/newsfirstlive-kannada/media/media_files/2025/08/21/sameer-m-d-2025-08-21-14-58-21.jpg)
ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದ ಆರೋಪದ ಬೆನ್ನಲ್ಲೇ ಯೂಟ್ಯೂಬರ್ ಸಮೀರ್ ಎಂ.ಡಿಯನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ. ಈಗಾಗಲೇ ಪೊಲೀಸರು ಬೆಂಗಳೂರಿನ ಬನ್ನೇರುಘಟ್ಟ ಬಳಿಯ ಹುಲ್ಲಳ್ಳಿಯಲ್ಲಿರುವ ಸಮೀರ್ ಮನೆಯನ್ನ ಸುತ್ತುವರೆದಿದ್ದಾರೆ.
ಯೂಟ್ಯೂಬರ್ ಸಮೀರ್​ಗೆ ಬಂಧನದ ಭೀತಿ ಎದುರಾಗುದೆ. ಸಮೀರ್​ನನ್ನು ವಶಕ್ಕೆ ಪಡೆಯಲು ಪೊಲೀಸರು ಬರ್ತಿದ್ದಂತೆ ಮನೆಬಿಟ್ಟು ಪರಾರಿಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಸಮೀರ್​ ಮನೆಯಲ್ಲಿ ಕುಟುಂಬಸ್ಥರು ಮಾತ್ರ ಇದ್ದಾರೆ ಅಂತ ಮಾಹಿತಿ ಸಿಕ್ಕಿದೆ.
ಇದನ್ನೂ ಓದಿ:ಅನನ್ಯ ಭಟ್ ಬಗ್ಗೆ ಸುಜಾತ ಭಟ್ ರಿಂದ ಗೊಂದಲ, ಅಸ್ಪಷ್ಟ ಹೇಳಿಕೆ, ಉತ್ತರ ಸಿಗದ 15 ಪ್ರಶ್ನೆಗಳು
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದ ಆರೋಪದ ಬೆನ್ನಲ್ಲೇ ಯೂಟ್ಯೂಬರ್ ಸಮೀರ್​ನನ್ನು ಬಂಧಿಸಲು ಧರ್ಮಸ್ಥಳ ಪೊಲೀಸ್ ಠಾಣೆಯ ಮೂವರು ಪೊಲೀಸರು ಬಂದಿದ್ದಾರೆ. ಬನ್ನೇರುಘಟ್ಟ ಬಳಿಯ ಹುಲ್ಲಳ್ಳಿಯಲ್ಲಿರುವ ಸಮೀರ್​ ಮನೆಯನ್ನು ಧರ್ಮಸ್ಥಳ ಹಾಗೂ ಬನ್ನೇರುಘಟ್ಟ ಪೊಲೀಸರು ಸುತ್ತುವರೆದಿದ್ದಾರೆ. ಸಿಡಿಆರ್ ಹಾಗೂ ಮೊಬೈಲ್ ನೆಟ್​ವರ್ಕ್ ಆಧಾರಿತವಾಗಿ ಸಮೀರ್​ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಲೊಕೇಶನ್ ಡಂಪ್ ಮಾಡಿದ್ದ ಧರ್ಮಸ್ಥಳ ಪೊಲೀಸರಿಗೆ ಆಗ ಸಿಕ್ಕಿದ್ದೇ ಹುಲ್ಲಳ್ಳಿಯ ಕ್ರೈಸ್ಟ್ ಕಾಲೇಜು ಪಕ್ಕದಲ್ಲಿರುವ ಮನೆ. ಸದ್ಯ ಸಮೀರ್ ಮನೆಯನ್ನು ಪೊಲೀಸರು ಜಾಲಾಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us