Advertisment

Today Horoscope: ಮದ್ವೆ ವಿಚಾರ ಪ್ರಸ್ತಾಪ -ಯಾವ ರಾಶಿಗೆ ಇವತ್ತು ಶುಭ ದಿನ..?

ಶ್ರೀ ವಿಶ್ವಾವಸುನಾಮ ಸಂವತ್ಸರ ದಕ್ಷಿಣಾಯಣ ಹಿಮವಂತ ಋತು. ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ಸಪ್ತಮಿ ತಿಥಿ, ಮಖಾ ನಕ್ಷತ್ರ. ರಾಹುಕಾಲ ಗುರುವಾರ ಮಧ್ಯಾಹ್ನ 1.30 ರಿಂದ 10.30 ರವರೆಗೆ ಇರಲಿದೆ.

author-image
Ganesh Kerekuli
ಪ್ರೇಮಿಗಳಿಗೆ ಶುಭದಿನ; ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡ; ಇಲ್ಲಿದೆ ಇಂದಿನ ಭವಿಷ್ಯ
Advertisment

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

Advertisment

ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೇಷ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಅನಾರೋಗ್ಯದಿಂದ ಜೀವನದ ಕೊನೆಯ ಹಂತ ತಲುಪಿರಬಹುದು
  • ಚಿತ್ರರಂಗದಲ್ಲಿ ಕೆಲಸ ಮಾಡುವವರಿಗೆ ತುಂಬಾ ಶುಭ ದಿನ
  • ನಿಮ್ಮ ಮನಸ್ಸಿಗೆ ತುಂಬಾ ನೋವು ಉಂಟುಮಾಡಬಹುದು
  • ಮಾನಸಿಕ ವಿರಾಮದಿಂದ ಸಾಯಂಕಾಲಕ್ಕೆ ಎಲ್ಲಾ ಸರಿ ಹೋಗಬಹುದು
  • ಏನೂ ಕೆಲಸವಿರುವುದಿಲ್ಲ, ಆದರೆ ಪುರುಸೊತ್ತು ಮಾತ್ರ ಇರುವುದಿಲ್ಲ
  • ಸಂಪಾದನೆಯೇ ನಿಮ್ಮ ಗುರಿಯಾಗಿರಬೇಕು
  • ಈಶ್ವರನನ್ನು ಆರಾಧನೆ ಮಾಡಿ

ವೃಷಭ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ವಿದ್ಯಾರ್ಥಿಗಳು ತಮ್ಮದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸಬಹುದು
  • ಬಟ್ಟೆ ವ್ಯಾಪಾರಿಗಳಿಗೆ ನಷ್ಟ ಅಥವಾ ಮೋಸ ಆಗುವ ಸಾಧ್ಯತೆಯಿದೆ
  • ತುಂಬಾ ದಿನಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದವರಿಗೆ ಈ ದಿನ ಪರಿಹಾರ ಸಿಗಬಹುದು
  • ನಿಮ್ಮ ಆತುರದ ನಿರ್ಧಾರಗಳಿಂದ ತುಂಬಾ ನಷ್ಟವನ್ನು ಹೊಂದುವ ಸಾಧ್ಯತೆಯಿದೆ
  • ವಿದ್ಯಾರ್ಥಿಗಳು ಮತ್ತು ಮಕ್ಕಳು ತುಂಬಾ ತಾಳ್ಮೆಯಿಂದ ವರ್ತಿಸಬೇಕಾದ ದಿನ
  • ಏಕಾಗ್ರತೆಯಿಂದ ಮಾತ್ರ ಜಯಶೀಲರಾಗುವ ಸಾಧ್ಯತೆ
  • ದುಂದುವೆಚ್ಚಕ್ಕೆ ಕಡಿವಾಣ ಹಾಕಿ
  • ನವಗ್ರಹರ ಸ್ತೋತ್ರ ಪಠಿಸಿ

ಮಿಥುನ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಹುಚ್ಚು ಧೈರ್ಯ ಇರುವ ಪ್ರೇಮಿಗಳಿಗೆ ಅಪಘಾತ ವಾಹನ ಜಖಂ ಆಗುವ ಸಾಧ್ಯತೆಯಿದೆ
  • ತಮ್ಮ ವ್ಯವಹಾರದ ವಿಚಾರಗಳು ಮನೆಯಲ್ಲಿ ತಿಳಿಸದ ಕಾರಣ ತೊಂದರೆಯಾಗಬಹುದು
  • ಇಂದು ನಿಮ್ಮ ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ
  • ನೀವು ತೆಗೆದುಕೊಳ್ಳುವ ನಿರ್ಧಾರ ತೊಂದರೆ ಉಂಟು ಮಾಡಬಹುದು
  • ಸುಳ್ಳು ಯಾವುದೇ ಕಾರಣಕ್ಕೂ ಹೇಳಬೇಡಿ  ಸತ್ಯ ಹೇಳಿ ಜಯಶೀಲರಾಗಿ
  • ದುರ್ಗಾಪರಮೇಶ್ವರಿಗೆ ಹಾಲು ಮತ್ತು ಕುಂಕುಮ ಅರ್ಪಣೆ ಮಾಡಿ
Advertisment

ಕಟಕ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಸ್ತ್ರೀಯರು ಬೆನ್ನು ನೋವಿನಿಂದ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಯಿದೆ
  • ಸಗಟು ವ್ಯಾಪಾರಿಗಳಿಗೆ ತಮ್ಮ ಕರ್ತವ್ಯ ಲೋಪದಿಂದ ಅಧಿಕಾರಿಗಳು ದಂಡ ವಿಧಿಸುವ ಸಾಧ್ಯತೆಯಿದೆ
  • ಬೆಲೆ ಬಾಳುವ ಆಭರಣ ಕಳುವಾಗಬಹುದು ಜಾಗ್ರತೆ
  • ಮನಸ್ಸು ಶರೀರದ ಮೇಲೆ ಪ್ರಭಾವ ಬೀರುವ ಯಾವುದೇ ಆಲೋಚನೆ ಮಾಡಬೇಡಿ ಅನಾರೋಗ್ಯ ಕಾಡಬಹುದು
  • ಇಂದು ಅನಗತ್ಯ ಹಣ ಖರ್ಚಾಗುವ ಸಾಧ್ಯತೆಯಿದೆ
  • ಸಾಯಂಕಾಲ ಸುಖವಾದ ಭೋಜನಕ್ಕೆ ಅವಕಾಶವಿದೆ
  • ನರಸಿಂಹ ಸ್ವಾಮಿಯನ್ನು ಆರಾಧಿಸಿ

ಸಿಂಹ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಮಾತೆಯರು ಬೆನ್ನು ನೋವಿನಿಂದ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಯಿದೆ
  • ಇಂದು ಯಾವುದೇ ಅಪೇಕ್ಷೆಯಿಲ್ಲದ ಸಹಾಯ ಮಾಡುವ ಸ್ವಭಾವ ನಿಮ್ಮದಾಗಬೇಕು
  • ಜಗತ್ತಿನ ಒಳಿತಿಗೆ ಯಾವುದು ಬೇಕು ಬೇಡದ ಬಗ್ಗೆ ಚರ್ಚಿಸುತ್ತೀರಿ
  • ಜೀವನ ಇಷ್ಟೇ ಎಂಬ ನಿರ್ಧಾರಕ್ಕೆ ಬರುವ ಸಾಧ್ಯತೆಯಿದೆ ಆದರೆ ಧನಾತ್ಮಕವಾಗಿರಲಿ
  • ಪುಸ್ತಕ ಪ್ರೇಮಿಗಳಿಗೆ ತುಂಬಾ ಶುಭ ದಿನ
  • ಮನೆಯ ಹತ್ತಿರದಲ್ಲಿ ಬೆಂಕಿ ಅವಘಡ ಸಂಭವಿಸಬಹುದು
  • ಪುಸ್ತಕದ ಪ್ರಭಾವ ನಿಮ್ಮನ್ನು ಪೂರ್ಣವಾಗಿ ಆವರಿಸುವ ಸಾಧ್ಯತೆ
  • ಜೀವನದಲ್ಲಿ ಜಿಗುಪ್ಸೆ ಅಥವಾ ವೈರಾಗ್ಯ ಕಾಡಲು ಆರಂಭವಾಗಬಹುದು
  • ಸೂರ್ಯನನ್ನು ಪ್ರಾರ್ಥಿಸಿ

ಕನ್ಯಾ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಆಧುನಿಕ ತಂತ್ರಜ್ಞಾನದ ಮೊರೆ ಹೋಗುತ್ತೀರಿ
  • ಈ ದಿನ ನವವಿವಾಹಿತರಿಗೆ ಶುಭದಿನ
  • ನ್ಯಾಯಾಲಯದಲ್ಲಿ ಕೆಲಸಗಳಿದ್ದರೆ ಅದು ಇತ್ಯರ್ಥವಾಗದೆ ಸಮಸ್ಯೆ ಹೆಚ್ಚಾಗಬಹುದು
  • ಚಿಕ್ಕ ಪುಟ್ಟ ವ್ಯಾಪಾರಿಗಳಿಗೆ ಲಾಭವಿದೆ
  • ತಮ್ಮ ಶಕ್ತಿ,ಸಾಮರ್ಥ್ಯ ಹಣವನ್ನು ಖರ್ಚು ಮಾಡಿ ಕೆಲಸ ಗಿಟ್ಟಿಸಿಕೊಂಡವರಿಗೆ ಅಶುಭ
  • ಸರ್ಕಾರಿ ಉದ್ಯೋಗಿಗಳಿಗೆ ವರ್ಗಾವಣೆಯ ಭಯವಿರುತ್ತದೆ
  • ಅಷ್ಟಕುಲ ನಾಗೇಂದ್ರನನ್ನು ಸ್ಮರಿಸಿ
Advertisment

ತುಲಾ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಹಾವಿನಿಂದ ತೊಂದರೆಯಾಗಬಹುದು ಜಾಗ್ರತೆ ವಹಿಸಿ
  • ಮಕ್ಕಳ ವಿಚಾರದಲ್ಲಿ ತಾತ್ಸಾರ ಬೇಡ 
  • ಎರಡನೇ ಮದುವೆಯಾದವರಿಗೆ ತೊಂದರೆ ಆಗಬಹುದು
  • ಹಿರಿಯರನ್ನು ಪೋಷಕರನ್ನು ನೋಡುವ ತವಕ ಹೆಚ್ಚಾಗಬಹುದು 
  • ನಿಮ್ಮ ನಡವಳಿಕೆಯಿಂದ ನೀವು ಪೊಲೀಸರ ಅತಿಥಿಯಾಗಬಹುದು
  • ನೆರೆಹೊರೆಯವರು ಸಹಾಯ ಮಾಡುವ ರೂಪದಲ್ಲಿ ನಿಮಗೆ ಮೋಸ ಮಾಡಬಹುದು
  • ಅಕಸ್ಮಾತಾಗಿ ಕಾಲಿಗೆ ಪೆಟ್ಟು ಬೀಳಬಹುದು ಗಮನಹರಿಸಿ
  •  ಸ್ವಯಂವರ ಪಾರ್ವತಿಯನ್ನು ಪ್ರಾರ್ಥಿಸಿ

ವೃಶ್ಚಿಕ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಪದವೀದರ ವಿದ್ಯಾರ್ಥಿಗಳಿಗೆ ಓದಲು ಬರೆಯಲು ಸಮಯ ಇರುವುದಿಲ್ಲ
  • ಮಾನಸಿಕವಾಗಿ ಭಯ ಹೆಚ್ಚಾಗಬಹುದು
  • ಇಡೀ ಕುಟುಂಬ ಮತ್ತು ಭವಿಷ್ಯದ ಕೆಲವು ಅಂಶಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ
  • ಕೆಟ್ಟ ಕೆಟ್ಟ ಶಕುನಗಳು ನಿಮ್ಮ ಧೈರ್ಯವನ್ನು ಕಡಿಮೆ ಮಾಡಲಿದೆ
  • ಮನೆಯಲ್ಲಿ ಎಲ್ಲರೂ ಸಂತೋಷದಿಂದ ಇರುವ ಸಂದರ್ಭ ನಿಮ್ಮ ಆಲೋಚನೆಗಳು ಬೇರೆ ಇರುತ್ತದೆ
  • ನಿಮ್ಮ ಆಲೋಚನೆಯೇ ಬೇರೆ ಕಾರ್ಯಕ್ಷೇತ್ರದಲ್ಲಿ ನಡೆಯೋದೆ ಬೇರೆ ಆಗಿರುತ್ತದೆ
  • ಆರ್ಥಿಕ ದೃಷ್ಠಿಯಿಂದ ಹಣಕಾಸಿನ ವಿಚಾರದಿಂದ ಈ ದಿನ ಚೆನ್ನಾಗಿರುವುದಿಲ್ಲ
  • ನೀಲಿ ಹೂವಿನಿಂದ ಶನೇಶ್ಚರನನ್ನು ಅರ್ಚಿಸಿ

ಧನುಸ್​

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಆಸೆಗೆ ಕಟ್ಟು ಬಿದ್ದು ಪ್ರಾಣಕ್ಕೆ ಕುತ್ತು ತಂದುಕೊಳ್ಳಬೇಕಾಗಬಹುದು
  • ಮನೆಯಲ್ಲಿ ಹಲವು ಜಟಿಲ ಸಮಸ್ಯೆಗಳಿರುತ್ತವೆ ನೀವು ಮಾತ್ರ ತಲೆ ಕೆಡಿಸಿಕೊಳ್ಳುವುದಿಲ್ಲ
  • ಮಾಂತ್ರಿಕ ವಿಚಾರಗಳಿಂದ ದೂರ ಉಳಿಯಬೇಕು
  • ನೀವು ನಿಮ್ಮದೆ ಲೋಕದಲ್ಲಿ ವಿಹರಿಸುತ್ತಿರುತ್ತೀರಿ
  • ನಿಗೂಢ ವಿಚಾರಗಳಲ್ಲಿ ಮನಸ್ಸು ತಲ್ಲೀನವಾಗಿರುತ್ತದೆ
  • ಮನೆಯವರು ನಿಮಗೆ ಏನೇ ಹೇಳಿದ್ರೂ ನಿಮ್ಮ ತಲೆಗೆ ಹೋಗುವುದಿಲ್ಲ
  • ಮನೆಯವರ ಜೊತೆ ಜಗಳ ಮಾಡುತ್ತೀರಿ
  • ರಕ್ಷಾ ಸುದರ್ಶನನನ್ನು ಪ್ರಾರ್ಥಿಸಿ
Advertisment

ಮಕರ

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಹಿರಿಯರ ಅನಾರೋಗ್ಯ ನಿಮ್ಮ ಮನಸ್ಸನ್ನು ವಿಕತಗೊಳಿಸುವ ಸಾಧ್ಯತೆ
  • ಹೆಚ್ಚು ಪರಿಶ್ರಮ ಪಡುತ್ತೀರಿ ಅದರಿಂದ ಶುಭಫಲವಾಗುತ್ತದೆ
  • ನಿಮ್ಮ ಪ್ರತಿಸ್ಪರ್ಧಿಗಳು ನಿಮ್ಮ ಮುಂದೆ ದುರ್ಬಲರಾಗುತ್ತಾರೆ
  • ಮಕರ ರಾಶಿಯ ಹಲವರಿಗೆ ಈ ದಿನ ಶುಭವಿಲ್ಲ
  • ನೀವು ಮಾಡಿದ ಕೆಲಸ ನಿಮಗೆ ತೃಪ್ತಿಯಾಗುವುದಿಲ್ಲ 
  • ಸಾಯಂಕಾಲ ಮನೆಯಲ್ಲಿ ಅಶಾಂತಿ ವಾತಾವರಣ
  • ನಿಮ್ಮ ಮನಸ್ಸಿನಲ್ಲಿ ಹಲವಾರು ಗೊಂದಲಗಳಿರುತ್ತವೆ
  • ಕುಲದೇವತಾ ಸ್ಮರಣೆ ಮಾಡಿ

ಕುಂಭ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಕಣ್ಣಿನ ತೊಂದರೆ ಕಾಣಬಹುದು ಜಾಗ್ರತೆ ವಹಿಸಿ
  • ಜನರಿಗೆ ಕೈಲಾದ ಸಹಾಯ ಮಾಡಬೇಕೆಂಬ ಆಲೋಚನೆ ಬರುತ್ತದೆ
  • ಕಬ್ಬಿಣ ವ್ಯಾಪಾರಿಗಳಿಗೆ  ಕಟ್ಟಡ ಸಾಮಾಗ್ರಿ ವ್ಯಾಪಾರಿಗಳಿಗೆ ಶುಭವಿದೆ
  • ದೂರದ ಸಂಬಂಧಿಕರನ್ನು ಭೇಟಿ ಮಾಡಿ ವಿವಾಹ ವಿಚಾರ ಪ್ರಸ್ತಾಪ ಮಾಡಬಹುದು  
  • ಕುಟುಂಬದವರು ನಿಮ್ಮ ಬಗ್ಗೆ ಕಾಳಜಿ ವಹಿಸುತ್ತಾರೆ 
  • ಮದುವೆಯ ವಿಚಾರ ಪ್ರಸ್ತಾಪ ಆಗಲಿದೆ
  • ದೇವಿಯ ಆರಾಧನೆ ಮಾಡಿ

ಮೀನ 

ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

  • ಆರೋಗ್ಯವನ್ನು ತಾತ್ಸಾರ ಮಾಡಬೇಡಿ
  • ಸರಿಯಾದಂತಹ ನಿರ್ಧಾರಬೇಕು ಇಲ್ಲದಿದ್ದರೆ ಪ್ರೇಮದ ವಿಷಯದಲ್ಲಿ ತೊಂದರೆಯನ್ನು ಅನುಭವಿಸಬೇಕಾಗುತ್ತದೆ
  • ಪ್ರೇಮಿಗಳಿಗೆ ಮನಸ್ಸು ತುಂಬಾ ಚಂಚಲವಾಗುವ ದಿನ
  • ಶರೀರದಲ್ಲಿ ಪೌಷ್ಟಿಕಾಂಶದ ಕೊರತೆಯಿಂದಾಗಿ ಸುಸ್ತು ಕಾಣಬಹುದು
  • ನಿಮ್ಮ ಮಹತ್ತರವಾದ ಆಲೋಚನೆಗಳನ್ನ ಸ್ನೇಹಿತರೊಂದಿಗೆ ಹಂಚಿಕೊಳ್ಳಬೇಡಿ
  • ಪಶ್ಚಾತ್ತಾಪ ಪಡುವಂತಹ ಯಾವ ಕೆಲಸಗಳನ್ನು ಮಾಡಬೇಡಿ
  • ಜನರು ನಿಮ್ಮ ವ್ಯವಹಾರವನ್ನು ಗೇಲಿ ಮಾಡಬಹುದು
  • ಮುತ್ತುರಾಯ ಸ್ವಾಮಿಯನ್ನು ಪ್ರಾರ್ಥಿಸಿ
Advertisment

ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Rashi Bhavishya
Advertisment
Advertisment
Advertisment