ಕರ್ನಾಟಕದಲ್ಲಿ ಈಗ ಮಂಡ್ಯ ಲೋಕಸಭಾ ಕ್ಷೇತ್ರದ್ದೇ ಸದ್ದು!
ಕಾಂಗ್ರೆಸ್ನಿಂದಲೇ ಸ್ಪರ್ಧೆ ಮಾಡ್ತಾರಾ ಸುಮಲತಾ ಅಂಬರೀಶ್?
ಬಿಜೆಪಿಯಿಂದ ಟಿಕೆಟ್ ಸಿಗೋದರ ಬಗ್ಗೆ ಏನಂದ್ರು ಅಂಬಿ ಪತ್ನಿ?
ಮಂಡ್ಯ: ಬಿಜೆಪಿ, ಜೆಡಿಎಸ್ ಮೈತ್ರಿಯಾದ ಕಾರಣ ಮಂಡ್ಯ ಟಿಕೆಟ್ ವಿಚಾರಕ್ಕೆ ಕಗ್ಗಂಟು ಮುಂದುವರಿದಿದೆ. ಈ ಸಲ ಸುಮಲತಾ ಸ್ಪರ್ಧೆ ಖಚಿತ ಎಂದು ಗೊತ್ತಾಗಿದೆ. ಹೀಗಾಗಿ ಜೆಡಿಎಸ್ಗೆ ಟೆನ್ಷನ್ ಡಬಲ್ ಆಗಿದ್ದು, ಈ ಬಗ್ಗೆ ಭಾರೀ ಚರ್ಚೆ ನಡೆದಿದೆ. ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ಆಗಿದ್ದು, ಸೋತ ಕಣದಲ್ಲೇ ಗೆಲ್ಲಲು ಕುಮಾರಸ್ವಾಮಿ ಅಗತ್ಯತೆ ಅಭಿಪ್ರಾಯ ವ್ಯಕ್ತವಾಗಿದೆ. ಆದ್ರೆ, ಕಳೆದ ಬಾರಿ ಸುಮಲತಾ ಪರವಿದ್ದ ಅನುಕಂಪ, ನಿಖಿಲ್ ಪರ ತಿರುಗಿದೆ ಅನ್ನೋ ಅಭಿಪ್ರಾಯ ಕ್ಷೇತ್ರದಲ್ಲಿ ಕಾಣಿಸ್ತಿದ್ದು, ನಿಖಿಲ್ಗೆ ಮತ್ತೆ ಕಣಕ್ಕಿಳಿಸಲು ಹೆಚ್ಡಿಕೆ ಪ್ಲಾನ್ ರೂಪಿಸಿದ್ದಾರೆ. ಈ ಮಧ್ಯೆ ತನ್ನ ಸ್ಪರ್ಧೆ ಬಗ್ಗೆ ಸುಮಲತಾ ಅಂಬರೀಶ್ ಮಾತಾಡಿದ್ದಾರೆ.
ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ. ನನಗೆ ಬಿಜೆಪಿಯಿಂದ ಟಿಕೆಟ್ ಸಿಗಲಿದೆ ಅನ್ನೋ ನಂಬಿಕೆ ಇದೆ. ನಮಗೂ ನಂಬಲರ್ಹ ಮೂಲಗಳು ಇವೆ. ದೊಡ್ಡವರಿಂದಲೇ ನನಗೆ ಟಿಕೆಟ್ ಸಿಗೋ ಭರವಸೆ ಸಿಕ್ಕಿದೆ. ನಾನು ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಕಾಮೆಂಟ್ ಮಾಡಲ್ಲ ಎಂದರು.
ಬಿಜೆಪಿಯಿಂದ ಟಿಕೆಟ್ ಸಿಗದೆ ಹೋದರೆ ಕಾಂಗ್ರೆಸ್ ಸೇರ್ತೀರಾ? ಅನ್ನೋ ಬಗ್ಗೆ ಮಾತಾಡಿದ ಸುಮಲತಾ ಹೀಗೆಂದರು. ನನಗೆ ಕಾಂಗ್ರೆಸ್ನಲ್ಲಿ ಒಳ್ಳೆಯ ಸ್ನೇಹಿತರು ಇದ್ದಾರೆ. ಅಲ್ಲಿ ಇರೋರು ಎಲ್ಲರೂ ಅಂಬರೀಶ್ ಅವರ ಸ್ನೇಹಿತರೇ. ಕಾಂಗ್ರೆಸ್ ಸೇರುವಂತೆ ನನಗೆ ಹಲವರು ಕೇಳಿಕೊಂಡಿದ್ದಾರೆ. ನಿಮ್ಮ ಪರ ನಾವು ನಿಲ್ಲುತ್ತೇವೆ ಎನ್ನುತ್ತಿದ್ದಾರೆ. ಅಂತಹ ಸಂದರ್ಭ ಬಂದಾಗ ನಿಮಗೆ ಹೇಳುತ್ತೇನೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕರ್ನಾಟಕದಲ್ಲಿ ಈಗ ಮಂಡ್ಯ ಲೋಕಸಭಾ ಕ್ಷೇತ್ರದ್ದೇ ಸದ್ದು!
ಕಾಂಗ್ರೆಸ್ನಿಂದಲೇ ಸ್ಪರ್ಧೆ ಮಾಡ್ತಾರಾ ಸುಮಲತಾ ಅಂಬರೀಶ್?
ಬಿಜೆಪಿಯಿಂದ ಟಿಕೆಟ್ ಸಿಗೋದರ ಬಗ್ಗೆ ಏನಂದ್ರು ಅಂಬಿ ಪತ್ನಿ?
ಮಂಡ್ಯ: ಬಿಜೆಪಿ, ಜೆಡಿಎಸ್ ಮೈತ್ರಿಯಾದ ಕಾರಣ ಮಂಡ್ಯ ಟಿಕೆಟ್ ವಿಚಾರಕ್ಕೆ ಕಗ್ಗಂಟು ಮುಂದುವರಿದಿದೆ. ಈ ಸಲ ಸುಮಲತಾ ಸ್ಪರ್ಧೆ ಖಚಿತ ಎಂದು ಗೊತ್ತಾಗಿದೆ. ಹೀಗಾಗಿ ಜೆಡಿಎಸ್ಗೆ ಟೆನ್ಷನ್ ಡಬಲ್ ಆಗಿದ್ದು, ಈ ಬಗ್ಗೆ ಭಾರೀ ಚರ್ಚೆ ನಡೆದಿದೆ. ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ಆಗಿದ್ದು, ಸೋತ ಕಣದಲ್ಲೇ ಗೆಲ್ಲಲು ಕುಮಾರಸ್ವಾಮಿ ಅಗತ್ಯತೆ ಅಭಿಪ್ರಾಯ ವ್ಯಕ್ತವಾಗಿದೆ. ಆದ್ರೆ, ಕಳೆದ ಬಾರಿ ಸುಮಲತಾ ಪರವಿದ್ದ ಅನುಕಂಪ, ನಿಖಿಲ್ ಪರ ತಿರುಗಿದೆ ಅನ್ನೋ ಅಭಿಪ್ರಾಯ ಕ್ಷೇತ್ರದಲ್ಲಿ ಕಾಣಿಸ್ತಿದ್ದು, ನಿಖಿಲ್ಗೆ ಮತ್ತೆ ಕಣಕ್ಕಿಳಿಸಲು ಹೆಚ್ಡಿಕೆ ಪ್ಲಾನ್ ರೂಪಿಸಿದ್ದಾರೆ. ಈ ಮಧ್ಯೆ ತನ್ನ ಸ್ಪರ್ಧೆ ಬಗ್ಗೆ ಸುಮಲತಾ ಅಂಬರೀಶ್ ಮಾತಾಡಿದ್ದಾರೆ.
ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ. ನನಗೆ ಬಿಜೆಪಿಯಿಂದ ಟಿಕೆಟ್ ಸಿಗಲಿದೆ ಅನ್ನೋ ನಂಬಿಕೆ ಇದೆ. ನಮಗೂ ನಂಬಲರ್ಹ ಮೂಲಗಳು ಇವೆ. ದೊಡ್ಡವರಿಂದಲೇ ನನಗೆ ಟಿಕೆಟ್ ಸಿಗೋ ಭರವಸೆ ಸಿಕ್ಕಿದೆ. ನಾನು ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಕಾಮೆಂಟ್ ಮಾಡಲ್ಲ ಎಂದರು.
ಬಿಜೆಪಿಯಿಂದ ಟಿಕೆಟ್ ಸಿಗದೆ ಹೋದರೆ ಕಾಂಗ್ರೆಸ್ ಸೇರ್ತೀರಾ? ಅನ್ನೋ ಬಗ್ಗೆ ಮಾತಾಡಿದ ಸುಮಲತಾ ಹೀಗೆಂದರು. ನನಗೆ ಕಾಂಗ್ರೆಸ್ನಲ್ಲಿ ಒಳ್ಳೆಯ ಸ್ನೇಹಿತರು ಇದ್ದಾರೆ. ಅಲ್ಲಿ ಇರೋರು ಎಲ್ಲರೂ ಅಂಬರೀಶ್ ಅವರ ಸ್ನೇಹಿತರೇ. ಕಾಂಗ್ರೆಸ್ ಸೇರುವಂತೆ ನನಗೆ ಹಲವರು ಕೇಳಿಕೊಂಡಿದ್ದಾರೆ. ನಿಮ್ಮ ಪರ ನಾವು ನಿಲ್ಲುತ್ತೇವೆ ಎನ್ನುತ್ತಿದ್ದಾರೆ. ಅಂತಹ ಸಂದರ್ಭ ಬಂದಾಗ ನಿಮಗೆ ಹೇಳುತ್ತೇನೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ