈ ಶಿವಕುಮಾರ ಕರುನಾಡ ಬೆಳಗುವ ಕುವರನಾಗಲಿ ಎಂದು ಮನತುಂಬಿ ಹಾರೈಸುವೆ ಎಂದು ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ. 

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

DK Shivakumar
Advertisment
Advertisment
Advertisment