ದರ್ಶನ್​​ಗೆ ಗುರುವಾರದ ತನಕ ರಿಲೀಫ್; ಸುಪ್ರೀಂ ಕೋರ್ಟ್​ನ ಇವತ್ತಿನ ವಿಚಾರಣೆಯಲ್ಲಿ ಏನಾಯ್ತು..?

author-image
Ganesh
Updated On
ದರ್ಶನ್ ಫ್ಯಾನ್ಸ್​ಗೆ ಗುಡ್​ನ್ಯೂಸ್​.. ಚಾಲೆಂಜಿಂಗ್ ಸ್ಟಾರ್​ ಫಾರಿನ್​ಗೆ ಹೋಗಬಹುದು
Advertisment
  • ದರ್ಶನ್ ಬೇಲ್ ರದ್ದು ಕೋರಿದ ಅರ್ಜಿ ವಿಚಾರಣೆ ಮುಂದೂಡಿಕೆ
  • ವಕೀಲ ಕಪಿಲ್ ಸಿಬಲ್ ಬದಲಿಗೆ ಸಿದ್ದಾರ್ಥ್ ದಾವೆ ಹಾಜರು
  • ಗುರುವಾರ ನಿರ್ಧಾರವಾಗಲಿದೆ ದರ್ಶನ್ ‘ಬೇಲ್’ ಭವಿಷ್ಯ

ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಬೇಲ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್​ ಗುರುವಾರಕ್ಕೆ ಮುಂದೂಡಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಗುರುವಾರದ ತನಕ ನಟನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ವಕೀಲ ಕಪಿಲ್ ಸಿಬಲ್ ಬದಲಿಗೆ ಸಿದ್ದಾರ್ಥ್ ದಾವೆ ವಾದ ಮಂಡಿಸಲು ಕೋರ್ಟ್​ಗೆ ಹಾಜರಿದ್ದರು. ವಿಚಾರಣೆ ಆರಂಭವಾಗುತ್ತಿದ್ದಂತೆಯೇ, ಸಿದ್ದಾರ್ಥ್ ದಾವೆ ಅವರು ವಾದ ಮಾಡಲು ಕಾಲಾವಕಾಶ ಕೇಳಿದ್ದಾರೆ. ಹೀಗಾಗಿ ಗುರುವಾರದ ವರೆಗೆ ಕೋರ್ಟ್​​, ಸಮಯ ನೀಡಿದೆ. ಜುಲೈ 24 ರಂದು ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.

ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ಹಾಗೂ ನ್ಯಾಯಮೂರ್ತಿ ಮಹದೇವನ್ ನೇತೃತ್ವದ ದ್ವಿಸದಸ್ಯ ಪೀಠವು ಇವತ್ತು ವಿಚಾರಣೆ ಮುಂದುವರಿಸಲಿದೆ. ಈಗಾಗಲೇ ಸರ್ಕಾರಿ ಪರ ವಕೀಲರ ವಾದ ಮುಗಿದಿದ್ದು, ದರ್ಶನ್ ಪರ ಖ್ಯಾತ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಬೇಕಿತ್ತು.

ಇದನ್ನೂ ಓದಿ: ನಟ ದರ್ಶನ್ ಪಾಲಿಗೆ ಇವತ್ತು ಬಿಗ್​ ಡೇ.. ಮೊನ್ನೆ ನಡೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್​ ಹೇಳಿದ್ದೇನು?

publive-image

ಸುಪ್ರೀಂ ಕೋರ್ಟ್​ನಲ್ಲಿ ಕಳೆದ ವಾರ ನಡೆದ ವಿಚಾರಣೆ ವೇಳೆ ಹೈಕೋರ್ಟ್​ ತೀರ್ಪಿನ ಬಗ್ಗೆ ಬೇಸರ ವ್ಯಕ್ತಪಡಿಸಿದೆ. ನಮಗೆ ಪೊಲೀಸರು ನೀಡಿರುವ ಸಾಕ್ಷ್ಯಗಳು ತೃಪ್ತಿ ತಂದಿವೆ. ಆದ್ರೆ ಜಾಮೀನು​ ನೀಡಲು ಹೈಕೋರ್ಟ್ ನೀಡಿರುವ ಕಾರಣಗಳು ಸಮಂಜಸವಾಗಿಲ್ಲ. ಹೈಕೋರ್ಟ್ ಆದೇಶದಲ್ಲಿ ಚಡಪಡಿಕೆ ಎದ್ದು ಕಾಣುತ್ತಿದೆ. ಬೇಲ್​ ನೀಡಲು ಯಾವುದಾದ್ರೂ ಒಂದು ಅಂಶ ಸಿಗಲಿ ಎನ್ನುವ ಚಡಪಡಿಕೆ ಕಾಣುತ್ತಿದೆ. ಈ ವಿಷ್ಯದಲ್ಲಿ ಹೈಕೋರ್ಟ್ ತನ್ನ ವಿವೇಚನೆ ಸೂಕ್ತವಾಗಿ ಬಳಸಿಲ್ಲ.. ಆದ್ದರಿಂದ ನಟ ದರ್ಶನ್​ ಅವರ ​ ಜಾಮೀನಿನ ವಿಷ್ಯದಲ್ಲಿ ನಾವೇಕೆ ಮಧ್ಯಪ್ರವೇಶ ಮಾಡಬಾರದೆಂದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಾಗಿ ದರ್ಶನ್ ಜಾಮೀನು ಭವಿಷ್ಯ ತುಂಬಾನೇ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಮಕ್ಕಳಿಗೆ ಬೇಕರಿ ಫುಡ್ ಕೊಡುವ ಮುನ್ನ ಇರಲಿ ಎಚ್ಚರ.. ಮಂಡ್ಯದಲ್ಲಿ ಏನಾಗಿದೆ ನೋಡಿ..

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment