BREAKING; ಗಣೇಶ ಮೆರವಣಿಗೆ ಮೇಲೆ ನುಗ್ಗಿದ ಟ್ರಕ್​.. ಜೀವ ಬಿಟ್ಟ 7 ಜನ, ಕೆಲವರು ಗಂಭೀರ

ಗಣೇಶ ಮೆರವಣಿಗೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಗಣಪತಿ ಮೆರವಣಿಗೆ ಹೋಗುವಾಗ ಜನರ ಮೇಲೆ ಟ್ರಕ್ ನುಗ್ಗಿದ್ದರಿಂದ ಸ್ಥಳದಲ್ಲೇ 7 ಜನ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯು ಹಾಸನ ತಾಲೂಕಿನ ಮೊಸಳೆಹೊಸಹಳ್ಳಿಯಲ್ಲಿ ನಡೆದಿದೆ

author-image
Bhimappa
HSN_GANESHA
Advertisment

ಹಾಸನ: ಗಣೇಶ ಮೆರವಣಿಗೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಗಣಪತಿ ಮೆರವಣಿಗೆ ಹೋಗುವಾಗ ಜನರ ಮೇಲೆ ಟ್ರಕ್ ನುಗ್ಗಿದ್ದರಿಂದ ಘಟನೆಯಲ್ಲಿ 7 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯು ಹಾಸನ ತಾಲೂಕಿನ ಮೊಸಳೆಹೊಸಹಳ್ಳಿಯಲ್ಲಿ ನಡೆದಿದೆ. 

ಅದ್ಧೂರಿಯಾಗಿ ಗಣೇಶ ಮೆರವಣಿಗೆ ಸಾಗುತ್ತಿರುವ ವೇಳೆ ಟ್ರಕ್​ವೊಂದು ಜನರ ಮೇಲೆ ನುಗ್ಗಿದೆ. ಚಾಲಕನ ಅಜಾಗುರಕತೆಯಿಂದ ಈ ಘಟನೆ ನಡೆದಿದೆ. ಡಿವೈಡರ್​ಗೆ ಡಿಕ್ಕಿ ಆದ ಟ್ರಕ್​ ಒಂದು ಬದಿಯಿಂದ ಇನ್ನೊಂದು ಬದಿಗೆ ಬಂದು ಜನರ ಮೇಲೆ ಟ್ರಕ್ ಹರಿದಿದೆ. ಇದರ ಪರಿಣಾಮ ಮೆರವಣಿಗೆಯಲ್ಲಿದ್ದ 7 ಜನರು ಜೀವ ಬಿಟ್ಟಿದ್ದಾರೆ. ಇನ್ನು ಸಾವಿನ ಸಂಖ್ಯೆಯ ಹೆಚ್ಚಾಗುವ ಸಾಧ್ಯತೆ ಇದೆ. 

ಇದನ್ನೂ  ಓದಿ: ಭಾರತದ ಫುಟ್‌ಬಾಲ್ ಅಭಿವೃದ್ಧಿಗೆ ಬೆಂಗಳೂರು FC ಮಹತ್ವದ ಹೆಜ್ಜೆ: ಹೊಸ ತರಬೇತಿ ಕೇಂದ್ರ ಉದ್ಘಾಟನೆ!

HSN_GANESH

ಸದ್ಯ ಸ್ಥಳದಲ್ಲೇ ಸಾವು-ನೋವು ಹೆಚ್ಚಾಗುವ ಸಂಭವವಿದೆ. ಲಾರಿ ಏಕಾಏಕಿ ನುಗ್ಗಿದ್ದರಿಂದ 10 ರಿಂದ 15 ಜನರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಕೆಲವರಂತೂ ನೋವಿನಿಂದ ನರಳುತ್ತಿದ್ದಾರೆ. ಇದು ಅಪಘಾತ ವಲಯ ಎಂದು ಗೊತ್ತಿದ್ದರೂ ಟ್ರಕ್ ವೇಗವಾಗಿ ಬಂದಿದ್ದೇ ಈ ದುರಂತಕ್ಕೆ ಕಾರಣವಾಗಿದೆ.   

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ganesh festival, ganesh chaturthi, ಗಣೇಶ್​ ಹಬ್ಬ Ganesh Chaturthi Ganesh immersion
Advertisment