ಸಾರಿಗೆ ನೌಕರರ ಮುಷ್ಕರ; ಎಂದಿನಂತೆ ಮೆಜೆಸ್ಟಿಕ್​ನಲ್ಲಿ BMTC ಬಸ್​ಗಳ ಸಂಚಾರ..!

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಬಂದ್​ಗೆ ಕರೆ ನೀಡಿದ್ದರು. ಆದ್ರೆ, ಬೆಳಗ್ಗೆ 4.30ಕ್ಕೆ ಕೆಲ ಬಸ್​ಗಳು ಸಂಚಾರ ಆರಂಭಿಸಿವೆ. ಮೆಜೆಸ್ಟಿಕ್, ಶಾಂತಿನಗರ, ಕೆ.ಆರ್​ ಮಾರ್ಕೆಟ್​ನಲ್ಲಿ ಬಿಎಂಟಿಸಿ ಬಸ್​ಗಳು ಸಂಚಾರ ನಡೆಸುತ್ತಿವೆ.

author-image
Veenashree Gangani
bmtc bus
Advertisment
  • ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ಮುಷ್ಕರ
  • ಎಂದಿನಂತೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಬಸ್​ಗಳ ಸಂಚಾರ
  • ಇಂದು ಬೆಳಗ್ಗೆ 4.30 ಕ್ಕೆ ಆರಂಭವಾಗಿರುವ ಬಸ್​ಗಳ ಸಂಚಾರ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಬಂದ್​ಗೆ ಕಡೆ ನೀಡಿದ್ದರು.

ಇದನ್ನೂ ಓದಿ:ಬೆಳಗ್ಗೆ 6 ಗಂಟೆಯಿಂದ ಮುಷ್ಕರ.. ಬಸ್ ಡಿಪೋ ಕಡೆಗೆ ಹೋಗಬೇಡಿ, ಮನೆಯಲ್ಲಿ ಇರಿ; ಅನಂತ

bmtc bus(1)

ಆದ್ರೆ, ಬೆಳಗ್ಗೆ 4.30ಕ್ಕೆ ಕೆಲ ಬಸ್​ಗಳು ಸಂಚಾರ ಆರಂಭಿಸಿವೆ. ಮೆಜೆಸ್ಟಿಕ್, ಶಾಂತಿನಗರ, ಕೆ.ಆರ್​ ಮಾರ್ಕೆಟ್​ನಲ್ಲಿ ಬಿಎಂಟಿಸಿ ಬಸ್​ಗಳು ಸಂಚಾರ ನಡೆಸುತ್ತಿವೆ. ಸದ್ಯ ರಾತ್ರಿ ಪಾಳಿ ಬಿಎಂಟಿಸಿ ಬಸ್​​ಗಳು ಮಾತ್ರ ಸಂಚಾರ ನಡೆಸುತ್ತಿದ್ದು, ಬೆಳಗಿನ ಪಾಳಿಯ ಬಸ್​ಗಳು ಸಂಚಾರ ಮಾಡೋದು ಬಹುತೇಕ ಅನುಮಾನ ಇದೆ. ಹೀಗಾಗಿ ಕೆಲ ಕಂಡಕ್ಟರ್ ಹಾಗೂ ಡ್ರೈವರ್​ಗಳು ಕರ್ತವ್ಯಕ್ಕೆ ಬ್ರೇಕ್​ ಆಗೋ ಎಲ್ಲಾ ಸಾಧ್ಯತೆಗಳಿವೆ. 6 ಗಂಟೆ ನಂತರ ಬಸ್​​ಗಳ ಸಂಚಾರ ಬಂದ್​ ಆಗುವು ಸಾಧ್ಯತೆಗಳಿವೆ. 

ANANTA_SUBBARAO

ಸಾರಿಗೆ ನೌಕರರ ಬೇಡಿಕೆಗಳೇನು?

  • 01-01-2024ರಿಂದ ನೌಕರರ ವೇತನ ಪರಿಷ್ಕರಣೆ ಆಗಬೇಕು
  • ನೌಕರರ 38 ತಿಂಗಳ ಹಿಂಬಾಕಿಯನ್ನು ಪಾವತಿ ಮಾಡಬೇಕು
  • ಸಾರಿಗೆ ನೌಕರರಿಗೆ 7ನೇ ವೇತನ ಆಯೋಗ ಜಾರಿ ಮಾಡಬೇಕು
  • ಸಾರಿಗೆ ನೌಕರರಿಗೆ ಪ್ರತಿ 4 ವರ್ಷಕೊಮ್ಮೆ ವೇತನ ಪರಿಷ್ಕರಣೆ
  • ಇನ್ನು ಮುಂದೆ ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಸಬೇಕು
  • ಈ ಹಿಂದೆ ಮುಷ್ಕರದಲ್ಲಿ ಭಾಗಿಯಾದ ನೌಕರರ ವಜಾ ವಾಪಾಸ್
  • ನೌಕರರ ಕುಟುಂಬಸ್ಥರ ಮೇಲಿನ ಸುಳ್ಳು ಕೇಸ್​ ವಾಪಾಸ್ ಪಡಿಬೇಕು
  • ನಗದು ರಹಿತ ವೈದ್ಯಕೀಯ ಸೌಲಭ್ಯ, ಉತ್ತಮ ಕ್ಯಾಂಟೀನ್ ವ್ಯವಸ್ಥೆ
  • ವಿದ್ಯುತ್‌ ಬಸ್‌ಗಳಲ್ಲಿ ಸಂಸ್ಥೆಯ ಚಾಲಕರನ್ನೇ ನಿಯೋಜಿಸಬೇಕು
  • ವಿದ್ಯುತ್‌ ಬಸ್‌ಗಳ ನಿರ್ವಹಣೆಯನ್ನ ಖಾಸಗಿಯವರಿಗೆ ನೀಡಬಾರದು 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Transport strike
Advertisment