Advertisment

ಪ್ರಧಾನಿ ನರೇಂದ್ರ ಮೋದಿಗೆ ಭರ್ಜರಿ ಸ್ವಾಗತ ನೀಡಿದ ಕೃಷ್ಣನಗರಿ

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಪಿಯಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಮೋದಿ ಅವರು, ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಉಡುಪಿಯತ್ತ ಪ್ರಯಾಣ ಬೆಳೆಸಿದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಉಡುಪಿ ಹೆಲಿಪ್ಯಾಡ್​ಗೆ ಆಗಮಿಸಿದರು.

author-image
Ganesh Kerekuli
Narendra modi (5)
Advertisment

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ ಆಗಮಿಸಿದ್ದು, ಕೃಷ್ಣನಗರಿಯಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. 

Advertisment

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಮೋದಿ ಅವರು, ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಉಡುಪಿಯತ್ತ ಪ್ರಯಾಣ ಬೆಳೆಸಿದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಉಡುಪಿ ಹೆಲಿಪ್ಯಾಡ್​ಗೆ ಆಗಮಿಸಿದರು. 

Narendra modi (8)

ಅಲ್ಲಿಂದ ಸುಮಾರು 1.8 ಕಿಲೋ ಮೀಟರ್ ದೂರದ ವರೆಗೆ ರೋಡ್​ ಶೋ ನಡೆಸಿದರು. ಈ ವೇಳೆ ಮೋದಿಯನ್ನ ನೋಡಲು ರಸ್ತೆ ಬದಿಯಲ್ಲಿ ಜನರು ಕಿಕ್ಕಿರಿದು ನಿಂತಿದ್ದರು. ಬಳಿಕ ನೇರವಾಗಿ ಕೃಷ್ಣಮಠಕ್ಕೆ ತೆರಳಿದ್ದಾರೆ. 

Narendra modi (6)

ಅಲ್ಲಿ ಕನಕನ ಕಿಂಡಿ ಸ್ವರ್ಣ ಲೇಪನ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ತೀರ್ಥಮಂಟಪ ಅನಾವರಣದಲ್ಲಿ ಪಿಎಂ ಮೋದಿ ಭಾಗಿಯಾಗಲಿದ್ದು, ಲಕ್ಷಕಂಠ ಗೀತಗಾಯನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಭಗವದ್ಗೀತೆಯ 10 ಶ್ಲೋಕಗಳನ್ನ ಮೋದಿ ಪಠಿಸಲಿದ್ದಾರೆ. 

Advertisment

ಇದನ್ನೂ ಓದಿ: ಉಡುಪಿಗೆ ಇವತ್ತು ಪ್ರಧಾನಿ ಮೋದಿ ಭೇಟಿ.. ಕನ್ನಡದಲ್ಲೇ ಸಂತಸ ಹಂಚಿಕೊಂಡ ನಮೋ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Pm Narendra Modi Udupi shri krishna mutt udupi Udupi Sri Krishna Matha
Advertisment
Advertisment
Advertisment