ದಾಖಲೆ ಸಮೇತ ಬೆಳ್ತಂಗಡಿ ಠಾಣೆಗೆ ಬಂದ ಯೂಟ್ಯೂಬರ್ ಸಮೀರ್ MD

ಯೂಟ್ಯೂಬರ್​ ಸಮೀರ್ ವಕೀಲರೊಂದಿಗೆ ಬೆಳ್ತಂಗಡಿ ಠಾಣೆಗೆ ಬಂದಿದ್ದಾನೆ. ಜೊತೆಗೆ ದಾಖಲೆಗಳು, ಮೂವರು ವಕೀಲರೊಂದಿಗೆ ಸಮೀರ್ ವಿಚಾರಣೆಗೆ ಹಾಜರಾಗಿದ್ದಾನೆ.

author-image
Veenashree Gangani
sammer
Advertisment

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿದ್ದ ಆರೋಪದ ಮೇಲೆ ಪೊಲೀಸರು ಜುಲೈ 12ರಂದು ಸಮೀರ್​ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದರು. ಇದೇ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್​ನನ್ನು ಬಂಧಿಸಲು ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದರು. 

ಇದನ್ನೂ ಓದಿ:ಫುಲ್​​ ಗ್ಲಾಮರ್​ ಲುಕ್​ನಲ್ಲಿ ದರ್ಶನ್.. ‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಸಾಂಗ್ ರಿಲೀಸ್

ಇದಕ್ಕೂ ಮೊದಲೇ ಆಗಸ್ಟ್ 19ರಂದೇ ಸಮೀರ್​ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಜಿಲ್ಲಾ ನ್ಯಾಯಾಲಯವು ಯೂಟ್ಯೂಬರ್ ಸಮೀರ್​ಗೆ ನಿರೀಕ್ಷಣಾ  ಜಾಮೀನು ಮಂಜೂರು ಮಾಡಿತ್ತು. 

sammer(1)

ಇದೀಗ ಯೂಟ್ಯೂಬರ್​ ಸಮೀರ್ ವಕೀಲರೊಂದಿಗೆ ಬೆಳ್ತಂಗಡಿ ಠಾಣೆಗೆ ಬಂದಿದ್ದಾನೆ. ಜೊತೆಗೆ ದಾಖಲೆಗಳು, ಮೂವರು ವಕೀಲರೊಂದಿಗೆ ಸಮೀರ್ ವಿಚಾರಣೆಗೆ ಹಾಜರಾಗಿದ್ದಾನೆ. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಕೇಸ್​​ನಲ್ಲಿ ಪೊಲೀಸರು ನೋಟಿಸ್ ಕೊಟ್ಟಿದ್ದರು. ಹೀಗಾಗಿ ನಾಪತ್ತೆಯಾಗಿದ್ದ ಸಮೀರ್​ ಈಗ ವಿಚಾರಣೆಗೆಂದು ಬೆಳ್ತಂಗಡಿ ಠಾಣೆಗೆ ಆಗಮಿಸಿದ್ದಾನೆ.

ಸಮೀರ್ ವಿರುದ್ಧ ಕೇಳಿಬಂದ ಆರೋಪಗಳೇನು..?

  • ಧರ್ಮಸ್ಥಳದ ವಿರುದ್ಧ ಅಪ ಪ್ರಚಾರ ಮಾಡಿರುವ ಆರೋಪ
  • ಶ*ವಗಳನ್ನ ಹೂತಿಟ್ಟ ಬಗ್ಗೆ, ಬುರುಡೆ ರಹಸ್ಯದ ಬಗ್ಗೆ ವಿಡಿಯೋ
  • AI ವಿಡಿಯೋಗಳ ಮೂಲಕ ಅಪಪ್ರಚಾರ ಮಾಡಿದ ಆರೋಪ
  • ಜನರನ್ನ ಹಾದಿ ತಪ್ಪಿಸೋದಕ್ಕೆ ವಿಡಿಯೋ ಮಾಡಿದ ಆರೋಪ
  • ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪ
  • ಬುರುಡೆ ಪ್ರಕರಣದಲ್ಲಿ ಸಮೀರ್ ಕೂಡ ಸೂತ್ರಧಾರಿ ಎನ್ನಲಾಗಿದೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

dharmasthala case, sameer md
Advertisment