/newsfirstlive-kannada/media/media_files/2025/08/05/namma-metro-2025-08-05-06-42-39.jpg)
ಬೆಂಗಳೂರು: ಇಂದು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಬಸ್ಗಳನ್ನು ರಸ್ತೆಗಿಳಿಸಿಲ್ಲ. ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ ನಮ್ಮ ಮೆಟ್ರೋ ಪ್ರಯಾಣಿಕರ ಮೇಲೆ ಬಿದ್ದಿದೆ.
ಇದನ್ನೂ ಓದಿ:ಸಾರಿಗೆ ನೌಕರರ ಮುಷ್ಕರ; ಎಂದಿನಂತೆ ಮೆಜೆಸ್ಟಿಕ್ನಲ್ಲಿ BMTC ಬಸ್ಗಳ ಸಂಚಾರ..!
ಹೌದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಬಂದ್ಗೆ ಕರೆ ನೀಡಿದ್ದರು. ಈ ಬೆನ್ನಲ್ಲೇ ಬಸ್ಗಳು ಸಿಗೋದಿಲ್ಲ ಅನ್ನೋ ಕಾರಣಕ್ಕೆ ಪ್ರಯಾಣಿಕರು ನಮ್ಮ ಮೆಟ್ರೋ ಕಡೆ ಮುಖ ಮಾಡಿದ್ದಾರೆ.
ಮೆಜೆಸ್ಟಿಕ್ನಲ್ಲಿ ನಮ್ಮ ಮೆಟ್ರೋ ನಿಲ್ದಾಣದ ಮುಂದೆ ಸರತಿ ಸಾಲಿನಲ್ಲಿ ಪ್ರಯಾಣಿಕರು ನಿಂತುಕೊಂಡಿದ್ದಾರೆ. ಪ್ರತಿನಿತ್ಯ ನಮ್ಮ ಮೆಟ್ರೋದಲ್ಲಿ ಅಂದಾಜು 8 ಲಕ್ಷ ಪ್ರಯಾಣಿಕರು ಸಂಚರಿಸುತ್ತಾರೆ. ಆದ್ರೆ ಇಂದು ಸಾರಿಗೆ ನೌಕರರ ಮುಷ್ಕರದಿಂದ ಆ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ಆಯೋಜನೆ ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ