ದರ್ಶನ್​ಗೆ ನಾಳೆ ಬಿಗ್​ ಡೇ.. ಸುಪ್ರೀಂಕೋರ್ಟ್ ನಿರ್ಧಾರದ ಮೇಲೆ ನಟನ ಜಾಮೀನು​​ ಭವಿಷ್ಯ

author-image
Bheemappa
Updated On
ನಟ ದರ್ಶನ್ ಪಾಲಿಗೆ ಇವತ್ತು ಬಿಗ್​ ಡೇ.. ಮೊನ್ನೆ ನಡೆದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್​ ಹೇಳಿದ್ದೇನು?
Advertisment
  • ದರ್ಶನ್ ಪರ ವಕೀಲರಿಗೆ ಪ್ರಶ್ನೆ ಮಾಡಿರುವ ಸುಪ್ರೀಂಕೋರ್ಟ್
  • ಜೈಲಲ್ಲಿ ಮಾಡಿರುವ ಬೇರೆ ಚಟುವಟಿಕೆಗಳ ಬಗ್ಗೆಯೂ ದಾಖಲೆ
  • ಪೊಲೀಸರು ನೀಡಿರುವ ಸಾಕ್ಷ್ಯಗಳು ತೃಪ್ತಿ ತಂದಿವೆ- ಕೋರ್ಟ್​​

ಸುಪ್ರೀಂಕೋರ್ಟ್​ನಲ್ಲಿ ನಾಳೆ ( ಜುಲೈ 22) ನಟ ದರ್ಶನ್ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಯಲಿದೆ. ನಟ ದರ್ಶನ್ ಮತ್ತೆ ಜೈಲು ಪಾಲಾಗ್ತಾರಾ ಇಲ್ಲವೇ ಹೈಕೋರ್ಟ್ ಕೊಟ್ಟಿರುವ ಜಾಮೀನು ಮುಂದುವರಿಯುತ್ತಾ ಅನ್ನೋದು ಸುಪ್ರೀಂಕೋರ್ಟ್ ನೀಡುವ ಆದೇಶವನ್ನು ಅವಲಂಬಿಸಿದೆ.

ಸುಪ್ರೀಂಕೋರ್ಟ್, ಹೈಕೋರ್ಟ್ ನೀಡಿರುವ ಜಾಮೀನು ಅನ್ನು ರದ್ದುಪಡಿಸಿದರೇ, ನಟ ದರ್ಶನ್ ಮತ್ತೆ ಜೈಲು ಪಾಲಾಗಬೇಕಾಗುತ್ತೆ. ಸುಪ್ರೀಂಕೋರ್ಟ್​ನಲ್ಲಿ ಕಳೆದ ವಾರ ನಡೆದ ವಿಚಾರಣೆ ವೇಳೆ, ನಮಗೆ ಪೊಲೀಸರು ನೀಡಿರುವ ಸಾಕ್ಷ್ಯಗಳು ತೃಪ್ತಿ ತಂದಿವೆ ಎಂದು ಸುಪ್ರೀಂಕೋರ್ಟ್ ಹೇಳಿತ್ತು. ಜೊತೆಗೆ ಹೈಕೋರ್ಟ್ ಜಾಮೀನು ನೀಡಲು ನೀಡಿರುವ ಕಾರಣಗಳು ಸಮಂಜಸವಾಗಿಲ್ಲ. ಹೈಕೋರ್ಟ್ ತನ್ನ ವಿವೇಚನೆ ಸೂಕ್ತವಾಗಿ ಬಳಸಿಲ್ಲ ಎಂದು ಹೈಕೋರ್ಟ್ ಆದೇಶದ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಹೈಕೋರ್ಟ್ ನಟ ದರ್ಶನ್​ಗೆ ನೀಡಿರುವ ಜಾಮೀನಿನ ವಿಷಯದಲ್ಲಿ ನಾವೇಕೆ ಮಧ್ಯಪ್ರವೇಶ ಮಾಡಬಾರದೆಂದು ಹೇಳಿ ಎಂದು ದರ್ಶನ್ ಪರ ವಕೀಲ ಕಪಿಲ್ ಸಿಬಲ್​ಗೆ ಸುಪ್ರೀಂಕೋರ್ಟ್ ಪ್ರಶ್ನಿಸಿತ್ತು.

ಇದನ್ನೂ ಓದಿ:ಕೇರಳ ಮಾಜಿ ಸಿಎಂ V.S. ಅಚ್ಯುತಾನಂದನ್ ನಿಧನ.. ಸಾಮಾನ್ಯ ಟೈಲರ್​ ಮುಖ್ಯಮಂತ್ರಿ ಆಗಿದ್ದೇ ರೋಚಕ

publive-image

ಜಾಮೀನು ನೀಡುವಾಗ ಹೈಕೋರ್ಟ್‌ ತನ್ನ ವಿವೇಚನೆಯನ್ನ ಸೂಕ್ತವಾಗಿ ಬಳಸಿಲ್ಲ ಎಂದು ನ್ಯಾ. ಪರ್ದಿವಾಲಾ ಆಕ್ಷೇಪಿಸಿದ್ದರು. ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್‌ ಪರ ಹಿರಿಯ ವಕೀಲ ಕಪಿಲ್‌ ಸಿಬಲ್‌ಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿತು. ಹೈಕೋರ್ಟ್‌ ಆದೇಶವನ್ನು ಹೇಗೆ ನೀಡಿದೆ ಎನ್ನುವುದನ್ನು ನೀವು ಗಮನಿಸಿರಬಹುದು ಎಂದು ಸಿಬಲ್‌ ಅವರಿಗೆ ಸುಪ್ರೀಂ ಕೋರ್ಟ್ ಹೇಳಿದೆ. ಈ ಮೂಲಕ ಹೈಕೋರ್ಟ್, ನಟ ದರ್ಶನ್ ಹಾಗೂ ಉಳಿದವರಿಗೆ ಜಾಮೀನು ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಅತೃಪ್ತಿ, ಅಸಮಾಧಾನ ವ್ಯಕ್ತಪಡಿಸಿದೆ.

ಸರ್ಕಾರಿ ವಕೀಲ ಅನಿಲ್ ನಿಶಾನಿ ಅವರು, ನಾವು ಸುಪ್ರೀಂ ಕೋರ್ಟ್​ಗೆ ಕೊಟ್ಟಿರುವ ದಾಖಲೆಯನ್ನು ಕೋರ್ಟ್ ಪರಿಶೀಲನೆ ಮಾಡಿದೆ. ದರ್ಶನ್ ಅವರ ಇತರೆ ಕ್ರೈಮ್​ಗಳ ಬಗ್ಗೆಯೂ ದಾಖಲೆ ನೀಡಿದ್ದೇವೆ. ಜೊತೆಗೆ ಜೈಲಿನಲ್ಲಿ ಮಾಡಿರುವ ಬೇರೆ ಚಟುವಟಿಕೆಗಳ ಬಗ್ಗೆಯೂ ದಾಖಲೆ ಕೊಟ್ಟಿದ್ದೇವೆ. ಹೈಕೋರ್ಟ್ ಬೇಲ್ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಹೇಳಿದ್ದರು.

ಹೀಗಾಗಿ ಸುಪ್ರೀಂಕೋರ್ಟ್​ನಲ್ಲಿ ಜುಲೈ 22ರ ಮಂಗಳವಾರ ನಡೆಯುವ ಜಾಮೀನು ಅರ್ಜಿಯ ಮೇಲ್ಮನವಿ ವಿಚಾರಣೆಯು ನಟ ದರ್ಶನ್ ಪಾಲಿಗೆ ಮಹತ್ವದ್ದು. ದರ್ಶನ್, ಸದ್ಯ ಥೈಲ್ಯಾಂಡ್​ನಲ್ಲಿ ಡೆವಿಲ್ ಸಿನಿಮಾದ ಶೂಟಿಂಗ್​ನಲ್ಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment