/newsfirstlive-kannada/media/media_files/2025/07/31/rashi_bhavisha-2025-07-31-22-55-03.jpg)
ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.
ಶ್ರೀ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ವರುಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ದ್ವಿತೀಯ ತಿಥಿ, ಉತ್ತರಾಭಾದ್ರಾ ನಕ್ಷತ್ರ, ರಾಹುಕಾಲ ಮಂಗಳವಾರ ಮಧ್ಯಾಹ್ನ 3.00 ರಿಂದ 4.30 ರವರೆಗೆ ಇರಲಿದೆ.
ಮೇಷ ರಾಶಿ
- ದಾಂಪತ್ಯದಲ್ಲಿ ಸಣ್ಣ ಪುಟ್ಟ ವಿಚಾರಗಳಿಗೆ ಕಿರಿಕಿರಿಯಾಗಬಹುದು
- ದಿನ ಪೂರ್ತಿ ಕುಟುಂಬದ ಸದಸ್ಯರೊಂದಿಗೆ ವಿರಸ ಇರಲಿದೆ
- ಇಂದು ಪ್ರಭಾವಿ ವ್ಯಕ್ತಿಗಳು ಮನೆಗೆ ಬರಬಹುದು
- ನಿಮ್ಮ ಯೋಚನೆಯಲ್ಲಿಯೇ ನೀವು ಹೆಚ್ಚು ಮಗ್ನರಾಗಿರುತ್ತೀರಿ
- ನೀವು ಮನೆಯಿಂದ ಹೊರಗೆ ಹೋಗುವುದು ಮನೆಯವರಿಗೆ ಬೇಸರ ಆಗಲಿದೆ
- ವೃಥಾ ಹಣದ ಖರ್ಚು, ಮಾನಸಿಕ ಸಮಾಧಾನವಿರುವುದಿಲ್ಲ
- ಅನಗತ್ಯ ವಾದ-ವಿವಾದಗಳಲ್ಲಿ ಭಾಗಿಯಾಗಬಾರದು
- ಐಕ್ಯಮತ್ಯ ಮಂತ್ರ ಶ್ರವಣ ಮಾಡಿ
ವೃಷಭ
- ಕುಟುಂಬದ ಸದಸ್ಯರಿಗಾಗಿ ಹಣವ್ಯಯ ಮಾಡುವ ಸಾಧ್ಯತೆ
- ಕುಟುಂಬದಲ್ಲಿ ನಿಮ್ಮ ಪ್ರಾಬಲ್ಯದಿಂದಲೇ ಎಲ್ಲ ಸಮಸ್ಯೆ ನಿವಾರಣೆಯಾಗಲಿದೆ
- ಇಂದು ದೂರದಿಂದ ಬರುವ ಅತಿಥಿಗಳ ಬಗ್ಗೆ ತುಂಬಾ ಜಾಗ್ರತೆವಹಿಸಿ
- ವ್ಯವಹಾರದ ದೃಷ್ಟಿಯಿಂದ ಉ್ತತಮ ದಿನ, ಪ್ರಗತಿ ಸಾಧ್ಯತೆ
- ಭೂಮಿ ಅಥವಾ ಜಮೀನಿಗೆ ಸಂಬಂಧಿಸಿದ ಹಳೆಯ ವಿವಾದಗಳಿದ್ದರೆ ಇಂದು ಇತ್ಯರ್ಥ ಆಗಲಿದೆ
- ಆಂಜನೇಯ ಅಷ್ಟೋತ್ತರವನ್ನು ಪಠಿಸಿ
ಮಿಥುನ
- ಕುಟುಂಬದ ಸದಸ್ಯರು, ಬಂಧುಗಳು ಸೌಹಾರ್ದಯುತವಾಗಿ ಮಾತುಕತೆ ನಡೆಸುತ್ತಾರೆ
- ಇಂದು ಮನೆಗೆ ಹೊಸ ಅತಿಥಿ ಬರುವ ಸಾಧ್ಯತೆಯಿದೆ
- ದೂರದ ಪ್ರಯಾಣಕ್ಕೆ ಅವಕಾಶ ಸಿಗುವ ಸೂಚನೆಯಿದೆ
- ಉದ್ಯೋಗದಲ್ಲಿ ನಿರೀಕ್ಷಿತ ಫಲತಾಂಶಗಳಿಂದ ಮನಸ್ಸಿಗೆ ತುಂಬಾ ಸಂತೋಷವಾಗುತ್ತದೆ
- ಈ ದಿನ ಲಾಭದ ಅವಕಾಶಗಳು ಹೆಚ್ಚಾಗುವ ಸಾಧ್ಯತೆಗಳಿವೆ
- ವೈವಾಹಿಕ ಜೀವನದ ಒತ್ತಡ ದೂರವಾಗುವ ಸಾಧ್ಯತೆಯಿದೆ
- ನಿಮ್ಮ ಮೂಲದೇವರನ್ನು ಪ್ರಾರ್ಥಿಸಿ
ಕಟಕ
- ನಾನು ಎಂಬ ಅಹಂಕಾರ ನಿಮಗೆ ಹಿನ್ನಡೆ ಉಂಟುಮಾಡಬಹುದು
- ಕುಟುಂಬದವರ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಿ
- ಅನಗತ್ಯ ಗೊಂದಲಗಳಲ್ಲಿ ಸಿಲುಕಬಹುದು, ಸ್ಥಿರ ಮನಸ್ಸಿನಿಂದ ಎಲ್ಲವನ್ನು ಎದುರಿಸಬಹುದು
- ನೌಕರಿಯ ವಿಚಾರದಲ್ಲಿ ಹಲವಾರು ಸವಾಲುಗಳು ಎದುರಾಗಬಹುದು
- ನಿಮ್ಮ ಅಹಂಕಾರ ಇಂದಿನ ಎಲ್ಲಾ ಕೆಲಸಗಳಿಗೆ ಅಡಚಣೆಯಾಗಬಹುದು
- ಮಹಾವಿಷ್ಣುವನ್ನು ಸ್ಮರಿಸಿ
ಸಿಂಹ
- ನಿಮ್ಮ ವ್ಯಾಪಾರಿ ಬುದ್ಧಿಯಿಂದ ಹೊರಬಂದು ಮಾನಸಿಕ ಸಮಾಧಾನ ಪಡೆದುಕೊಳ್ಳಿ
- ಇಂದು ಕುಟುಂಬದವರ ಜೊತೆಯಲ್ಲಿ ಸಮಯ ಕಳೆಯಿರಿ
- ಕ್ಷೇತ್ರಗಳಿಗೆ ಹೋದಾಗ ನಿಮ್ಮ ಮನಸ್ಸು ಶುದ್ಧವಾಗಿರಲಿ
- ವ್ಯವಹಾರ ವಿಷಯವನ್ನು ಬದಿಗಿಟ್ಟು ಭಗವಂತನ ಸೇವೆಯಲ್ಲಿ ತೊಡಗಿಸಿಕೊಳ್ಳಿ
- ಕುಟುಂಬದವರು ಬೇಸರವನ್ನು ವ್ಯಕ್ತಪಡಿಸಬಹುದು
- ಇಂದು ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತೀರಿ
- ಕ್ಷೇತ್ರ ದೇವತೆಗೆ ನಿಮ್ಮ ಶಕ್ತಿಗೆ ಅನುಸಾರವಾಗಿ ಸೇವೆ ಮಾಡಿ
ಕನ್ಯಾ
- ಮಾನಸಿಕ ಬೇಸರ ಉಂಟಾಗುವ ಸಾಧ್ಯತೆಯಿದೆ
- ಕೆಲಸದಲ್ಲಿ ಹಲವು ಅಡಚಣೆಯಾಗಬಹುದು
- ಆಟಗಾರರಿಗೆ ಅದರಲ್ಲೂ ಕ್ರಿಕೆಟ್ ಆಟಗಾರರಿಗೆ ತುಂಬಾ ಒಳ್ಳೆಯ ದಿನ
- ಯಾವುದೇ ಕೆಲಸ ಮಾಡಲು ಭಯ ಪಡಬೇಡಿ
- ಇಂದು ಉತ್ತಮವಾದ ವಾತಾವರಣ ಇರಲಿದೆ
- ನಿಮ್ಮ ಕೌಶಲ್ಯ ಹೊರಗಡೆ ಪ್ರಚಾರ ಆಗದೆ ಇರೋದಕ್ಕೆ ನಿಮ್ಮ ಆಲಸ್ಯವೇ ಕಾರಣ
- ಕಾರ್ಯಕ್ಷೇತ್ರದಲ್ಲಿ ಪ್ರಗತಿ ಸಾಧಿಸುತ್ತೀರಿ
- ತಾಪಸ ಮನ್ಯುವನ್ನು ಸ್ಮರಿಸಿ
ತುಲಾ
- ಇಂದು ಪ್ರೇಮಿಗಳಿಗೆ ಉತ್ತಮ ದಿನ
- ಮನಸ್ಸು ನಿಮ್ಮ ಹಿಡಿತಕ್ಕೆ ಸಿಗದೆ ಹಲವು ತೊಂದರೆಗಳಿಗೆ ನೀವೇ ಕಾರಣರಾಗುತ್ತೀರಿ
- ಮಾನಸಿಕ ಬೇಸರವು ನಿಮಗೆ ದಿನಪೂರ್ತಿ ಕಾಡಬಹುದು
- ಸಂಬಂಧಿಕರು ಹಾಗೂ ಸ್ನೇಹಿತರೊಂದಿಗಿನ ನಿಮ್ಮ ಸಂಬಂಧವನ್ನು ಯಾವುದೇ ಕಾರಣಕ್ಕೂ ಹಾಳು ಮಾಡಿಕೊಳ್ಳಬೇಡಿ
- ನಿಮ್ಮ ಹಠದ ಸ್ವಭಾವದಿಂದ ವೃತ್ತಿ, ನೌಕರಿ, ವಿದ್ಯಾಕ್ಷೇತ್ರದಲ್ಲಿ ಹಿನ್ನಡೆ ಸಾಧ್ಯತೆ
- ಆದಿತ್ಯ ಹೃದಯ ಸ್ತೋತ್ರವನ್ನು ಪಠಣೆ ಮಾಡಿ
ವೃಶ್ಚಿಕ
- ವಿವಾದಿತ ವಿಷಯಗಳು ಇತ್ಯರ್ಥವಾಗುತ್ತವೆ
- ಕುಟುಂಬ ಸದಸ್ಯರ ನಿರೀಕ್ಷೆಗಳನ್ನು, ಆಸೆಗಳನ್ನು ಪೂರೈಸಲು ಉತ್ತಮ ದಿನ
- ಮಕ್ಕಳೊಂದಿಗೆ ಉತ್ತಮ ಬಾಂಧವ್ಯ ಉಳಿಸಿಕೊಳ್ಳಿ
- ರಾಜಕೀಯ ವ್ಯಕ್ತಿಗಳಿಗೆ ಉತ್ತಮ ಸ್ಥಾನ ಹಾಗೂ ಕೆಲವು ವಿಚಾರಗಳು ಮುನ್ನೆಲೆಗೆ ಬರುವ ಸಾಧ್ಯತೆಗಳಿವೆ
- ಮಕ್ಕಳೇನಾದರೂ ಸಲಹೆ ಕೊಟ್ಟರೆ, ಅದನ್ನು ನಿರ್ಲಕ್ಷಿಸಬೇಡಿ
- ಇಂದು ವ್ಯರ್ಥವಾಗಿ ಸಮಯ ಹೋಗಲು ಬಿಡಬೇಡಿ
- ಶ್ರೀ ಪಂಚಮುಖಿ ಆಂಜನೇಯನನ್ನು ಪಾರ್ಥಿಸಿ
ಧನುಸ್ಸು
- ಹಳೆಯ ಕೇಸುಗಳಿದ್ದರೆ ತೀರ್ಮಾನವಾಗಿ ಜಯಶೀಲರಾಗುವ ಯೋಗವಿದೆ
- ಮಧ್ಯಾಹ್ನದ ನಂತರ ಸಮಯ ಚೆನ್ನಾಗಿರುವುದಿಲ್ಲ ಎಚ್ಚರ
- ಬೇರೆ ವ್ಯವಹಾರಗಳನ್ನು ಬದಿಗಿಟ್ಟು ಕಾನೂನಿನ ಚೌಕಟ್ಟಿನೊಳಗೆ ಬರುವ ಕೆಲಸಕ್ಕೆ ಹೆಚ್ಚು ಗಮನಕೊಡಿ
- ನಿಮ್ಮ ಕೋರ್ಟ್ ಕೆಲಸಕ್ಕೆ ಇಂದು ವಿಶೇಷ ತಿರುವು ಸಿಗುವ ಸಾಧ್ಯತೆ
- ಕಾನೂನಿನ ದೃಷ್ಟಿಯಿಂದ ಮಾನಸಿಕವಾಗಿ ಬೇಸತ್ತವರಿಗೆ ಸಮಾಧಾನ ಸಿಗಬಹುದು
- ದೇವಿಯನ್ನು ಆರಾಧಿಸಿ
ಮಕರ
- ಅಧಿಕಾರಿ ವರ್ಗದಿಂದ ಕೆಲವು ತೊಂದರೆಗಳಾಗಬಹುದು, ತಾತ್ಸಾರ ಮಾಡಬೇಡಿ
- ಕುಟುಂಬದ ಜವಾಬ್ದಾರಿಗಳು ಹೆಚ್ಚಿನ ಒತ್ತಡ ತರಬಹುದು
- ಇಂದು ಹಣಕಾಸಿನ ವಿಚಾರದಲ್ಲಿ ಏರುಪೇರಾಗಬಹುದು
- ವ್ಯಾಪಾರ, ವ್ಯವಹಾರ, ಉದ್ಯೋಗ, ವಿದ್ಯೆ ವಿಚಾರಗಳಲ್ಲಿ ಮಂದಗತಿಯಿರುತ್ತದೆ
- ಗಂಟಲಿಗೆ ಸಂಬಂಧಿಸಿದ ಸೋಂಕು ತಗಲುವ ಸಾಧ್ಯತೆಯಿದೆ
- ಒಪ್ಪಂದಗಳಿಗೆ ಸಹಿ ಮಾಡುವ ಸನ್ನಿವೇಶ ಬಂದರೆ, ಸ್ವಲ್ಪ ಆಲೋಚಿಸಿ ತೀರ್ಮಾನ ಮಾಡಿ
- ನಿಮ್ಮ ಆರೋಗ್ಯದ ವಿಚಾರದಲ್ಲಿ ಗಮನ ಕೊಡಿ
- ಸಕಾಲಕ್ಕೆ ಸೂಕ್ತ ಔಷಧೋಪಚಾರ ಮಾಡಿಕೊಂಡರೆ ಒಳ್ಳೆಯದು
- ಈಶ್ವರನ ದೇವಸ್ಥಾನಕ್ಕೆ ಬಿಲ್ವಪತ್ರೆ ಕೊಡಿ
ಕುಂಭ
- ನಿಮ್ಮ ಮಾರ್ಗದರ್ಶನ ಪಡೆಯುವ ಹಲವರ ಸಮಸ್ಯೆಗಳು ಬಗೆಹರಿಯುತ್ತವೆ
- ಕುಟುಂಬದಲ್ಲಿ ಉತ್ತಮ ಸಮಯ ಕಳೆಯುತ್ತೀರಿ
- ನಿಮ್ಮ ಉಪಕಾರ ಪಡೆದವರು ಸದಾ ನಿಮ್ಮನ್ನು ಗೌರವಿಸುತ್ತಾರೆ
- ಜಟಿಲ ಸಮಸ್ಯೆಗಳಿಗೆ ಇಂದು ಪರಿಹಾರ ಸಿಗಬಹುದು
- ನೌಕರರು ತಮ್ಮ ಉದ್ಯೋಗವನ್ನು ಬದಲಾಯಿಸಲು ಈ ದಿನ ಶುಭವಾಗಿದೆ
- ಬೇರೆ ಕಡೆ ಉದ್ಯೋಗ ಅವಕಾಶ ದೊರಕಬಹುದು
- ನಿಮ್ಮ ದಿನಚರಿ ಈ ದಿನ ಬಹಳ ವ್ಯವಸ್ಥಿತವಾಗಿರುವುದರಿಂದ ಯಶಸ್ಸು ಸಿಗಲಿದೆ
- ಹಿರಿಯರ ಆಶೀರ್ವಾದ ಪಡೆಯಿರಿ
ಮೀನ
- ನಿಮ್ಮ ಯೋಜನೆಗಳನ್ನು ಕಾರ್ಯಗತಗೊಳಿಸುವಲ್ಲಿ ಸಂಪೂರ್ಣ ಪ್ರಯತ್ನವಿರಲಿ
- ವಿದೇಶ ಪ್ರಯಾಣವು ಕೂಡ ಸಂತೋಷ ತರಲಿದೆ
- ನಿಮ್ಮ ಕೆಲಸಗಳಿಗೆ ಬೇರೆಯವರನ್ನು ಅವಲಂಬಿಸಬೇಡಿ
- ವ್ಯಾಪಾರ ಮತ್ತು ವ್ಯವಹಾರ ದೃಷ್ಟಿಯಿಂದ ಪ್ರಯಾಣಕ್ಕೆ ಅನುಕೂಲಕರ ದಿನ
- ನಿಮ್ಮ ಪ್ರತಿಭೆ ಮತ್ತು ಚಟುವಟಿಕೆಗಳನ್ನು ಅಭಿವೃದ್ಧಿಪಡಿಸಿಕೊಳ್ಳಲು ಉತ್ತಮ ದಿನ
- ಯಾವುದಾದರು ವ್ಯವಹಾರದಿಂದ ಬರಬೇಕಾದ ಬಾಕಿ ಹಣ ಇಂದು ಕೈ ಸೇರಬಹುದು
- ಭವಿಷ್ಯದ ಯೋಜನೆಗಳನ್ನು ಮನಸ್ಸಿನಲ್ಲಿ ಲೆಕ್ಕ ಹಾಕುತ್ತಾ ತುಂಬಾ ಆಕರ್ಷಿತರಾಗಬಹುದು
- ನಾಗದೇವತೆಗಳನ್ನು ಆರಾಧಿಸಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ