Advertisment

Today horoscope: ಬೇರೆಯವ್ರ ತಂಟೆಗೆ ಹೋದ್ರೆ ಅವಮಾನ.. ಹಣಕಾಸು ವಿಚಾರದಲ್ಲಿ ಕಿರಿಕಿರಿ..

ಶ್ರೀ ವಿಶ್ವಾವಸುನಾಮ ಸಂವತ್ಸರ ದಕ್ಷಿಣಾಯಣ ಶರದೃತು. ಕಾರ್ತಿಕ ಮಾಸ, ಕೃಷ್ಣ ಪಕ್ಷ, ಅಷ್ಟಮಿ ತಿಥಿ, ಆಶ್ಲೇಷಾ ನಕ್ಷತ್ರ. ರಾಹುಕಾಲ ಬುಧವಾರ ಮಧ್ಯಾಹ್ನ 12.00 ರಿಂದ 1.30 ರವರೆಗೆ ಇರಲಿದೆ.

author-image
Ganesh Kerekuli
RASHI_BHAVISHA
Advertisment

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

Advertisment

ಇದನ್ನೂ ಓದಿ:56ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ ‘ವನ್ಯ’ ಸಿನಿಮಾ ಆಯ್ಕೆ

 ಮೇಷ 

RASHI_BHAVISHA_MESHA

  • ವಿದ್ಯಾರ್ಥಿಗಳಿಗೆ ಸಮಸ್ಯೆ ಬಗೆ ಹರಿಯುತ್ತದೆ
  • ಮನಸ್ಸಿಗೆ ನೆಮ್ಮದಿ ದೊರೆಯುವ ದಿನ
  • ಮನೆ, ದೇವಾಲಯಗಳಲ್ಲಿ ಕುಟುಂಬದ ಹಿತಕ್ಕಾಗಿ ಧರ್ಮಕಾರ್ಯ
  • ದಾಕ್ಷಿಣ್ಯಕ್ಕೆ ಒಳಗಾಗಿ ನಿಮ್ಮ ಆತ್ಮಗೌರವಕ್ಕೆ ಕೊರತೆ ಆಗಬಹುದು
  • ಸಮಸ್ಯೆಗಳನ್ನು ಪ್ರಾಯೋಗಿಕ ರೀತಿಯಿಂದ ಬಗೆಹರಿಸಿಕೊಳ್ಳಿ 
  • ತತ್ವ ಸಿದ್ಧಾಂತದ ಆಧಾರದ ಮೇಲೆ ಸಮಸ್ಯೆಗಳನ್ನು ಬಗೆಹರಿಸಲು ಕಷ್ಟದ ದಿನ
  • ನವಗ್ರಹ ಆರಾಧನೆ ಮಾಡಿ

ವೃಷಭ:

RASHI_BHAVISHA_VRSHABA 

  • ರಾಜಕಾರಣಿಗಳಿಗೆ ಹೊಸ ಸುದ್ದಿ ಸಾಧ್ಯತೆ
  • ಇಂದು ಹಣದ ವಿಚಾರದಲ್ಲಿ ಗೊಂದಲ ಆಗಬಹುದು
  • ಸಂಗೀತಕಾರರಿಗೆ ತಮ್ಮ ಕಾರ್ಯದಲ್ಲಿ ಹಿನ್ನಡೆಯಾಗುವುದರಿಂದ ಕಾರ್ಯಕ್ರಮ ರದ್ದಾಗುವ ಸೂಚನೆ
  • ಮಕ್ಕಳ ಉತ್ತಮ ಫಲಿತಾಂಶದಿಂದ ಸಮಾಧಾನ ಸಿಗಲಿದೆ
  • ಗಂಟಲಿನ ಸಮಸ್ಯೆ ಕಾಡಬಹುದು ತಾತ್ಸಾರ ಮಾಡಬೇಡಿ
  • ಆದಾಯ ಖರ್ಚಿನ ಅಸ್ಪಷ್ಟತೆಯಿಂದ ತೊಳಲಾಡಬಹುದು
  • ಶಿವಾರಾಧನೆ ಮಾಡಿ
Advertisment

ಮಿಥುನ 

RASHI_BHAVISHA_MITHUNA

  • ಕೆಲಸದ ಒತ್ತಡ ಇದ್ದಾಗ್ಲೂ ಜನಸೇವೆ ಮಾಡಿ ಗೌರವ ಹೆಚ್ಚಾಗುತ್ತದೆ
  • ವ್ಯಾಪಾರ ವಹಿವಾಟು ನಡೆಸುತ್ತಿರುವವರಿಗೆ ಶುಭದಿನ
  • ಪ್ರೇಮಿಗಳಿಗೆ ಉತ್ತಮವಾದ ದಿನ
  • ಸ್ಮೇಹಿತರೊಂದಿಗೆ ನಿಮ್ಮ ವಿದ್ಯಾಭ್ಯಾಸ ಕೆಲಸ ಆಲೋಚನೆಗಳ ಬಗ್ಗೆ ಚರ್ಚಿಸಿದರೆ ಒಳ್ಳೆಯದು
  • ಬೆಳ್ಳಂಬೆಳಗ್ಗೆ ಕಹಿ ಘಟನೆಯಿಂದ ಮನೆಯಲ್ಲಿ ಅಶಾಂತಿ ಸಾಧ್ಯತೆ
  •  ಕೋದಂಡರಾಮನ ಪ್ರಾರ್ಥನೆ ಮಾಡಿ

ಕಟಕ 

RASHI_BHAVISHA_KATAKA

  • ಆಕಸ್ಮಿಕವಾಗಿ ಹಣ ಸಿಗುವುದರಿಂದ ಅಹಂಕಾರ ಬರಬಹುದು 
  • ಸಂಬಂಧಿಕರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ
  • ಇಂದು ಹಣ ಹೂಡಿಕೆಯಿಂದ ಮನಸ್ಸಿಗೆ ಸಮಾಧಾನ ಸಿಗಬಹುದು
  • ಹಣದ ವ್ಯವಹಾರ ಹೂಡಿಕೆಯನ್ನು ಮಧ್ಯಾಹ್ನದ ನಂತರ ಮಾಡಿ
  • ನಿಮ್ಮ ತಾಳ್ಮೆ ವಿನಯ ಮಾತ್ರ ನಿಮ್ಮನ್ನು ಕಾಪಾಡಬಲ್ಲದು
  • ನಿಮ್ಮನ್ನು ನೀವು ಮರೆಯುವ ಸಾಧ್ಯತೆ ಇದೆ  
  • ಶ್ರೀರಾಮ ಪರಿವಾರ ದೇವತೆಗಳನ್ನು ಆರಾಧನೆ ಮಾಡಿ

ಸಿಂಹ

RASHI_BHAVISHA_SIMHA

 

  • ಮಕ್ಕಳ ಆರೋಗ್ಯ ಹದಗೆಡಬಹುದು ವೈದ್ಯರ ಸಲಹೆ ಪಡೆಯಿರಿ
  • ವೃತ್ತಿಪರರು ನಿಮ್ಮ ಮೇಲಾಧಿಕಾರಿಗಳ ವಿಶ್ವಾಸಕ್ಕೆ ಪಾತ್ರರಾಗುತ್ತೀರಿ
  • ಸಮಾಜದಲ್ಲಿ ನಿಮ್ಮ ಚಿಂತನೆ ವಿಚಾರಗಳಿಗೆ ಮನ್ನಣೆ ದೊರೆಯುತ್ತದೆ
  • ಬಹಳ ಕಾಲದ ನಂತರ ನಿಮ್ಮ ಪ್ರೀತಿ ಪಾತ್ರರ ದರ್ಶನದಿಂದ ಮನಸ್ಸಿಗೆ ಆನಂದ
  • ಇಂದು ನಿಮ್ಮ ಮಾತುಗಳಲ್ಲಿ ಗೊಂದಲವಿಲ್ಲದೆ ಸ್ಪಷ್ಟವಾಗಿರಲಿ
  • ಸೂರ್ಯದೇವನ ಪ್ರಾರ್ಥನೆ ಮಾಡಿ
Advertisment

ಕನ್ಯಾ

ಯಾವುದೇ ಕಾರಣಕ್ಕೂ ಸಾಲ ಕೊಡಬೇಡಿ, ವಿದ್ಯಾರ್ಥಿಗಳಿಗೆ ಶುಭವಿದೆ; ಇಲ್ಲಿದೆ ಇಂದಿನ ಭವಿಷ್ಯ

  • ಬೇರೆಯವರ ವಿಷಯಕ್ಕೆ ತಲೆ ಹಾಕಬೇಡಿ ಅವಮಾನ ಸಾಧ್ಯತೆ
  • ನಿಮ್ಮ ಆಲೋಚನೆಗಳು ಕುಟುಂಬಕ್ಕೆ ಸೀಮಿತವಾಗಿರದೆ ಸಮಾಜಮುಖಿಯಾಗಿರಲಿ
  • ಇಂದು ಮಕ್ಕಳ ಶಿಕ್ಷಣ ವಿಚಾರವಾಗಿ ಉತ್ತಮ ದಿನ
  • ಹೊಸ ಸಂಪರ್ಕಗಳಿಂದ ಮನಸ್ಸಿಗೆ ಖುಷಿಯಾಗಬಹುದು
  • ವೈಯಕ್ತಿಕ ಲಾಭಕ್ಕೆ ನಂಬಿದವರಿಂದ ಮೋಸ ಸಾಧ್ಯತೆ
  • ಚಿನ್ನಾಭರಣಗಳ ಖರೀದಿ ಬೇಡ, ಮನೆಯಲ್ಲಿರುವ ಆಭರಣಗಳ ಬಗ್ಗೆ ಜಾಗ್ರತೆ ಇರಲಿ
  • ವೀರಾಂಜನೇಯನ ಪ್ರಾರ್ಥನೆ ಮಾಡಿ

ತುಲಾ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಸರ್ಕಾರಿ ಉದ್ಯೋಗಿಗಳಿಗೆ ಸಿಹಿ ಸುದ್ದಿ ಸಾಧ್ಯತೆ
  • ವೈವಾಹಿಕ ಜೀವನ ಸುಖದಾಯಕವಾಗಿರುತ್ತದೆ
  • ಅವಿವಾಹಿತರಿಗೆ ವಿವಾಹ ವಿಚಾರದಲ್ಲಿ ಶುಭಫಲ
  • ಎಲ್ಲರ ಹಾರೈಕೆಯಿಂದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯತೆ
  • ಕಾರ್ಯಕ್ಷೇತ್ರದಲ್ಲಿ ಹಿಂದೆಂದೂ ಕಾಣದ ಸಾಧನೆಯ ಬದಲಾವಣೆ ಸಾಧ್ಯತೆ
  • ಇಂಜಿನಿಯರ್ ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಲಿದೆ
  • ಇಂದು ಆದಾಯದಲ್ಲಿ ಹೆಚ್ಚಳ ಕಾಣಲಿದೆ
  • ಆತ್ಮವಿಶ್ವಾಸ ಹೆಚ್ಚಾಗಿ ಸಂತೋಷ ಉಂಟಾಗಬಹುದು

ವೃಶ್ಚಿಕ

RASHI_BHAVISHA_VRUSHCHIKA

  • ಜಮೀನು ಆಸ್ತಿ ವಿಚಾರಗಳ ಬಗ್ಗೆ ಪರ ವಿರೋಧ ಚರ್ಚೆ ಸಾಧ್ಯತೆ
  • ಹೃದ್ರೋಗಿಗಳು ತುಂಬಾ ಕಷ್ಟ ಅನುಭವಿಸುವ ಸಾಧ್ಯತೆ ಇದೆ
  • ಇಂದು ವಾಹನ ಚಾಲನೆ ಮಾಡದೆ ಇದ್ದರೆ ಒಳ್ಳೆಯದು
  • ಔಷಧೋಪಚಾರಗಳು ಪರಿಣಾಮ ಬೀರದೆ ಇರಬಹುದು ಎಚ್ಚರ
  • ನೀವು ಬಳಸುವ ವಾಹನ ಬಗ್ಗೆ ಜಾಗ್ರತೆ ಇರಲಿ ವಾಹನದಿಂದ ನಷ್ಟವಿದೆ
  • ಮನೆಯ ಹೊರಗಡೆ ವಿನಾಕಾರಣ ಜಗಳವಾಗಬಹುದು ಎಚ್ಚರಿಕೆ ಇರಲಿ
  • ಉಗ್ರ ನರಸಿಂಹನ ಆರಾಧನೆ ಮಾಡಿ
Advertisment

ಧನಸ್ಸು

RASHI_BHAVISHA_DHANASU

  • ನಿಮ್ಮೊಂದಿಗೆ ಸರಿಯಾಗಿ ವ್ಯವಹರಿಸುವುದಿಲ್ಲ ಮಾತಾಡಲು ಒಪ್ಪುವುದಿಲ್ಲ
  • ನಿಮ್ಮ ಶತ್ರುಗಳ ಮಾತಿನಿಂದ ನಿಮ್ಮ ಆತ್ಮೀಯರು ನಿಮ್ಮನ್ನು ಅವಮಾನಿಸುವ ಸಾಧ್ಯತೆ
  • ಸೈದ್ಧಾಂತಿಕವಾಗಿ ಮಾಡಬೇಕಿರುವ ಸಮಸ್ಯೆಗಳ ಪರಿಹಾರಕ್ಕೆ ಹಿನ್ನಡೆ
  • ಇಂದು ನಿಮ್ಮ ವೈಯಕ್ತಿಕ ಪ್ರತಿಷ್ಠೆ ಅಹಂಕಾರ ಬಿಟ್ಟರೆ ಒಳ್ಳೆಯದು
  • ಸಮಾಜದಲ್ಲಿ ಚಿಕ್ಕವರ ಮುಂದೆ ಚಿಕ್ಕವರಾಗುವ ಸಾಧ್ಯತೆ ಇದೆ
  • ಕಲ್ಕಿ ಭಗವಾನರನ್ನು ಸ್ಮರಿಸಿ

ಮಕರ

RASHI_BHAVISHA_MAKARA

  • ಅವಸರದಲ್ಲಿ ಮಾಡಿದ ಕೆಲಸಗಳಿಂದ ನಷ್ಟ ಸಾಧ್ಯತೆ ಎಚ್ಚರಿಕೆ ಇರಲಿ
  • ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಶಿಕ್ಷಣಕ್ಕಾಗಿ ವೇದಿಕೆ ಸಿದ್ಧಪಡಿಸಿಕೊಳ್ಳಲು ಉತ್ತಮ ದಿನ
  • ಪೂರ್ವಿಕರು ಹಿರಿಯರು ಮಾಡಿದ ಧರ್ಮ ಕರ್ಮಗಳಿಂದ ನಿಮಗೆ ಯಶಸ್ಸು ಸಿಗುತ್ತದೆ
  • ವ್ಯಾಪಾರಿಗಳಿಗೆ ಉದ್ವೇಗ ಹೆಚ್ಚು ಆದ್ದರಿಂದ ತಾಳ್ಮೆಯಿಂದ ವರ್ತಿಸಿ
  • ಹೊಸ ಕೆಲಸವನ್ನು ಶುರು ಮಾಡುವ ಯೋಚನೆ ಬರುತ್ತದೆ ಅನುಕೂಲವೂ ಇದೆ
  • ವಾಹನ ಚಾಲಕರು ನಿಯಮಾನುಸಾರ ವಾಹನ ಚಾಲನೆ ಮಾಡಿದರೆ ಒಳ್ಳೆಯದು
  • ನಿಮ್ಮ ಗುರುಗಳನ್ನು ಆರಾಧಿಸಿ

ಕುಂಭ

RASHI_BHAVISHA_KUMBHA

  • ಬೇರೆಯವರಿಗೆ ಸಹಾಯ ಮಾಡುತ್ತೀರಿ ಇದರಿಂದ ಮನಸ್ಸಿಗೆ ತೃಪ್ತಿ ಸಿಗಲಿದೆ
  • ಹಿಂದೆ ಮಾಡಿದ್ದ ಉತ್ತಮ ಕೆಲಸಗಳಿಗೆ ಇಂದು ಮೆಚ್ಚುಗೆ ಸಿಗುತ್ತದೆ
  • ದೊಡ್ಡ ಉದ್ದಿಮೆ-ಕೈಗಾರಿಕೆಗಳನ್ನು ಹೊಂದಿರುವವರಿಗೆ ಶುಭಫಲ 
  • ಹೊಸ ಕೆಲಸಗಳು ಯೋಜನೆಗಳು ಆರಂಭವಾಗುವ ದಿನ 
  • ಕುಟುಂಬಕ್ಕೆ ಹೊಸ ಅತಿಥಿ ಆಗಮನ ಸಾಧ್ಯತೆ ಇದೆ
  • ನಿಮ್ಮ ವೃತ್ತಿಯಲ್ಲಿ ಸಮಾಧಾನ ಸಿಗುವ ದಿನ
  • ದುರ್ಗಾ ಪರಮೇಶ್ವರಿಯನ್ನು ಪ್ರಾರ್ಥನೆ ಮಾಡಿ
Advertisment

ಮೀನ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಕುಟುಂಬದ ಸದಸ್ಯರ ಮಧ್ಯೆ ಕಲಹ ಸಾಧ್ಯತೆ
  • ನಿಮಗೆ ಇಂದು ಹಿತಶತೃಗಳಿಂದ ತೊಂದರೆ ಸಾಧ್ಯತೆ ಎಚ್ಚರಿಕೆ ಇರಲಿ
  • ಇಂದು ಶಾಂತವಾಗಿರಿ ನಿಮ್ಮ ಕೆಲಸ-ಕಾರ್ಯಗಳ ಬಗ್ಗೆ ಗಮನಹರಿಸಿ
  • ಅನಾರೋಗ್ಯ ಪೀಡಿತರು ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಿ
  • ಪಿತ್ರಾರ್ಜಿತ ಆಸ್ತಿಯ ಬಗ್ಗೆ ಕೋರ್ಟ್​​ನಲ್ಲಿ ಇತ್ಯರ್ಥ ಆಗಲಿದೆ
  • ಈಶ್ವರನ ಆರಾಧಿಸಿ

ಇದನ್ನೂ ಓದಿ: ಜಾಹ್ನವಿ, ಅಶ್ವಿನಿ ಸ್ನೇಹ ಅಂತ್ಯ.. ಹೇಗಿದ್ರು, ಹೇಗಾದ್ರು ಅಂತಿದ್ದಾರೆ ಬಿಗ್​ಬಾಸ್..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Rashi Bhavishya
Advertisment
Advertisment
Advertisment