/newsfirstlive-kannada/media/media_files/2025/07/31/rashi_bhavisha-2025-07-31-22-55-03.jpg)
ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.
ಶ್ರೀ ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ವರುಷ ಋತು, ಭಾದ್ರಪದ ಮಾಸ, ಕೃಷ್ಣಪಕ್ಷ, ತ್ರಯೋದಶಿ ತಿಥಿ, ಆಶ್ಲೇಷಾ ನಕ್ಷತ್ರ, ರಾಹುಕಾಲ ಶುಕ್ರವಾರ ಬೆಳಗ್ಗೆ 10.30 ರಿಂದ 12.00 ರವರೆಗೆ ಇರಲಿದೆ.
ಮೇಷ ರಾಶಿ
- ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಪ್ರವೇಶ ಪಡೆಯಲು ಅವಕಾಶವಿರುತ್ತದೆ
- ಹಣದ ಅವಶ್ಯಕತೆ ಇದೆ ಅಂತ ದಾರಿ ತಪ್ಪಿ ನಡೆಯುವ ವಾತಾವರಣ ಸೃಷ್ಟಿಯಾಗಬಹುದು ಎಚ್ಚರಿಕೆ
- ಹಣ ಗಳಿಸುವ ಹೊಸ ಮೂಲಕ್ಕಾಗಿ ಶೋಧನೆ ನಡೆಸುತ್ತೀರಿ
- ಅವಿವಾಹಿತರಿಗೆ ಒಳ್ಳೆಯ ದಿನವಲ್ಲ ತುಂಬಾ ಬೇಸರ ಆಗುವ ದಿನ
- ವಿವಾಹಿತರಿಗೆ ಉತ್ತಮವಾದ ಫಲ ಸಿಗುವ ದಿನ
- ಯಾರನ್ನು ನಂಬಿ ಮೋಸ ಹೋಗಬೇಡಿ
- ತಂದೆಯವರ ಸೇವೆ ಮಾಡಿ
ವೃಷಭ
- ವಿನಾಕಾರಣ ಬೇರೆಯವರೊಂದಿಗೆ ವಾಗ್ವಾದ ಮಾಡಬೇಡಿ
- ದೈಹಿಕವಾಗಿ ತುಂಬಾ ಪ್ರಯಾಸವಾಗಲಿದೆ ವಿಶ್ರಾಂತಿ ಪಡೆಯಿರಿ
- ಪ್ರಯಾಣದ ಸಮಯದಲ್ಲಿ ಸಮಸ್ಯೆ ಉಂಟಾಗಬಹುದು ಎಚ್ಚರವಹಿಸಿ
- ಅದೃಷ್ಟದ ಕೊರತೆಯಿಂದ ಕೆಲವು ದುಷ್ಪರಿಣಾಮಗಳು ಬೀರಬಹುದು
- ತಾಳ್ಮೆ ಮುಖ್ಯ, ತಾಳ್ಮೆಯನ್ನು ಕಳೆದುಕೊಂಡಾಗ ಕೆಲಸಗಳಲ್ಲಿ ಹಿನ್ನಡೆಯಾಗುವ ಸಾಧ್ಯತೆ
- ವ್ಯಾವಹಾರಿಕ ದೋಷದಿಂದ ಆರ್ಥಿಕ ನಷ್ಟ ಅನುಭವಿಸುತ್ತೀರಿ
- ಶ್ರೀಕೃಷ್ಣನನ್ನು ಅರ್ಚನೆ ಮಾಡಿ
ಮಿಥುನ
- ಕುಟುಂಬ ಸದಸ್ಯರು ಮತ್ತು ಬಂಧುಗಳ ಜೊತೆ ಹಲವು ವಿಷಯಗಳನ್ನು ಚರ್ಚೆ ಮಾಡುತ್ತೀರಿ
- ವೈವಾಹಿಕ ಜೀವನದಲ್ಲಿ ಹೊಂದಾಣಿಕೆಯ ಕೊರತೆ ಇರುತ್ತದೆ
- ಮಾತು ಮಾಧುರ್ಯವಾಗಿರುತ್ತೆ ಬೇರೆ ಎಲ್ಲರನ್ನೂ ನಿಮ್ಮ ಕಡೆ ಆಕರ್ಷಣೆ ಮಾಡುವ ಶಕ್ತಿ ನಿಮಗಿದೆ
- ಕಾರ್ಯಕ್ಷೇತ್ರದಲ್ಲಿ ಉನ್ನತ ಸ್ಥಾನ ದೊರೆಯಲಿದೆ
- ಆಸಕ್ತಿ, ಉತ್ಸಾಹಗಳು ಹೆಚ್ಚಾಗಿ ದಾಂಪತ್ಯದಲ್ಲಿ ಬೇಸರವಾಗಲಿದೆ
- ಆಧ್ಯಾತ್ಮಿಕ ವಿಚಾರದಲ್ಲಿ ಹೆಚ್ಚಿನ ಮನಸ್ಸನ್ನು ಕೊಡುತ್ತೀರಿ
- ಧ್ಯಾನಕ್ಕೆ ಶರಣು ಹೋಗಿ
ಕಟಕ
- ವಿದೇಶದಿಂದ ಉದ್ಯೋಗಾವಕಾಶಗಳು ಸಿಗುವ ಸಾಧ್ಯತೆಗಳಿವೆ
- ಸಣ್ಣ-ಪುಟ್ಟ ಸಮಸ್ಯೆಗಳು ದೂರವಾಗುವ ದಿನ
- ಮನೆಯಲ್ಲಿ ಚಿಕ್ಕಮಕ್ಕಳಿಗೆ ತೊಂದರೆಯಾಗಬಹುದು ಜಾಗ್ರತೆವಹಿಸಿ
- ನಿಮ್ಮ ಧೈರ್ಯ ಆತ್ಮವಿಶ್ವಾಸ ಹೆಚ್ಚಾಗುತ್ತದೆ
- ನಿಮ್ಮ ಆರ್ಥಿಕ ಸ್ಥಿತಿ ಅನುಕೂಲವಾಗುತ್ತದೆ
- ಅಧೀನ ಉದ್ಯೋಗಸ್ಥರು ನಿಮ್ಮೊಂದಿಗೆ ಸಂತೋಷದಿಂದ ಇರುತ್ತಾರೆ
- ಗಣಪತಿಯ ಅನುಗ್ರಹ ಪಡೆದುಕೊಳ್ಳಿ
ಸಿಂಹ
- ವಿದ್ಯಾರ್ಥಿಗಳಿಗೆ ಓದಿನ ವಿಚಾರದಲ್ಲಿ ಬೇಸರವಾಗಲಿದೆ
- ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲವನ್ನು ನೋಡಿ ಆನಂದಿಸುತ್ತೀರಿ
- ಕುಟುಂಬ ಸಾಮರಸ್ಯ ಚೆನ್ನಾಗಿರುತ್ತದೆ
- ನಿಮ್ಮ ಕಾರ್ಯಕ್ಷೇತ್ರದಲ್ಲಿ ಯಶಸ್ಸು ಸಿಗಲಿದೆ
- ಈ ದಿನ ಮಕ್ಕಳೊಂದಿಗೆ ಕಾಲ ಕಳೆಯುತ್ತೀರಿ
- ಮಾರ್ಕೆಟಿಂಗ್ ನಲ್ಲಿ ಕೆಲಸ ಮಾಡುವವರಿಗೆ ಈ ದಿನ ಜನಪ್ರಿಯತೆ ಸಿಗುವಂತ ದಿವಸ
- ನವಗ್ರಹರನ್ನು ಪ್ರಾರ್ಥಿಸಿ
ಕನ್ಯಾ
- ಶಿಸ್ತು ಬದ್ಧವಾದ ನಡವಳಿಕೆಯಿಂದ ಜಯವಾಗಲಿದೆ
- ಉದ್ಯಮಿಗಳು ಮಾತ್ರ ದೊಡ್ಡ ಪ್ರಮಾಣದಲ್ಲಿ ಹೂಡಿಕೆ ಮಾಡಬಾರದು
- ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತುಕತೆ, ಸಭೆ ನಡೆಯಬಹುದು
- ಸ್ನೇಹಿತರ ಬೆಂಬಲವಿದೆ ಆದರೆ ನಿಮ್ಮ ತೀರ್ಮಾನ ಸರಿ ಇರಬೇಕು
- ಮನೆಯಲ್ಲಿ ಉತ್ಸಾಹದ ವಾತಾವರಣವಿರುತ್ತದೆ
- ವೆಚ್ಚಗಳನ್ನು ನಿಯಂತ್ರಿಸಲು ಬೇರೆ ಬೇರೆ ಕೆಲಸಗಳನ್ನು ಮಾಡಬೇಕಾಗುತ್ತದೆ
- ಮಹಾವಿಷ್ಣುವನ್ನು ಪ್ರಾರ್ಥಿಸಿ
ತುಲಾ
- ಉದ್ಯೋಗದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುತ್ತೀರಿ
- ಮನೆಯಲ್ಲಿ ವಾತಾವರಣ ಚೆನ್ನಾಗಿರುವುದಿಲ್ಲ
- ಸಣ್ಣ-ಪುಟ್ಟ ಕನಸುಗಳು ನನಸಾಗುವ ಸಮಯ
- ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಅವಕಾಶವಿದೆ
- ಮನೆಯಲ್ಲಿ ಅನಾರೋಗ್ಯದ ಸೂಚನೆ ಇರುವುದರಿಂದ ಬೇಸರದ ದಿನ
- ವಿದ್ಯಾರ್ಥಿಗಳಿಗೆ ಈ ದಿನ ಫಲಪ್ರದಾಯಕವಾಗಿರುತ್ತದೆ
- ಧನ್ವಂತರಿ ದೇವತೆಯನ್ನು ಪ್ರಾರ್ಥಿಸಿ
ವೃಶ್ಚಿಕ
- ಕೆಲವರು ನಂಬಿಕೆ ದ್ರೋಹ ಮಾಡಬಹುದು ಹುಷಾರಾಗಿರಿ
- ಬೇರೆಯವರೊಂದಿಗೆ ಜಗಳ ಮಾಡುವ ಬದಲು ವಿಷಯ ಅರ್ಥಮಾಡಿಕೊಳ್ಳಬೇಕು
- ನಿಮ್ಮ ಸ್ವಭಾವ ವರ್ತನೆಯಿಂದ ಸಂಬಂಧಿಕರಿಗೆ ಕೋಪ ಬರಬಹುದು
- ಗುಪ್ತಶತ್ರುಗಳು ನಿಮಗೆ ತೊಂದರೆ ಮಾಡಲು ಕಾಯುತ್ತಿರುತ್ತಾರೆ ಜಾಗ್ರತೆ
- ಸಾಲ ಮಾಡುವ ಪರಿಸ್ಥಿತಿ ಅಥವಾ ಹಣ ನಷ್ಟವಾಗಬಹುದು ಎಚ್ಚರ
- ಬೇರೆಯವರಿಗೆ ಸಹಾಯ ಮಾಡಲು ಮುಂದಾಗುತ್ತೀರಿ
- ಗಾಯತ್ರಿ ದೇವಿಯನ್ನು ಉಪಾಸನೆ ಮಾಡಿ
ಧನುಸ್ಸು
- ದೂರ ಪ್ರಯಾಣದ ಯೋಗವಿದೆ
- ಇಂದು ಆರೋಗ್ಯ ಸುಧಾರಣೆಯಾಗಲಿದೆ
- ಉದ್ದೇಶ ಒಳಿತಾಗಿಟ್ಟುಕೊಂಡು ಪ್ರಯತ್ನ ಪಟ್ಟರೆ ಖಂಡಿತ ಶುಭವಾಗುವ ದಿನ
- ನಿಮ್ಮ ಬಗ್ಗೆ ನೀವೇ ಹೇಳಿಕೊಳ್ಳುವುದನ್ನು ನಿಲ್ಲಿಸಬೇಕಾಗುತ್ತದೆ
- ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗಲು ಅವಕಾಶವಿದೆ
- ನಿಮ್ಮ ಆಸೆಗಳನ್ನು ಈಡೇರಿಸಿಕೊಳ್ಳಲು ಸುಸಮಯ
- ಹೊಸ ಕೆಲಸವನ್ನು ಪ್ರಾರಂಭಿಸಲು ಇಂದು ಉತ್ತಮ ದಿನ
- ನಿಮ್ಮ ಗುರುಗಳ ಆಶೀರ್ವಾದ ಪಡೆಯಿರಿ
ಮಕರ
- ಪ್ರೇಮಿಗಳಿಗೆ ಶುಭದಿನ ಸದುಪಯೋಗವಾಗಲಿ
- ಸ್ನೇಹಿತರ ಭೇಟಿಯಿಂದ ಮೋಜು ಮಸ್ತಿ ಹೆಚ್ಚಾಗಿ ಹಣ ಖರ್ಚು ಮಾಡುತ್ತೀರಿ
- ಪ್ರಭಾವಿ ವ್ಯಕ್ತಿಗಳ ಭೇಟಿ ಪರಿಚಯ ಸಂತೋಷವನ್ನುಂಟು ಮಾಡುತ್ತದೆ
- ತಮ್ಮ ಕರ್ತವ್ಯವನ್ನು ಬಹಳ ನಿಷ್ಠೆಯಿಂದ ಮಾಡುತ್ತೀರಿ
- ಉದ್ಯೋಗಿಗಳಿಗೆ ವ್ಯಾವಹಾರಿಕವಾಗಿ ಲಾಭವಿದೆ ಆದರೆ ಪ್ರಾಮಾಣಿಕವಾಗಿರಬೇಕು
- ಮಕ್ಕಳಿಗೆ ಮತ್ತು ವಿದ್ಯಾರ್ಥಿಗಳಿಗೆ ಅಗತ್ಯತೆಯನ್ನ ಪೂರೈಸುವ ದಿನ
- ಆರ್ಥಿಕವಾಗಿ ಅನುಕೂಲವಾಗುವ ದಿನ
- ಮಹಾವಿಷ್ಣುವನ್ನು ಆರಾಧಿಸಿ
ಕುಂಭ
- ಅಸಂಬದ್ಧ ಚಟುವಟಿಕೆಗಳತ್ತ ಮನಸ್ಸು ಹೋಗಬಹುದು
- ಕೆಲಸಗಳಲ್ಲಿ ಸಣ್ಣ ಪುಟ್ಟ ಕಿರಿಕಿರಿ ಕಾಡಬಹುದು
- ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ
- ಹಳೆಯ ವಾಹನದಲ್ಲಿ ಪ್ರಯಾಣಿಸುವಾಗ ತುಂಬಾ ಎಚ್ಚರವಹಿಸಿ
- ಹಣಗಳಿಸಬೇಕೆಂಬ ಭರದಲ್ಲಿ ತಪ್ಪು ದಾರಿ ಹಿಡಿಯಬಾರದು
- ನಿಮ್ಮ ಮನಸ್ಸು ಹತೋಟಿಯಲ್ಲಿರಬೇಕು
- ಈ ದಿನ ಉತ್ತಮವಾಗಿದೆ ಆಂತ ಭಾವಿಸಿ ಕಾರ್ಯಪ್ರವುತ್ತರಾಗಿ ಕೆಲಸದಲ್ಲಿ ಯಶಸ್ಸು ಸಿಗಲಿದೆ
- ನಿಮ್ಮ ಇಚ್ಛೆಯಂತೆ ಕೆಲಸ ಮಾಡಿ ಯಶಸ್ಸನ್ನು ಹೊಂದಬಹುದು
- ಸುಬ್ರಹ್ಮಣ್ಯ ದೇವರನ್ನು ಆರಾಧಿಸಿ
ಮೀನ
- ಸ್ನೇಹಿತರ ಮನೆಯಲ್ಲಿ ಮಂಗಳ ಕಾರ್ಯದಲ್ಲಿ ಭಾಗವಹಿಸುವ ಸಾಧ್ಯತೆಗಳಿವೆ
- ಅಂದುಕೊಂಡ ಕಾರ್ಯವನ್ನು ಮೇಲ್ದರ್ಜೆಗೆ ಏರಿಸಿ ಅದಕ್ಕೆ ಆದ್ಯತೆ ಕೊಡುತ್ತೀರಿ
- ಆಕಸ್ಮಿಕವಾಗಿ ವಾಹನಕ್ಕೆ ಹಾನಿಯಾಗುವ ಸಾಧ್ಯತೆಗಳಿವೆ ಎಚ್ಚರವಿರಲಿ
- ಇಂದು ಮತ್ತು ಮುಂದಿನ ಯೋಚನೆಗಳ ಫಲ ನಿಮಗೆ ಯಶಸ್ಸಿನ ಗುಟ್ಟು ತಿಳಿಯುವಂತ ದಿವಸ
- ಆತ್ಮವಿಶ್ವಾಸ ಹೆಚ್ಚಿಸುವ ದಿನವಾಗಿರುತ್ತದೆ
- ಮನೆಯಲ್ಲಿ ಸಂತೃಪ್ತಿಯ ವಾತಾವರಣವಿರುತ್ತದೆ
- ಗಣಪತಿಯ ಆರಾಧನೆ ಮಾಡಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ